ನವದೆಹಲಿ: 74ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ಮೋದಿ ನವದೆಹಲಿಯ ಕೆಂಪುಕೋಟೆಯಿಂದ ಸತತ ಒಂದುವರೆ ಗಂಟೆಗೂ ಅಧಿಕ ಕಾಲ ದೇಶವನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ.
ಈ ವೇಳೆ ಆತ್ಮ ನಿರ್ಭರ ಭಾರತ ಅಭಿಯಾನಕ್ಕೆ ಜನತೆಯ ಸಹಕಾರ ಕೋರಿದ ಪ್ರಧಾನಿ ಮೋದಿ, 'ವೋಕಲ್ ಫಾಲ್ ಲೋಕಲ್' ಮಂತ್ರವನ್ನು ಅಳವಡಿಸಿಕೊಳ್ಳುವಂತೆ ದೇಶವಾಸಿಗಳಿಗೆ ಕರೆ ನೀಡಿದರು.
ಭಾರತವನ್ನು ಕೆಣಕಿದವರಿಗೆ ಸೂಕ್ತ ತಿರುಗೇಟು ನೀಡಲಾಗಿದೆ: ಮೋದಿ ಗುಡುಗು!
ಭಾರತ ಆತ್ಮ ನಿರ್ಭರ ದೇಶವಾಗಬೇಕು ಎಂಬುದು ಸಮಸ್ತ ಭಾರತೀಯರ ಕನಸು. ಈ ಕನಸನ್ನು ನನಸು ಮಾಡಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಸ್ವಾವಲಂಬನೆ ದೇಶದ ತುರ್ತು ಅಗತ್ಯವಾಗಿದ್ದು, ಇದಕ್ಕಾಗಿ ವೋಕಲ್ ಫಾರ್ ಲೋಕಲ್ ಯೋಜನೆಯ ಮಂತ್ರವನ್ನು ಜನತೆ ಅಳವಡಿಸಿಕೊಳ್ಳಬೇಕು ಎಂದು ಕರೆ ಮೋದಿ ಕರೆ ನೀಡಿದರು.
ನ್ಯಾಶನಲ್ ಡಿಜಿಟಲ್ ಹೆಲ್ತ್ ಮಿಷನ್ ಯೋಜನೆ ಘೋಷಿಸಿದ ಪ್ರಧಾನಿ ಮೋದಿ: ಪ್ರತಿ ಭಾರತೀಯನಿಗೂ ಹೆಲ್ತ್ ಐಡಿ!
ಇಂದು ಇಡೀ ಜಗತ್ತು ಭಾರತದತ್ತ ನೋಡುತ್ತಿದೆ. ಭಾರತ ಬದಲಾದರೆ ವಿಶ್ವ ಬದಲಾಗುತ್ತದೆ. ವಿಶ್ವಕ್ಕೆ ಭಾರತದ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಭಾರತ ವಿಶ್ವ ಕಲ್ಯಾಣಕ್ಕಾಗಿ ದುಡಿಯಲಿದೆ ಎಂದು ಪ್ರಧಾನಿ ಭರವಸೆ ನೀಡಿದರು.
ಭಾರತವನ್ನು ಆತ್ಮ ನಿರ್ಭರವನ್ನಾಗಿ ಮಾಡಿದಾಗ ಮಾತ್ರ ಜಾಗತಿಕ ವೇದಿಕೆಯಲ್ಲಿ ದೇಶದ ಪ್ರಭಾವ ಹೆಚ್ಚಾಗಲು ಸಾಧ್ಯ ಎಂದ ಪ್ರಧಾನಿ ಮೋದಿ, ಆತ್ಮ ನಿರ್ಭರ ಭಾರತ ಕಟ್ಟುವಲ್ಲಿ ಸಮಸ್ತ ಭಾರತೀಯರು ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಈ ವೇಳೆ ಆತ್ಮ ನಿರ್ಭರ ಭಾರತ ಅಭಿಯಾನಕ್ಕೆ ಜನತೆಯ ಸಹಕಾರ ಕೋರಿದ ಪ್ರಧಾನಿ ಮೋದಿ, 'ವೋಕಲ್ ಫಾಲ್ ಲೋಕಲ್' ಮಂತ್ರವನ್ನು ಅಳವಡಿಸಿಕೊಳ್ಳುವಂತೆ ದೇಶವಾಸಿಗಳಿಗೆ ಕರೆ ನೀಡಿದರು.
ಭಾರತವನ್ನು ಕೆಣಕಿದವರಿಗೆ ಸೂಕ್ತ ತಿರುಗೇಟು ನೀಡಲಾಗಿದೆ: ಮೋದಿ ಗುಡುಗು!
ಭಾರತ ಆತ್ಮ ನಿರ್ಭರ ದೇಶವಾಗಬೇಕು ಎಂಬುದು ಸಮಸ್ತ ಭಾರತೀಯರ ಕನಸು. ಈ ಕನಸನ್ನು ನನಸು ಮಾಡಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ನಡೆಸಿದೆ ಎಂದು ಪ್ರಧಾನಿ ಮೋದಿ ಹೇಳಿದರು.
ಸ್ವಾವಲಂಬನೆ ದೇಶದ ತುರ್ತು ಅಗತ್ಯವಾಗಿದ್ದು, ಇದಕ್ಕಾಗಿ ವೋಕಲ್ ಫಾರ್ ಲೋಕಲ್ ಯೋಜನೆಯ ಮಂತ್ರವನ್ನು ಜನತೆ ಅಳವಡಿಸಿಕೊಳ್ಳಬೇಕು ಎಂದು ಕರೆ ಮೋದಿ ಕರೆ ನೀಡಿದರು.
ನ್ಯಾಶನಲ್ ಡಿಜಿಟಲ್ ಹೆಲ್ತ್ ಮಿಷನ್ ಯೋಜನೆ ಘೋಷಿಸಿದ ಪ್ರಧಾನಿ ಮೋದಿ: ಪ್ರತಿ ಭಾರತೀಯನಿಗೂ ಹೆಲ್ತ್ ಐಡಿ!
ಇಂದು ಇಡೀ ಜಗತ್ತು ಭಾರತದತ್ತ ನೋಡುತ್ತಿದೆ. ಭಾರತ ಬದಲಾದರೆ ವಿಶ್ವ ಬದಲಾಗುತ್ತದೆ. ವಿಶ್ವಕ್ಕೆ ಭಾರತದ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಭಾರತ ವಿಶ್ವ ಕಲ್ಯಾಣಕ್ಕಾಗಿ ದುಡಿಯಲಿದೆ ಎಂದು ಪ್ರಧಾನಿ ಭರವಸೆ ನೀಡಿದರು.
ಭಾರತವನ್ನು ಆತ್ಮ ನಿರ್ಭರವನ್ನಾಗಿ ಮಾಡಿದಾಗ ಮಾತ್ರ ಜಾಗತಿಕ ವೇದಿಕೆಯಲ್ಲಿ ದೇಶದ ಪ್ರಭಾವ ಹೆಚ್ಚಾಗಲು ಸಾಧ್ಯ ಎಂದ ಪ್ರಧಾನಿ ಮೋದಿ, ಆತ್ಮ ನಿರ್ಭರ ಭಾರತ ಕಟ್ಟುವಲ್ಲಿ ಸಮಸ್ತ ಭಾರತೀಯರು ಕೈಜೋಡಿಸಬೇಕು ಎಂದು ಮನವಿ ಮಾಡಿದರು.