ಹೊಸದಿಲ್ಲಿ: ಜೋಧಪುರದಲ್ಲಿ ಜಿಂಕೆಯನ್ನು ಬೇಟೆಯಾಡಿದ ಪ್ರಕರಣದಲ್ಲಿ ಚಿತ್ರನಟ ಸಲ್ಮಾನ್ ಖಾನ್ ಅವರನ್ನು ಖುಲಾಸೆಗೊಳಿಸಿದ ಆದೇಶವನ್ನು ಪ್ರಶ್ನಿಸಿ ರಾಜಸ್ತಾನ ಸರಕಾರ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಿಚಾರಣೆಗೆ ಅಂಗೀಕರಿಸಿದೆ. ನ್ಯಾಯಮೂರ್ತಿಗಳಾದ ಎ.ಕೆ.ಸಿಕ್ರಿ ಮತ್ತು ಆರ್.ಬಾನುಮತಿ ಅವರನ್ನೊಳಗೊಂಡ ನ್ಯಾಯಪೀಠ ಇದರ ವಿಚಾರಣೆ ನಡೆಸುತ್ತಿದ್ದು, ಪ್ರಕರಣದ ಶೀಘ್ರ ವಿಚಾರಣೆಗೂ ಸಮ್ಮತಿ ಸೂಚಿಸಿದೆ. ಈ ಸಂಬಂಧ ಸಲ್ಮಾನ್ ಖಾನ್ ಅವರಿಗೂ ನೋಟಿಸ್ ನೀಡಿ, ತಕ್ಷಣ ಪ್ರತಿಕ್ರಿಯೆ ನೀಡುವಂತೆ ಸೂಚಿಸಲಾಗಿದೆ. ರಾಜಸ್ತಾನದ ಹೈಕೋರ್ಟ್ ಸಲ್ಮಾನ್ ಖಾನ್ ಅವರನ್ನು ಖುಲಾಸೆಗೊಳಿಸಿ ತೀರ್ಪು ನೀಡಿತ್ತು.
ಸಲ್ಮಾನ್ ಖುಲಾಸೆ ವಿರುದ್ಧದ ಅರ್ಜಿ ವಿಚಾರಣೆಗೆ ಸುಪ್ರೀಂ ಅಸ್ತು
ಜೋಧಪುರದಲ್ಲಿ ಜಿಂಕೆಯನ್ನು ಬೇಟೆಯಾಡಿದ ಪ್ರಕರಣದಲ್ಲಿ ಚಿತ್ರನಟ ಸಲ್ಮಾನ್ ಖಾನ್ ಅವರನ್ನು ಖುಲಾಸೆಗೊಳಿಸಿದ ಆದೇಶವನ್ನು ಪ್ರಶ್ನಿಸಿ ರಾಜಸ್ತಾನ ಸರಕಾರ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಿಚಾರಣೆಗೆ ಅಂಗೀಕರಿಸಿದೆ.
ಏಜೆನ್ಸೀಸ್ 12 Nov 2016, 4:28 am