ಆ್ಯಪ್ನಗರ

ಯುಪಿ: ಒಂದೇ ಕುಟುಂಬದ 6 ಮಹಿಳೆಯರು-2 ಮಕ್ಕಳು ಭೀಕರ ಅಪಘಾತದಲ್ಲಿ ಸಾವು, ಕಾರಿನ ಮೇಲೆ ಬಿದ್ದ ಲಾರಿ!

ಆರು ಮಹಿಳೆಯರು, ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ಒಟ್ಟು ಎಂಟು ಮಂದಿ ಭೀಕರ ಅಪಘಾತದಲ್ಲಿ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮರಳು ತುಂಬಿದ ಲಾರಿಯ ಚಕ್ರ ಬ್ಲಾಸ್ಟ್‌ ಆಗಿದ್ದರಿಂದ ಕಾರಿನ ಮೇಲೆ ಲಾರಿ ಬಿದ್ದಿದೆ. ಇವರೆಲ್ಲ ಮದುವೆ ಕಾರ್ಯಕ್ರಮಕ್ಕೆ ಹೋಗಿ ವಾಪಸ್‌ ಆಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.

Vijaya Karnataka Web 2 Dec 2020, 12:34 pm
ಲಖನೌ: ಮರಳು ತುಂಬಿದ್ದ ಲಾರಿಯೊಂದು ಕಾರಿನ ಮೇಲೆ ಉರುಳಿ ಬಿದ್ದು ಎಂಟು ಜನರು ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ನಡೆದಿದೆ. ಕಡಧಮ್ ಕೊಟ್ವಾಲಿಯ ದೇವಿಗಂಜ್‌ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು ಆರು ಮಹಿಳೆಯರು ಸೇರಿ ಎರಡು ಮಕ್ಕಳು ಸಾವನಪ್ಪಿದ್ದಾರೆ.
Vijaya Karnataka Web Kaushambi accident


ಪ್ರಕಾಶಿನಿ ಗುಪ್ತಾ(50), ರಿಚಾ ಗುಪ್ತಾ(28), ಪೂನಮ್‌ ಗುಪ್ತಾ(40) ಸೇರಿ ಒಟ್ಟು ಎಂಟು ಮಂದಿ ಮೃತಪಟ್ಟಿದ್ದು, ಇವರೆಲ್ಲಾ ರಾತ್ರಿ ಮದುವೆ ಕಾರ್ಯಕ್ರಮಕ್ಕೆ ತೆರಳಿ ವಾಪಾಸಾಗುವ ವೇಳೆ ದುರ್ಘಟನೆ ನಡೆದಿದೆ. ಮದುವೆ ಕಾರ್ಯಕ್ರಮ ಮುಗಿಸಿ ಖುಷಿಯಿಂದಲೇ ಕಾರಿನಲ್ಲಿ ಇವರೆಲ್ಲ ಆಗಮಿಸುತ್ತಿದ್ದರು. ಈ ವೇಳೆ ರಸ್ತೆಯಲ್ಲಿ ಮರಳು ತುಂಬಿಸಿಕೊಂಡು ಯಮಧೂತನಂತೆ ಲಾರಿ ಬಂದಿದೆ. ಏಕಾಏಕಿ ಲಾರಿಯ ಚಕ್ರ ಒಡೆದು ಹೋಗಿದೆ. ಈ ವೇಳೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ನಂತರ ಅತ್ತ ಬರುತ್ತಿದ್ದ ಕಾರಿನ ಮೇಲೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುವುದಾಗಿ ತಿಳಿಸಿದ್ದಾರೆ. ಇನ್ನು ಇದೆ ವೇಳೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ. ಸಾವನಪ್ಪಿರುವ ಆತ್ಮಗಳಿಗೆ ಶಾಂತಿ ಸಿಗಲಿ, ಕುಟುಂಬಕ್ಕೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ 'ಮಿಷನ್ ಶಕ್ತಿ' ವಿಫಲ, ಸ್ತ್ರೀಯರ ಮೇಲಿನ ದೌರ್ಜನ್ಯ ಹೆಚ್ಚಳ: ಪ್ರಿಯಾಂಕಾ ಗಾಂಧಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ