ಆ್ಯಪ್ನಗರ

ಕೇದಾರನಾಥದಲ್ಲಿ ಹೆಲಿಕಾಪ್ಟರ್‌ ಅಪಘಾತ : ಕೂದಲೆಳೆ ಅಂತರದಲ್ಲಿ ಪಾರಾದ 6 ಪ್ರಯಾಣಿಕರು

ಹಿಂದುಗಳಿಗೆ ಪವಿತ್ರ ತಾಣವಾದ ಕೇದಾರನಾಥದಲ್ಲಿ ಸೋಮವಾರ ಹೆಲಿಕಾಪ್ಟರ್‌ ಒಂದು ಅಪಘಾತಕ್ಕೆ ಈಡಾಗಿದೆ. ಅದರಲ್ಲಿದ್ದ 6 ಜನ ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಅಪಘಾತದ ಕುರಿತು ತನಿಖೆಗೆ ಆದೇಶಿಸಲಾಗಿದೆ.

TIMESOFINDIA.COM 23 Sep 2019, 5:11 pm
ಕೇದಾರನಾಥ: ಹೆಲಿಕಾಪ್ಟರ್‌ ಲ್ಯಾಂಡ್‌ ಆಗುವ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಅದರೊಳಗಿದ್ದ 6 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅಪಘಾತದ ಬಗ್ಗೆ ತನಿಕೆಗೆ ಆದೇಶಿಸಲಾಗಿದೆ. ಹೆಲಿಕಾಪ್ಟರ್‌ ಇಳಿಯುವಾದ ಹೆಲಿಕಾಪ್ಟರ್‌ ಬಾಲದ ರೌಟರ್‌ ಜಖಂಗೊಂಡಿದೆ. ಯಾರೊಬ್ಬರಿಗೂ ಪ್ರಾಣಾಪಾಯ ಇಲ್ಲದೆ ಪಾರಾಗಿದ್ದಾರೆ. ಹೆಲಿಕಾಪ್ಟರ್‌ನಲ್ಲಿ 6ಜನ ಪ್ರಯಾಣಿಕರು ಹಾಗೂ ಒಬ್ಬ ಪೈಲಟ್‌ ಸೇರಿ ಒಟ್ಟು 7 ಜನರಿದ್ದರು.
Vijaya Karnataka Web helicopter


ಸೇನೆಯ ಹಳೆ ಹೆಲಿಕಾಪ್ಟರ್‌ಗಳಿಗೆ ಮುಕ್ತಿ, ಎಚ್‌ಎಎಲ್‌ ಹೊಸ ಚಾಪರ್‌ ಪರೀಕ್ಷೆ ಯಶಸ್ವೀ

ಕೇದಾರನಾಥ ಇದು ಹಿಂದುಗಳಿಗೆ ಪವಿತ್ರವಾದ ದೇವಾಲಯ. ಇದು ಹಿಮಾಲಯ ಪರ್ವತ ಶ್ರೇಣಿಯಲ್ಲಿ ಉತ್ತರಾಖಂಡ ರಾಜ್ಯದ ಚಮೋಲಿ (ಉತ್ತರಕಾಶಿ) ಜಿಲ್ಲೆಯಲ್ಲಿ ಮಂದಾಕಿನಿ ನದಿಯ ದಂಡೆಯ ಮೇಲಿರುವ ಶಿವನ ದೇವಾಲಯ. ಸುಮಾರು ೩೫೬೪ ಮೀಟರ್ ಎತ್ತರದಲ್ಲಿರುವ ಈ ಸ್ಥಳದ ವಿಪರೀತ ಚಳಿಯ ವಾತಾವರಣದಿಂದಾಗಿ ದೇವಾಲಯವು ಕೇವಲ ಏಪ್ರಿಲ್ ಕೊನೆಯ ಭಾಗದಿಂದ ನವೆಂಬರ್ ಮೊದಲ ವಾರದವರೆಗೆ ಮಾತ್ರ ಭಕ್ತಾದಿಗಳ ದರ್ಶನಕ್ಕೆ ಮುಕ್ತವಾಗಿರುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ