ಆ್ಯಪ್ನಗರ

ದಿಲ್ಲಿಯಲ್ಲಿ ಫೆ.13ಕ್ಕೆ ಆಪ್‌ ಮೆಗಾ ರಾರ‍ಯಲಿ

ನಿರಂಕುಶ ಆಡಳಿತ ತೊಲಗಿಸಿ, ಪ್ರಜಾಪ್ರಭುತ್ವ ಉಳಿಸಿ, ಹೆಸರಿನಲ್ಲಿ ಜಂತರ್‌ ಮಂತರ್‌ನಲ್ಲಿ ನಡೆಯಲಿರುವ ರಾರ‍ಯಲಿಯಲ್ಲಿ ಎಲ್ಲಾ ಪ್ರತಿಪಕ್ಷಗಳ ಮುಖಂಡರೂ ಭಾಗವಹಿಸಲಿದ್ದಾರೆ ಎಂದು ಆಪ್‌ ನಾಯಕ ಗೋಪಾಲ್‌ ರಾಯ್‌ ಹೇಳಿದ್ದಾರೆ.

Vijaya Karnataka 11 Feb 2019, 5:00 am
ಹೊಸದಿಲ್ಲಿ: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಬಿಜೆಪಿಯೇತರ ಪಕ್ಷಗಳ ಮೆಗಾ ರಾರ‍ಯಲಿ ದಿಲ್ಲಿಯಲ್ಲಿ ಫೆ.13ಕ್ಕೆ ನಡೆಯಲಿದೆ. ಲೋಕಸಭೆ ಚುನಾವಣೆ ಸಿದ್ಧತೆಯ ಭಾಗವಾಗಿ ದಿಲ್ಲಿಯ ಆಡಳಿತಾರೂಢ ಆಮ್‌ ಆದ್ಮಿ ಪಕ್ಷ ಈ ರಾರ‍ಯಲಿಯನ್ನು ಆಯೋಜಿಸಿದೆ. ಆದರೆ, ಕಾಂಗ್ರೆಸ್‌ ಮುಖಂಡರು ರಾರ‍ಯಲಿಯಲ್ಲಿ ಭಾಗವಹಿಸುವುದು ಅನುಮಾನ. ''ನಿರಂಕುಶ ಆಡಳಿತ ತೊಲಗಿಸಿ, ಪ್ರಜಾಪ್ರಭುತ್ವ ಉಳಿಸಿ,'' ಹೆಸರಿನಲ್ಲಿ ಜಂತರ್‌ ಮಂತರ್‌ನಲ್ಲಿ ನಡೆಯಲಿರುವ ರಾರ‍ಯಲಿಯಲ್ಲಿ ಎಲ್ಲಾ ಪ್ರತಿಪಕ್ಷಗಳ ಮುಖಂಡರೂ ಭಾಗವಹಿಸಲಿದ್ದಾರೆ ಎಂದು ಆಪ್‌ ನಾಯಕ ಗೋಪಾಲ್‌ ರಾಯ್‌ ಹೇಳಿದ್ದಾರೆ. ಕಳೆದ ತಿಂಗಳು ಕೋಲ್ಕೊತಾದಲ್ಲಿ ಪ.ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ಪ್ರತಿಪಕ್ಷಗಳ ಬೃಹತ್‌ ರಾರ‍ಯಲಿ ನಡೆದಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ