ಆ್ಯಪ್ನಗರ

ಪಾಸ್ ತೋರಿಸಿ ಎಂದ ಪೊಲೀಸ್ ಅಧಿಕಾರಿ: ಕೈ ಕತ್ತರಿಸಿ ಓಡಿ ಹೋದ ದುರುಳರು!

ಲಾಕ್‌ಡೌನ್ ಆದೇಶ ಉಲ್ಲಂಘಿಸಿ ಕಾರಿನಲ್ಲಿ ಅಲೆದಾಡುತ್ತಿದ್ದ ನಿಹಂಗ್‌ರ ಗುಂಪನ್ನು ತಡೆದ ಪೊಲೀಸರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿರುವ ದುರುಳರ ಗುಂಪು, ಓರ್ವ ಎಎಸ್‌ಐ ಕೈ ಕತ್ತರಿಸಿ ಪರಾರಿಯಾಗಿರುವ ಘಟನೆ ಪಂಜಾಬ್‌ನ ಪಟಿಯಾಲಾದಲ್ಲಿ ನಡೆದಿದೆ.

Vijaya Karnataka Web 12 Apr 2020, 2:26 pm
ಪಟಿಯಾಲಾ: ಲಾಕ್‌ಡೌನ್ ವೇಳೆ ಮನೆಯಿಂದ ಹೊರಬಂದ ಗುಂಪೊಂದನ್ನು ತಡೆದ ಪೊಲೀಸರು, ಪಾಸ್ ತೋರಿಸಲು ಕೇಳಿದಾಗ ದುರುಳರ ಗುಂಪು ಪೊಲೀಸ್ ಅಧಿಕಾರಿಯೊಬ್ಬರ ಕೈ ಕತ್ತರಿಸಿ ಉಳಿದವರ ಮೇಲೆ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಪಂಜಾಬ್‌ನಲ್ಲಿ ನಡೆದಿದೆ.
Vijaya Karnataka Web Nihangs Attack
ನಿಹಂಗ್‌ರ್ ಗುಂಪೊಂದು ಪೊಲೀಸರ ಮೇಲೆ ಭೀಕರವಾಗಿ ದಾಳಿ ಮಾಡಿ ಪರಾರಿಯಾಗಿರುವ ಘಠನೆ ಪಂಜಾಬ್‌ನ ಪಟಿಯಾಲಾದಲ್ಲಿ ನಡೆದಿದೆ.


ನಿಹಂಗ್ ಎಂದು ಕರೆಯಲ್ಪಡುವ ಸಿಖ್ ಧರ್ಮೀಯರ ಗುಂಪೊಂದು, ಪೊಲೀಸ್ ಚೆಕ್ ಪೋಸ್ಟ್‌ನ್ನು ಮೀರಿ ಮುನ್ನುಗ್ಗಲು ಯತ್ನಿಸಿತ್ತು. ಈ ವೇಳೆ ಕಾರನ್ನು ತಡೆದ ಪೊಲೀಸರು ಪಾಸ್ ತೋರಿಸಲು ಕೇಳಿದಾಗ ಖಡ್ಗಗಳಿಂದ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದಾರೆ.


ವೈದ್ಯಕೀಯ ಸಿಬ್ಬಂದಿ ಮೇಲೆ ಗುಂಪು ಹಲ್ಲೆ: ಪ್ರಾಣ ಉಳಿಸಿಕೊಳ್ಳಲು ಓಡಿದ 'ದೇವತಾ ಮನುಷ್ಯರು'!

ಈ ಭೀಕರ ದಾಳಿಯಲ್ಲಿ ಓರ್ವ ಎಎಸ್‌ಐ ಅವರ ಕೈ ಕತ್ತರಿಸಿ ಹೋಗಿದ್ದು, ಉಳಿದಿಬ್ಬರು ಅಧಿಕಾರಿಗಳೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಂದೀಪ್ ಸಿಂಗ್, ಹಲ್ಲೆಗೊಳಗಾದ ಅಧಿಕಾರಿಗಳನ್ನು ರಾಜೀಂದ್ರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಕರ್ತವ್ಯನಿರತ ಪೊಲೀಸ್ ಅಧಿಕಾರಿಗಳ ಮೇಲೆ ಕಾರಿನಲ್ಲಿ ಬಂದ ನಾಲ್ಕೈದು ನಿಹಂಗ್‌ರು, ಮಾರಕಾಸ್ತ್ರಗಳಿಂದ ಭೀಕರವಾಗಿ ದಾಳಿ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದಾಳಿಯಲ್ಲಿ ಎಎಸ್‌ಐ ಹರ್ಜಿತ್ ಸಿಂಗ್ ಅವರ ಕೈ ಕತ್ತರಿಸಿ ಹೋಗಿದೆ.


ಕೊರೊನಾ ಮಾಹಿತಿ ಸಂಗ್ರಹಕ್ಕೆ ತೆರಳಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಬೆಂಗಳೂರಿನಲ್ಲಿ ಹಲ್ಲೆ!

ಇನ್ನು ಘಟನೆಗೆ ತೀವ್ರ ಖೇದ ವ್ಯಕ್ತಪಡಿಸಿರುವ ಪಂಜಾಬ್ ಪೊಲೀಸ್ ಮಹಾ ನಿರ್ದೇಶಕ ದಿನಕರ್ ಗುಪ್ತಾ, ಘಟನೆಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು, ಪರಾರಿಯಾಗಿರುವ ಉಳಿದ ಮೂವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ