ಆ್ಯಪ್ನಗರ

'ಯೋಗಿ' ರಾಜ್ಯದಲ್ಲಿ ಗೂಂಡಾಗಳ ಅಟ್ಟಹಾಸ; ಎಂಟು ಪೊಲೀಸರು ಹುತಾತ್ಮ..!

ಉತ್ತರಪ್ರದೇಶದಲ್ಲಿ ಗೂಂಡಾಗಳ ಅಟ್ಟಹಾಸ ಮಿತಿಮೀರಿದ್ದು ಇಂದು ಮಧ್ಯರಾತ್ರಿ ಪೊಲೀಸರ ಮೇಲೆ ರೌಡಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಎಂಟು ಪೊಲೀಸರು ಹುತಾತ್ಮರಾಗಿದ್ದಾರೆ. ಕುಖ್ಯಾತ ರೌಡಿ ಶೀಟರ್ ವಿಕಾಸ್ ದುಬೆಯನ್ನು ಬಂಧಿಸಲು ಹೋದಾಗ ಈ ಘಟನೆ ನಡೆದಿದ್ದು, ಇತರೆ ಏಳು ಪೊಲೀಸ್ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ANI 3 Jul 2020, 9:35 am
ಕಾನ್ಪುರ: ಉತ್ತರಪ್ರದೇಶದಲ್ಲಿ ರೌಡಿಗಳ ಅಟ್ಟಹಾಸಕ್ಕೆ ಎಂಟು ಮಂದಿ ಪೊಲೀಸರು ಹುತಾತ್ಮರಾಗಿದ್ದಾರೆ. ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ರೌಡಿಯೊಬ್ಬನನ್ನು ಶುಕ್ರವಾರ ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಪತ್ತೆ ಹಚ್ಚಲು ಹೋದಾಗ ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ ಸ್ಥಳದಲ್ಲೇ 8 ಪೊಲೀಸರು ಹುತಾತ್ಮರಾಗಿದ್ದಾರೆ.
Vijaya Karnataka Web UP 8 Police lost their lives


ಕಾನ್ಪುರದ ಚೌಬೇಪುರ್‌ನ ಬಿಕಾರು‌ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಇತರೆ ಏಳು ಮಂದಿ ಪೊಲೀಸರು ಗಾಯಗೊಂಡಿದ್ದಾರೆ. ರೌಡಿ ಶೀಟರ್‌ ವಿಕಾಸ್‌ ದುಬೆಯನ್ನು ಬಂಧಿಸಲು ಹೋಗಿದ್ದ ತಂಡದಲ್ಲಿ ಒಬ್ಬರು ಡಿಎಸ್‌ಪಿ, ಮೂವರು ಸಬ್‌ ಇನ್ಸ್‌ಪೆಕ್ಟರ್‌ ಸೇರಿದಂತೆ 15ಕ್ಕೂ ಹೆಚ್ಚು ಪೊಲೀಸ್‌ ಸಿಬ್ಬಂದಿ ಇದ್ದರು. ಅಲ್ಲದೇ ದಾಳಿ ವೇಳೆ ಎಎಸ್‌ಪಿ ಮತ್ತು ಪೊಲೀಸ್‌ ಮಹಾ ನಿರ್ದೇಶಕರು ಕೂಡ ಇದ್ದರು ಎನ್ನಲಾಗಿದೆ.

ಎನ್‌ಕೌಂಟರ್ ವೇಳೆ ಗುಂಡೇಟಿನಿಂದ 3 ವರ್ಷದ ಮಗುವಿನ ರಕ್ಷಣೆ: ತಾತ ಸಾವು!

ರೌಡಿಶೀಟರ್ ವಿಕಾಸ್ ದುಬೆಯ ಅಟ್ಟಹಾಸಕ್ಕೆ ಪ್ರಾಣತೆತ್ತ ಪೊಲೀಸರನ್ನು ಸಿಓ ದೇವೇಂದ್ರ ಕುಮಾರ್ ಮಿಶ್ರಾ, ಎಸ್‌ಒ ಮಹೇಶ್ ಯಾದವ್, ಚೌಕಿ ಉಸ್ತುವಾರಿ ಅನೂಪ್‌ ಕುಮಾರ್, ಸಬ್‌ ಇನ್ಸ್‌ಪೆಕ್ಟರ್‌ ನೆಬುಲಾಲ್ ಮತ್ತು ಕಾನ್ಸ್‌ಟೇಬಲ್‌ಗಳಾದ ಸುಲ್ತಾನ್ ಸಿಂಗ್, ರಾಹುಲ್, ಜಿತೇಂದ್ರ ಮತ್ತು ಬಬ್ಲು ಎಂದು ತಿಳಿದುಬಂದಿದೆ.

ಮಧ್ಯಪ್ರದೇಶದಲ್ಲಿ ಸಂಪುಟ ವಿಸ್ತರಣೆ ; ಶಿವರಾಜ್ ಸಿಂಗ್ ಟೀಂ ಸೇರಿದ 28 ಮಂದಿ ನೂತನ

ಈ ಸಂಬಂಧ ಮಾಹಿತಿ ನೀಡಿರುವ ಅಲ್ಲಿನ ಡಿಜಿಪಿ ಹೆಚ್.ಸಿ. ಅವಸ್ತಿ, ‘ನಮ್ಮ ತಂಡದವರು ವಿಕಾಸ್‌ ದುಬೆಯನ್ನು ಬಂಧಿಸಲು ಹೋಗಿದ್ದರು. ಈ ವೇಳೆ ನಮ್ಮ ವಾಹನಕ್ಕೆ ಜೆಸಿಬಿಯನ್ನು ಅಡ್ಡ ನಿಲ್ಲಿಸಲಾಯಿತು. ಇದು ನಮ್ಮ ಕಾರ್ಯಾಚರಣೆಗೆ ಅಡ್ಡಿಯಾಗಿದೆ. ಪೊಲೀಸರು ಗಾಡಿಯಿಂದ ಕೆಳಗೆ ಇಳಿಯುತ್ತಿದ್ದಂತೆ ಗುಂಡಿನ ದಾಳಿ ನಡೆಸಿದ್ದಾರೆ’ ಎಂದು ತಿಳಿಸಿದ್ದಾರೆ. ಅಲ್ಲದೇ ವಿಕಾಸ್ ದುಬೆ ವಿರುದ್ಧ ಸೆಕ್ಷನ್ 307 ದಾಖಲಿಸಲಾಗಿದ್ದು, ಅವನನ್ನು ಬಂಧಿಸುವ ಕಾರ್ಯಾಚರಣೆ ಮುಂದುವರಿದಿದೆ ಎಂದಿದ್ದಾರೆ.

ದ್ವೇಷದ ರಾಜಕಾರಣ: ಪ್ರಿಯಾಂಕಾ ಸರ್ಕಾರಿ ಬಂಗಲೆ ತೆರವು ಆದೇಶಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ!

ಪೊಲೀಸರು ಹುತಾತ್ಮರಾಗಿರುವ ಘಟನೆ ಬಗ್ಗೆ ಸುದ್ದಿ ತಿಳಿದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ, ಹುತಾತ್ಮ ಪೊಲೀಸರಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೇ ಡಿಜಿಪಿ ಅವರಲ್ಲಿ ಮಾತನಾಡಿ ಘಟನೆ ಬಗ್ಗೆ ವರದಿ ನೀಡುವಂತೆ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ