ಆ್ಯಪ್ನಗರ

ಮಂಬಯಿ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ: 4 ಸಾವು

ಮುಂಬಯಿ-ಪುಣೆ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ.

ಏಜೆನ್ಸೀಸ್ 10 Sep 2016, 6:04 pm
ಪುಣೆ: ಮುಂಬಯಿ-ಪುಣೆ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಶುಕ್ರವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಮೃತಪಟ್ಟಿದ್ದಾರೆ.
Vijaya Karnataka Web accident on mumbai pune expressway 4 dead
ಮಂಬಯಿ-ಪುಣೆ ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ: 4 ಸಾವು


ಕಾರು ಹಾಗೂ ಕಂಟೇನರ್ ಲಾರಿ ಮಧ್ಯೆ ಈ ಅಪಘಾತ ನಡೆದಿದೆ ಎಂದು ಲೋನಾವಲ ಪೊಲೀಸರು ತಿಳಿಸಿದ್ದಾರೆ. ಸ್ಯಾಂಟ್ರೋ ಕಾರು ಪುಣೆಯಿಂದ ಮುಂಬಯಿಯತ್ತ ತೆರಳುತ್ತಿತ್ತು.

ಎದುರಿನಿಂದ ಬರುತ್ತಿದ್ದ ಕಂಟೇನರ್ ಲಾರಿಗೆ ಕಾರು ಡಿಕ್ಕಿ ಹೊಡೆದು ನಾಲ್ಕು ಅಡಿ ಆಳದ ಹೊಂಡಕ್ಕೆ ಬಿತ್ತು. ಕಾರಿನಲ್ಲಿದ್ದ ನಾಲ್ವರು ಕೂಡ ಮೃತಪಟ್ಟಿರುವುದಾಗಿ ಮೂಲಗಳು ತಿಳಿಸಿವೆ.

ಮುಂಬಯಿ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ರಾಜೇಂದ್ರ ವಿಷ್ಣು ಚವಾಣ್, ಪತ್ನಿ ವನಿತಾ, ಶಂಕರ್ ಮಾರುತಿ ಹಾಗೂ ಪೂಜಾ ಎಂಬವರು ಮೃತಪಟ್ಟ ದುರ್ದೈವಿಗಳು.

ಈ ದುರ್ಘಟನೆಯು ಲೋನಾವಲ ಸಮೀಪದ ವಲ್ವನ್ ಮಹಾವಿದ್ಯಾಲಯದ ಸಮೀಪ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕಾಗಮಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ