ಆ್ಯಪ್ನಗರ

ಭಾರತೀಯ ಎಲ್ಲ ಭಾಷೆಗಳನ್ನು ಪ್ರೋತ್ಸಾಹಿಸುತ್ತೇವೆ: ಪ್ರಕಾಶ್‌ ಜಾವಡೇಕರ್‌

ಮೇ 31ರಂದು ಕೇಂದ್ರ ಸಂಪುಟ ಸಭೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2019ರ ಡ್ರಾಫ್ಟ್‌ ಸಲ್ಲಿಕೆಯಾದ ನಂತರ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಪ್ರಾದೇಶಿಕ ಭಾಷೆ ಪ್ರಾಬಲ್ಯವಿರುವ ರಾಜ್ಯಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ.

Times Now 3 Jun 2019, 3:07 pm
ಹೊಸದಿಲ್ಲಿ: ಯಾವುದೇ ಭಾಷೆಯನ್ನು ಯಾರೊಬ್ಬರ ಮೇಲೂ ಹೇರಿಕೆ ಮಾಡುವ ಉದ್ದೇಶ ಹೊಂದಿಲ್ಲ. ಭಾರತದ ಎಲ್ಲ ಭಾಷೆಗಳನ್ನು ಪ್ರೊತ್ಸಾಹಿಸುತ್ತೇವೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್‌ ಜಾವಡೇಕರ್‌ ಹೇಳಿದ್ದಾರೆ.
Vijaya Karnataka Web Prakash Javdekar


'ರಾಷ್ಟ್ರೀಯ ಶಿಕ್ಷಣ ನೀತಿ 2019' ಸಮಿತಿ ಸಿದ್ಧಪಡಿಸಿದ ಡ್ರಾಫ್ಟ್‌ ಮಾತ್ರವಾಗಿದೆ. ಸಾರ್ವಜನಿಕರ ಪ್ರತಿಕ್ರಿಯೆ ಪಡೆದ ನಂತರ ಜಾರಿ ಮಾಡುವ ಬಗ್ಗೆ ಸರಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ಎಎನ್‌ಐಗೆ ತಿಳಿಸಿದ್ದಾರೆ.

ತ್ರಿಭಾಷಾ ನೀತಿ ಜಾರಿ ಮೂಲಕ ಹಿಂದಿಯನ್ನು ಕಡ್ಡಾಯ ಮಾಡುತ್ತಿರುವುದು ಆಘಾತಕಾರಿಯಾಗಿದೆ ಎಂದು ಡಿಎಂಕೆ ಮುಖ್ಯಸ್ಥ ಸ್ಟಾಲಿನ್‌ ಕಳವಳ ವ್ಯಕ್ತ ಪಡಿಸಿದ್ದರು. ಇಂತಹ ನಿರ್ಧಾರ ರಾಷ್ಟ್ರವನ್ನು ಒಡೆಯುತ್ತದೆ ಎಂದಿದ್ದರು. ತಮಿಳುನಾಡು ದ್ವಿಭಾಷಾ ಫಾರ್ಮುಲಾವನ್ನು ಅನುಸರಿಸುತ್ತ ಬಂದಿದೆ. ಹಿಂದಿ ಹೇರಿಕೆಯನ್ನು ನಾವು ವಿರೋಧಿಸುತ್ತೇವೆ ಎಂದಿದ್ದಾರೆ.

ಕಸ್ತೂರಿ ರಂಗನ್‌ ಸಿದ್ಧಪಡಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ 2019ರಲ್ಲಿ ಇಂಗ್ಲಿಷ್‌ ಮತ್ತು ಹಿಂದಿ ಕಲಿಕೆ ಕಡ್ಡಾಯವಾಗಿದೆ. ಮತ್ತೊಂದು ಪ್ರಾದೇಶಿಕ ಭಾಷೆಗೆ ಸ್ಥಾನವನ್ನು ನೀಡಲಾಗಿದೆ. ಮೇ 31ರಂದು ಕೇಂದ್ರ ಸಂಪುಟ ಸಭೆಯಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2019ರ ಡ್ರಾಫ್ಟ್‌ ಸಲ್ಲಿಕೆಯಾದ ನಂತರ ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ಪ್ರಾದೇಶಿಕ ಭಾಷೆ ಪ್ರಾಬಲ್ಯವಿರುವ ರಾಜ್ಯಗಳಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ. ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಧಿಕೃತ ವೆಬ್‌ಸೈಟ್‌ನಲ್ಲು ನೂತನ ಶಿಕ್ಷಣ ನೀತಿಯ ಡ್ರಾಫ್ಟ್‌ಅನ್ನು ಅಪ್‌ಲೋಡ್‍ ಮಾಡಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ