ಆ್ಯಪ್ನಗರ

ಸಿಎಂ ಮಮತಾ ಬ್ಯಾನರ್ಜಿ ಬೇಷರತ್ ಕ್ಷಮೆ ಯಾಚಿಸಲಿ: ಮುಷ್ಕರ ಹಿಂದೆಗೆಯಲು 6 ಷರತ್ತು ಮುಂದಿಟ್ಟ ಬಂಗಾಳದ ವೈದ್ಯರು

ಗುರುವಾರ ವೈದ್ಯ ಸಮುದಾಯದ ಜತೆ ಮಾತುಕತೆ ನಡೆಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮೊದಲಿಗೆ ಮುಷ್ಕರ ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದರು. ಬಳಿಕ 4 ಗಂಟೆಗಳ ಗಡುವು ವಿಧಿಸಿ ಅಷ್ಟರೊಳಗೆ ಕರ್ತವ್ಯಕ್ಕೆ ಹಾಜರಾಗದಿದ್ದರೆ ವೈದ್ಯ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ಗಳಿಂದ ತೆರವುಗೊಳಿಸಬೇಕಾದೀತು ಎಂದೂ ಬೆದರಿಕೆಯನ್ನೂ ಒಡ್ಡಿದ್ದರು. ಇದರಿಂದ ವೈದ್ಯ ಸಮುದಾಯ ಮತ್ತಷ್ಟು ಕೆರಳಿ ಪ್ರತಿಭಟನೆ ತೀವ್ರಗೊಳಿಸಿದೆ.

Vijaya Karnataka Web 14 Jun 2019, 5:29 pm
ಕೋಲ್ಕತ: ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನಾ ನಿರತ ವೈದ್ಯರು ಮುಷ್ಕರ ಹಿಂತೆಗೆದುಕೊಳ್ಳಲು ಸರಕಾರಕ್ಕೆ ನಾಲ್ಕು ಷರತ್ತುಗಳನ್ನು ಮುಂದಿಟ್ಟಿದ್ದಾರೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವೈದ್ಯ ಸಮುದಾಯದ ಬೇಷರತ್‌ ಕ್ಷಮೆಯಾಚಿಸಬೇಕು ಎಂದೂ ಅವರು ಆಗ್ರಹಿಸಿದ್ದಾರೆ ಎಂದು ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
Vijaya Karnataka Web Doctors strike new-1


ಕೋಲ್ಕತದಲ್ಲಿ ಕಿರಿಯ ವೈದ್ಯರ ಮೇಲೆ ತೃಣಮೂಲ ಕಾಂಗ್ರೆಸ್‌ ಕಾರ್ಯಕರ್ತರು ಎನ್ನಲಾದ ದುಷ್ಕರ್ಮಿಗಳು ನಡೆಸಿದ ಮಾರಣಾಂತಿಕ ಹಲ್ಲೆಯನ್ನು ಪ್ರತಿಭಟಿಸಿ ವೈದ್ಯ ಸಮುದಾಯ 4 ದಿನಗಳಿಂದ ಮುಷ್ಕರ ನಡೆಸುತ್ತಿದೆ.

ಗುರುವಾರ ವೈದ್ಯ ಸಮುದಾಯದ ಜತೆ ಮಾತುಕತೆ ನಡೆಸಿದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮೊದಲಿಗೆ ಮುಷ್ಕರ ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದರು. ಬಳಿಕ 4 ಗಂಟೆಗಳ ಗಡುವು ವಿಧಿಸಿ ಅಷ್ಟರೊಳಗೆ ಕರ್ತವ್ಯಕ್ಕೆ ಹಾಜರಾಗದಿದ್ದರೆ ವೈದ್ಯ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ಗಳಿಂದ ತೆರವುಗೊಳಿಸಬೇಕಾದೀತು ಎಂದೂ ಬೆದರಿಕೆಯನ್ನೂ ಒಡ್ಡಿದ್ದರು. ಇದರಿಂದ ವೈದ್ಯ ಸಮುದಾಯ ಮತ್ತಷ್ಟು ಕೆರಳಿ ಪ್ರತಿಭಟನೆ ತೀವ್ರಗೊಳಿಸಿದೆ.

ಪಶ್ಚಿಮ ಬಂಗಾಳದ ವೈದ್ಯ ಸಮುದಾಯಕ್ಕೆ ಬೆಂಬಲ ಸೂಚಿಸಿ ದೇಶಾದ್ಯಂತ ವೈದ್ಯರ ನಾನಾ ಸಂಘಟನೆಗಳು ಇಂದು ಮುಷ್ಕರ ನಡೆಸುತ್ತಿವೆ. ಇದರಿಂದಾಗಿ ಸಾಮಾನ್ಯ ಆರೋಗ್ಯ ಪಾಲನೆ ವ್ಯವಸ್ಥೆ ಅಸ್ತವ್ಯಸ್ತವಾಗಿದೆ.

ಈ ನಡುವೆ, ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್‌ ಅವರು, 'ಹಟಮಾರಿ ಧೋರಣೆ ಬಿಟ್ಟುಬಿಡಿ, ಪ್ರಕರಣವನ್ನು ಪ್ರತಿಷ್ಠೆಯ ವಿಷಯವನ್ನಾಗಿ ಮಾಡಬೇಡಿ' ಎಂದು ಮಮತಾ ಬ್ಯಾನರ್ಜಿ ಅವರಿಗೆ ಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ