ಆ್ಯಪ್ನಗರ

ಮೋದಿ ರ‍್ಯಾಲಿಗೆ ಜನ ಕರೆತರಲು 7 ಕೋಟಿ ರೂ.

ಮುಂಬರುವ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳಿಂದ ತೀವ್ರ ಸ್ಪರ್ಧೆ ಎದುರಿಸುತ್ತಿರುವ ಆಡಳಿತಾರೂಢ ಬಿಜೆಪಿ ಸರಕಾರವು ಪ್ರಧಾನಿ ಮೋದಿ ಅವರ ವರ್ಚಸ್ಸು ಬಳಸಿಕೊಂಡು ಪ್ರಚಾರಾಂದೋಲನಕ್ಕೆ ಸಿದ್ಧತೆ ನಡೆಸಿದೆ.

Vijaya Karnataka 7 Jul 2018, 10:00 am
ಜೈಪುರ: ಮುಂಬರುವ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳಿಂದ ತೀವ್ರ ಸ್ಪರ್ಧೆ ಎದುರಿಸುತ್ತಿರುವ ಆಡಳಿತಾರೂಢ ಬಿಜೆಪಿ ಸರಕಾರವು ಪ್ರಧಾನಿ ಮೋದಿ ಅವರ ವರ್ಚಸ್ಸು ಬಳಸಿಕೊಂಡು ಪ್ರಚಾರಾಂದೋಲನಕ್ಕೆ ಸಿದ್ಧತೆ ನಡೆಸಿದೆ. ಮೋದಿ ಅವರು ಶನಿವಾರ ಜೈಪುರದಲ್ಲಿ ನಡೆಸುವ ಸಾರ್ವಜನಿಕ ಸಮಾವೇಶದೊಂದಿಗೆ ಇದಕ್ಕೆ ಚಾಲನೆ ದೊರೆಯಲಿದೆ. ಸಮಾವೇಶಕ್ಕೆ ಜನರನ್ನು ಕರೆತರಲು ಸರಕಾರ ಬರೋಬ್ಬರಿ 7 ಕೋಟಿ ರೂ. ವಿನಿಯೋಗಿಸುತ್ತಿದೆ ಎಂದು ಮೂಲಗಳು ಹೇಳಿವೆ.
Vijaya Karnataka Web modi


ಕೇಂದ್ರ ಸರಕಾರದ 12 ಸಾಮಾಜಿಕ ಕಲ್ಯಾಣ ಯೋಜನೆಗಳ 2.5 ಲಕ್ಷ ಫಲಾನುಭವಿಗಳನ್ನು 33 ಜಿಲ್ಲೆಗಳಿಂದ 5500ಕ್ಕೂ ಹೆಚ್ಚಿನ ಬಸ್‌ಗಳ ಮೂಲಕ ಸಮಾವೇಶಕ್ಕೆ ಕರೆತರುವ ಗುರಿಯನ್ನು ಸರಕಾರ ಹಾಕಿಕೊಂಡಿದೆ. ಬಸ್‌ ಬಾಧಿಡಿಧಿಗೆಧಿಗೇ 7 ಕೋಟಿ ರೂ. ವಿನಿಯೋಗಿಸಲಾಗುತ್ತಿದೆ. ಇದರಲ್ಲಿ ಬಹುತೇಕ ಮೊತ್ತವು ಯೋಜನೆಗಳಿಗೆ ನಿಗದಿಗೊಳಿಸಲಾಗಿರುವ ಅನುದಾನದಿಂದಲೇ ಬಳಕೆಯಾಗಿದೆ ಎಂದು ಮೂಲಗಳು ಹೇಳಿವೆ. ಇದು ಮುಂದಿನ ದಿನಗಳಲ್ಲಿ ಪ್ರತಿಪಕ್ಷಗಳಿಗೆ ಅಸ್ತ್ರವಾಗುವ ಸಾಧ್ಯತೆ ಇದೆ. ಈ ಮಧ್ಯೆ ಜೈಪುರದಲ್ಲಿ ಭದ್ರತೆಯನ್ನು ದುಪ್ಪಟ್ಟುಗೊಳಿಸಲಾಗಿದ್ದು, ಆಯಕಟ್ಟಿನ ಸ್ಥಳಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ಹೇಳಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ