ಆ್ಯಪ್ನಗರ

ಕೊರೊನಾ ವಿರುದ್ಧದ ಹೋರಾಟದಲ್ಲಿ ಗೆದ್ದು ಬಂದ 90ರ ಅಜ್ಜ!

ಮಧ್ಯಪ್ರದೇಶದ ಇಂದೋರ್‌ನಲ್ಲಿ 90 ವಯಸ್ಸಿನ ಅಜ್ಜ ಕೊರೊನಾ ವಿರುದ್ಧದ ಹೋರಾಟದಲ್ಲಿ ಗೆದ್ದು ಬಂದಿದ್ದಾರೆ. ಸಂಪೂರ್ಣ ಗುಣಮುಖರಾಗಿದ್ದಾರೆ.

TIMESOFINDIA.COM 29 May 2020, 2:52 pm
ಇಂದೋರ್‌: ಕೊರೊನಾ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಕೊರೊನಾ ಸೋಂಕಿನಿಂದ ದಿನ ನಿತ್ಯ ಸಾವು ಕೂಡ ಸಂಭವಿಸುತ್ತಿದೆ. ಇನ್ನು ದೇಶದಲ್ಲಿ ಸಾವನಪ್ಪುವವರ ಪೈಕಿ ವಯಸ್ಸಾದವರೇ ಹೆಚ್ಚಿನ ಸಂಖ್ಯೆಯಲ್ಲಿ ಸಾವನಪ್ಪುತ್ತಿದ್ದಾರೆ.
Vijaya Karnataka Web 76066244


ಆದ್ರೆ 90ರ ಅಜ್ಜರೊಬ್ಬರು ಕೊರೊನಾ ವಿರುದ್ಧದ ಹೋರಾಟದಲ್ಲಿ ಗೆದ್ದು ಎಲ್ಲರಿಗೂ ಮಾದರಿಯಾಗಿದ್ದಾರೆ. ಈ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದ್ದು, ರಾಮೇಶ್ವರ್‌ ಚೌಧರಿ ಎಂಬವರು ಕೊರೊನಾ ಸೋಂಕು ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಇದೇ ತಿಂಗಳ 27ಕ್ಕೆ ಅವರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ಇನ್ನು ಗುಣಮುಖರಾಗಿ ಬಂದ ತಾತನಿಗೆ ಊರವರು ಹಾಗೂ ಸಂಬಂಧಿಕರು ಅದ್ದೂರಿ ಸ್ವಾಗತ ಕೋರಿದರು. ಮಕ್ಕಳು ರಾಮೇಶ್ವರ್‌ ಚೌಧರಿ ತಾತನಿಗೆ ಆರತಿ ಬೆಳಗಿ ಸ್ಚಾಗತಿಸಿದರು. ಚಿಕಿತ್ಸೆಗೆ ಅವರ ದೇಹ ಸ್ಪಂದಿಸಿದ್ದರಿಂದ ಅವರು ಗುಣಮುಖರಾದರು ಎಂದು ವೈದ್ಯರು ತಿಳಿಸಿದ್ದಾರೆ.

ನರ್ಸರಿ ಮಕ್ಕಳಿಗೆ ಆನ್‌ ಲೈನ್‌ ಶಿಕ್ಷಣ ನೀಡಲು ಸಾಧ್ಯವಿಲ್ಲ: ಶಿಕ್ಷಣ ಸಚಿವ ಸುರೇಶ್‌ ಕುಮಾರ್


ದೇಶದಲ್ಲಿ ಕೊರೊನಾ ಸೋಂಕಿನಿಂದ 50 ವರ್ಷ ಮೀರಿದವರೇ ಹೆಚ್ಚಿನ ಸಂಖ್ಯೆಯಲ್ಲಿ ಸಾಯುತ್ತಿದ್ದಾರೆ. ವಯಸ್ಸಾದವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತೆ. ಅಲ್ಲದೇ ಅವರಿಗೆ ಬೇರೆ ಕಾಯಿಲೆ ಇರುವ ಕಾರಣ ಚಿಕಿತ್ಸೆಗೆ ಅವರ ದೇಹ ಸ್ಪಂದಿಸುವುದಿಲ್ಲ ಎಂದು ವೈದ್ಯರುಗಳ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ