ಆ್ಯಪ್ನಗರ

370 ವಿಧಿ ರದ್ದು ಮಾಡಿದ್ದರಿಂದ ಪಾಕಿಸ್ತಾನ ಸಂಚಿಗೆ ಹಿನ್ನಡೆ: ಅಮಿತ್‌ ಶಾ

ಕಣಿವೆ ರಾಜ್ಯ ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಲಾಗಿದ್ದ 370ನೇ ವಿಧಿ ರದ್ದುಗೊಂಡ ನಂತರ ಪಾಕಿಸ್ತಾನದ ತಂತ್ರಗಳಿಗೆಲ್ಲ ತೀವ್ರ ಹಿನ್ನಡೆ ಉಂಟಾಗುತ್ತಿದೆ ಎಂದಿದ್ದಾರೆ ಅಮಿತ್‌ ಶಾ

Vijaya Karnataka Web 15 Oct 2019, 10:06 pm
ಹೊಸದಿಲ್ಲಿ: ಜಮ್ಮು - ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ರದ್ದು ಮಾಡಿದ್ದರಿಂದ ಭಯೋತ್ಪಾದಕ ಹೆಸರಿನಲ್ಲಿ ಪರೋಕ್ಷ ದಾಳಿ ಮಾಡುವ ಪಾಕಿಸ್ತಾನ ತಂತ್ರಕ್ಕೆ ಹಿನ್ನಡೆ ಉಂಟಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Vijaya Karnataka Web ಅಮಿತ್‌ ಶಾ
ಅಮಿತ್‌ ಶಾ


ರಾಷ್ಟ್ರೀಯ ರಕ್ಷಣಾ ಪಡೆಯ 35ನೇ ಸಂಸ್ಥಾಪನಾ ದಿನಾಚರಣೆ ಸಂದರ್ಭದಲ್ಲಿ ಸಿಬ್ಬಂದಿಯಿಂದ ಗೌರವ ವಂದನೆ ಸ್ವೀಕರಿಸಿ, ದೇಶದಲ್ಲಿ ಭಯೋತ್ಪಾದನಾ ಕೃತ್ಯಗಳ ನಿಗ್ರಹಕ್ಕೆ ಪಡೆಗಳು ಸನ್ನದ್ಧಗೊಂಡಿವೆ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಿರ್ದೇಶನದಂತೆ ಉಗ್ರರ ವಿರುದ್ಧ ದಿಟ್ಟ ಹೋರಾಟ ಮಾಡಿ, ಆಂತರಿಕ ಭದ್ರತೆಯನ್ನು ಸುಭದ್ರಗೊಳಿಸಲು ಎನ್‌ಎಸ್‌ಜಿ ಪಡೆ ಸನ್ನದ್ಧವಾಗಿದೆ ಎಂದು ಗೃಹ ಸಚಿವರು ತಿಳಿಸಿದರು.

ದೇಶದಲ್ಲಿ ಶಾಂತಿ ಮತ್ತು ಸುರಕ್ಷತೆಗೆ ಆದ್ಯತೆ ನೀಡುವುದರ ಜೊತೆಗೆ ಉಗ್ರ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವುದು ಕೇಂದ್ರ ಸರಕಾರ ಗುರಿಯಾಗಿದೆ ಎಂದು ಅಮಿತ್‌ ಶಾ ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ