ಆ್ಯಪ್ನಗರ

ಮಿಶ್ರಾ ಅಂತ್ಯಕ್ರಿಯೆ ವೇಳೆ ಅಗೌರವ

ಕಕ್ಕಾಬಿಕ್ಕಿಯಾದ ಪೊಲೀಸರು ಬಂದೂಕುಗಳ ಪರಿಶೀಲನೆ ನಡೆಸಿ ಹಲವು ಬಾರಿ ಟ್ರಿಗರ್‌ ಒತ್ತಿದರೂ ಗುಂಡು ಮಾತ್ರ ಹಾರಲಿಲ್ಲ.

Agencies 23 Aug 2019, 5:00 am
ಪಟನಾ: ಸಕಲ ಸರಕಾರಿ ಗೌರವಗಳೊಂದಿಗೆ ಬಿಹಾರದ ಮಾಜಿ ಮುಖ್ಯಮಂತ್ರಿ ಜಗನ್ನಾಥ ಮಿಶ್ರಾ ಅವರ ಅಂತ್ಯಕ್ರಿಯೆ ನಡೆಯುವ ವೇಳೆ ಪೊಲೀಸರು ಕುಶಾಲತೋಪು ಹಾರಿಸಿದಾಗ 22 ರೈಫಲ್‌ಗಳಿಂದಲೂ ಒಂದೇ ಒಂದು ಗುಂಡು ಹಾರಲಿಲ್ಲ. ಕಕ್ಕಾಬಿಕ್ಕಿಯಾದ ಪೊಲೀಸರು ಬಂದೂಕುಗಳ ಪರಿಶೀಲನೆ ನಡೆಸಿ ಹಲವು ಬಾರಿ ಟ್ರಿಗರ್‌ ಒತ್ತಿದರೂ ಗುಂಡು ಮಾತ್ರ ಹಾರಲಿಲ್ಲ. ಇದರಿಂದ ಅಲ್ಲಿದ್ದ ಗಣ್ಯರು, ''ಇದು ಮಾಜಿ ಮುಖ್ಯಮಂತ್ರಿಗೆ ಮಾಡಿದ ಅವಮಾನ,'' ಎಂದು ಅಸಮಾಧನ ವ್ಯಕ್ತಪಡಿಸಿದರು. ಬುಧವಾರ ಬಿಹಾರದ ಸೌಪರ್‌ ಜಿಲ್ಲೆಯ ಸ್ವಗ್ರಾಮದಲ್ಲಿ ಮಿಶ್ರಾ ಅವರ ಅಂತ್ಯಕ್ರಿಯೆ ನಡೆದಿತ್ತು. ಮುಖ್ಯಮಂತ್ರಿ ನಿತೀಶ್‌ ಕುಮಾರ್‌, ಉಪ ಮುಖ್ಯಮಂತ್ರಿ ಸುಶೀಲ್‌ ಕುಮಾರ್‌ ಮೋದಿ, ಆರೋಗ್ಯ ಸಚಿವ ಮಂಗಲ್‌ ಪಾಂಡೆ ಸೇರಿದಂತೆ ಹಲವು ಗಣ್ಯರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.
Vijaya Karnataka Web mishra




ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ