ಹೊಸದಿಲ್ಲಿ: ಸಮಾಜವಾದಿ ಪಕ್ಷದ ಮತ್ತೊಬ್ಬ ರಾಜ್ಯಸಭಾ ಸದಸ್ಯ ಸುರೇಂದ್ರ ನಗರ್ ಶುಕ್ರವಾರ ರಾಜ್ಯಸಭಾ ಸದಸ್ಯತ್ವ ಹಾಗೂ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಇದರೊಂದಿಗೆ ಒಂದೇ ತಿಂಗಳ ಅವಧಿಯಲ್ಲಿ ಇಬ್ಬರು ಹಿರಿಯ ಸಂಸದರನ್ನು ಸಮಾಜವಾದಿ ಪಕ್ಷ ಕಳೆದುಕೊಂಡಂತಾಗಿದೆ. ಕೆಲದಿನಗಳ ಹಿಂದಷ್ಟೇ ಮಾಜಿ ಪ್ರಧಾನಿ ದಿ.ಚಂದ್ರಶೇಖರ್ ಅವರ ಪುತ್ರ ನೀರಜ್ ಶೇಖರ್ ರಾಜ್ಯಸಭಾ ಸದಸ್ಯತ್ವಕ್ಕೆ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ಸುರೇಂದ್ರ ಮತ್ತು ನೀರಜ್ ಶೇಖರ್ ಆಪ್ತರು. ಇಬ್ಬರು ಬಿಜೆಪಿ ಟಿಕೆಟ್ನಿಂದ ಪುನಃ ರಾಜ್ಯಸಭೆಗೆ ಆಯ್ಕೆಯಾಗುವ ಸಾಧ್ಯತೆ ಇದೆ. ಒಂದು ತಿಂಗಳ ಅವಧಿಯಲ್ಲಿ ಪ್ರತಿಪಕ್ಷಗಳ ಏಳು ರಾಜ್ಯಸಭಾ ಸದಸ್ಯರು ಬಿಜೆಪಿ ಸೇರಿದಂತಾಗಿದೆ. ಮೊದಲು ಟಿಡಿಪಿಯ ನಾಲ್ವರು ಸದಸ್ಯರು ಕಮಲ ಪಕ್ಷ ಸೇರ್ಪಡೆಯಾದರು. ಕಾಂಗ್ರೆಸ್ನ ಹಿರಿಯ ಸಂಸದ ಸಂಜಯ್ ಸಿಂಗ್ ಎರಡು ದಿನ ಹಿಂದಷ್ಟೇ ರಾಜೀನಾಮೆ ನೀಡಿದ್ದಾರೆ.
ಎಸ್ಪಿಯ ಮತ್ತೊಬ್ಬ ರಾಜ್ಯಸಭಾ ಸದಸ್ಯ ರಾಜೀನಾಮೆ, ಬಿಜೆಪಿ ಸೇರ್ಪಡೆ ಸಂಭವ
ಕೆಲದಿನಗಳ ಹಿಂದಷ್ಟೇ ಮಾಜಿ ಪ್ರಧಾನಿ ದಿ.ಚಂದ್ರಶೇಖರ್ ಅವರ ಪುತ್ರ ನೀರಜ್ ಶೇಖರ್ ರಾಜ್ಯಸಭಾ ಸದಸ್ಯತ್ವಕ್ಕೆ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು.
Agencies 3 Aug 2019, 5:00 am