ಆ್ಯಪ್ನಗರ

ಎಬಿವಿಪಿ ಕಾರ್ಯಕರ್ತರಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ- ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆರೋಪ

ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ನಡೆದ ಹಲ್ಲೆಗೆ ಎಬಿವಿಪಿ ವಿದ್ಯಾರ್ಥಿಗಳು ಕಾರಣ ಎಂದು ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಗಂಭೀರ ಆರೋಪ ಮಾಡಿದ್ದಾರೆ. ಘಟನೆಯಲ್ಲಿ ಗಾಯಗೊಂಡಿದ್ದ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಪತ್ರಿಕಾಗೊಷ್ಠಿ ನಡೆಸಿದ್ದಾರೆ.

Vijaya Karnataka Web 6 Jan 2020, 6:59 pm
ಹೊಸದೆಹಲಿ: ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರಿಂದ ಭಾನುವಾರ ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆದಿದೆ ಎಂದು ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯಿಷ್‌ ಘೋಷ್ ಗಂಭೀರ ಆರೋಪ ಮಾಡಿದ್ದಾರೆ. ದಾಳಿಯಿಂದ ಗಾಯಗೊಂಡಿರುವ ಘೋಷ್ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು. ಸೋಮವಾರ ದೆಹಲಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಪ್ರಕರಣದ ಕುರಿತಾಗಿ ಮಾಹಿತಿ ನೀಡಿದರು.
Vijaya Karnataka Web abvp activist attacked us says jnsu president aishe ghosh
ಎಬಿವಿಪಿ ಕಾರ್ಯಕರ್ತರಿಂದ ವಿದ್ಯಾರ್ಥಿಗಳ ಮೇಲೆ ಹಲ್ಲೆ- ಜೆಎನ್‌ಯು ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆರೋಪ


ಭಾನುವಾರ ರಾತ್ರಿ ಕ್ಯಾಂಪಸ್‌ನಲ್ಲಿದ್ದ ವಿದ್ಯಾರ್ಥಿಗಳ ಮೇಲೆ ಎಬಿವಿಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಕೆಲವರು ಜೆಎನ್‌ಯು ವಿದ್ಯಾರ್ಥಿಗಳಾದರೆ ಕೆಲವರು ಹೊರಗಿನವರು ಕ್ಯಾಂಪಸ್‌ನೊಳಗಡೆ ಬಂದಿದ್ದರು. ಲೈಬ್ರೆರಿ ಕಡೆಗೆ ಹೋಗುತ್ತಿದ್ದ ವಿದ್ಯಾರ್ಥಿಗಳನ್ನು ತಡೆದು ಫೋನ್ ಕಿತ್ತುಕೊಂಡು ಹಲ್ಲೆ ನಡೆಸಿದ್ದಾರೆ.

Video: ಮುಸುಕುಧಾರಿಗಳು ಜೆಎನ್‌ಯು ಕ್ಯಾಂಪಸ್‌ನಲ್ಲಿ ಹಲ್ಲೆ ನಡೆಸಿದ್ದು ಹೇಗೆ ನೋಡಿ

ಘಟನೆ ಗಮನಕ್ಕೆ ಬಂದ ಕೂಡಲೇ ನಾವು ಪೊಲೀಸರಿಗೆ ಮಾಹಿತಿ ನೀಡಿದ್ದೇವೆ. ಸ್ಥಳೀಯ ಪೊಲೀಸ್ ಠಾಣೆಯ ಠಾಣಾಧಿಕಾರಿಗೆ ಮಾಹಿತಿ ನೀಡಿದ್ದೇವೆ. ಮೆಸೇಜ್ ಹಾಗೂ ವಾಟ್ಸಪ್‌ ಮೂಲಕ ವಿದ್ಯಾರ್ಥಿಗಳಿಗೆ ಮಾರಕಾಸ್ತ್ರಗಳನ್ನು ಹೊಂದಿರುವ ತಂಡದಿಂದ ದಾಳಿ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದೇವೆ.

ಬಳಿಕ ಪೋನ್ ನಲ್ಲಿ ಖುದ್ದಾಗಿ ಪೊಲೀಸ್ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಿದ್ದೇನೆ. ಆದರೆ ಯಾವುದೇ ಸಮಸ್ಯೆ ಇಲ್ಲ ಕ್ಯಾಂಪಸ್‌ ಒಳಗಡೆ ಬಂದಿದ್ದ ವಿದ್ಯಾರ್ಥಿಗಳನ್ನು ಅಲ್ಲಿಂದ ಹೊರಗಡೆ ಕಳಿಸಿದ್ದೇವೆ ಎಂಬ ಮಾಹಿತಿ ನೀಡಿದ್ದರು.

ಬೇರೆ ವಿವಿಗಳಲ್ಲಿ ಜರುಗದ ವಿವಾದ, ಜೆಎನ್‌ಯುನಲ್ಲಿ ಮಾತ್ರ ಏಕೆ? ಎಸ್‌. ಸುರೇಶ್‌ ಕುಮಾರ್‌

ಲಾಠಿ, ರಾಡ್‌ಗಳ ಜೊತೆಗೆ ಕ್ಯಾಂಪಸ್‌ನೊಳಗೆ ಬಂದ ಗುಂಪು ತಮ್ಮ ಮೇಲೆ ದಾಳಿ ನಡೆಸಿದೆ. ರಾಡ್‌ನಿಂದ ತಲೆಗೆ ಹೊಡೆದಿದ್ದಾರೆ. ಹಲ್ಲೆಯಿಂದ ನಾನು ಕೆಳಗಡೆ ಬಿದ್ದುಬಿಟ್ಟೆ. ಬಳಿಕ ಮುಸುಕುಧಾರಿಗಳು ಕೊಲೆ ಮಾಡುವ ಬೆದರಿಕೆ ಒಡ್ಡಿದರಷ್ಟೇ ಅಲ್ಲದೆ ಉಳಿದ ವಿದ್ಯಾರ್ಥಿಗಳಿಗೆ ಬೆದರಿಕೆ ಒಡ್ಡಿ ಅಲ್ಲಿಂದ ಓಡಿಸಿದ್ದಾರೆ ಎಂದು ಆರೋಪಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ