All Four People Accused In The Rape And Murder Of Woman Veterinarian In Telangana Have Been Killed In An Encounter With The Police
ಪಶುವೈದ್ಯೆ ಅತ್ಯಾಚಾರಿ ಆರೋಪಿಗಳ ಎನ್ಕೌಂಟರ್: ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ಹೇಗಿದೆ ನೋಡಿ
ತೆಲಂಗಾಣದ ಹೈದರಾಬಾದ್ ಹೊರವಲಯದ ಶಂಶಾಬಾದ್ನಲ್ಲಿ 27 ವರ್ಷದ ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಎನ್ಕೌಂಟರ್ ಮಾಡಲಾಗಿದೆ. ಕರ್ನಾಟಕದ ಹುಬ್ಬಳ್ಳಿ ಮೂಲದ ವಿಶ್ವನಾಥ್ ಸಜ್ಜನರ್ ನೇತೃತ್ವದ ಪೊಲೀಸ್ ಕಮಿಷನರ್ ತಂಡ ಎನ್ಕೌಂಟರ್ ಕಾರ್ಯಾಚರಣೆ ನಡೆಸಿದ್ದು, ಯಾವ ಸ್ಥಳದಲ್ಲಿ ಪಶುವೈದ್ಯೆಯನ್ನು ಪೈಶಾಚಿಕವಾಗಿ ಸಾಮೂಹಿಕ ಅತ್ಯಾಚಾರ ಎಸಗಿ, ಪೆಟ್ರೋಲ್ ಸುರಿದು ದಹನ ಮಾಡಿದ್ದರೋ ಅದೇ ಸ್ಥಳದಲ್ಲಿ ಆರೋಪಿಗಳನ್ನು ಕರೆದೊಯ್ದ ವೇಳೆ ಎನ್ಕೌಂಟರ್ ಮೂಲಕ ತಪ್ಪಿಸಿಕೊಂಡು ಹೋಗುತ್ತಿದ್ದ ಆರೋಪಿಯನ್ನು ಅಂತ್ಯ ಕಾಣಿಸಲಾಗಿದೆ. ಬೆಳಗ್ಗಿನ ಜಾವ 3.30ಕ್ಕೆ ಎನ್ಕೌಂಟರ್ ನಡೆದಿದ್ದು, ಮಹಮ್ಮದ್ ಆರೀಫ್, ಜೊಲ್ಲು ಶಿವ, ಚನ್ನಕೇಶವಲು ಹಾಗೂ ಜೊಲ್ಲು ನವೀನ್ ಹತ್ಯೆಗೊಳಗಾಗಿದ್ದಾರೆ. ಹುಬ್ಬಳ್ಳಿಯ ವಿಶ್ವನಾಥ್ ಸಜ್ಜನರ್ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದು, ಈ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಕರ್ನಾಟಕದ ಮೂಲದ ವಿಶ್ವನಾಥ್ ನೇತೃತ್ವದ ತಂಡದಿಂದ ಎನ್ಕೌಂಟರ್ ನಡೆದಿದೆ.
Vijaya Karnataka Web6 Dec 2019, 11:57 am
ತೆಲಂಗಾಣದ ಹೈದರಾಬಾದ್ ಹೊರವಲಯದ ಶಂಶಾಬಾದ್ನಲ್ಲಿ 27 ವರ್ಷದ ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಎನ್ಕೌಂಟರ್ ಮಾಡಲಾಗಿದೆ. ಕರ್ನಾಟಕದ ಹುಬ್ಬಳ್ಳಿ ಮೂಲದ ವಿಶ್ವನಾಥ್ ಸಜ್ಜನರ್ ನೇತೃತ್ವದ ಪೊಲೀಸ್ ಕಮಿಷನರ್ ತಂಡ ಎನ್ಕೌಂಟರ್ ಕಾರ್ಯಾಚರಣೆ ನಡೆಸಿದ್ದು, ಯಾವ ಸ್ಥಳದಲ್ಲಿ ಪಶುವೈದ್ಯೆಯನ್ನು ಪೈಶಾಚಿಕವಾಗಿ ಸಾಮೂಹಿಕ ಅತ್ಯಾಚಾರ ಎಸಗಿ, ಪೆಟ್ರೋಲ್ ಸುರಿದು ದಹನ ಮಾಡಿದ್ದರೋ ಅದೇ ಸ್ಥಳದಲ್ಲಿ ಆರೋಪಿಗಳನ್ನು ಕರೆದೊಯ್ದ ವೇಳೆ ಎನ್ಕೌಂಟರ್ ಮೂಲಕ ತಪ್ಪಿಸಿಕೊಂಡು ಹೋಗುತ್ತಿದ್ದ ಆರೋಪಿಯನ್ನು ಅಂತ್ಯ ಕಾಣಿಸಲಾಗಿದೆ. ಬೆಳಗ್ಗಿನ ಜಾವ 3.30ಕ್ಕೆ ಎನ್ಕೌಂಟರ್ ನಡೆದಿದ್ದು, ಮಹಮ್ಮದ್ ಆರೀಫ್, ಜೊಲ್ಲು ಶಿವ, ಚನ್ನಕೇಶವಲು ಹಾಗೂ ಜೊಲ್ಲು ನವೀನ್ ಹತ್ಯೆಗೊಳಗಾಗಿದ್ದಾರೆ. ಹುಬ್ಬಳ್ಳಿಯ ವಿಶ್ವನಾಥ್ ಸಜ್ಜನರ್ ಸೈಬರಾಬಾದ್ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದು, ಈ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಕರ್ನಾಟಕದ ಮೂಲದ ವಿಶ್ವನಾಥ್ ನೇತೃತ್ವದ ತಂಡದಿಂದ ಎನ್ಕೌಂಟರ್ ನಡೆದಿದೆ.
ಅತ್ಯಾಚಾರಿಗಳ ಎನ್ಕೌಂಟರ್
ನವೆಂಬರ್ 27ರಂದು, ಪಶುವೈದ್ಯೆಯ ಸ್ಕೂಟರ್ನ ಟೈಯರ್ ಪಂಚರ್ ಮಾಡಿ, ಪಂಚರ್ ಹಾಕಿಸಿಕೊಡುವ ನೆಪದಲ್ಲಿ ಆಕೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿ, ಚಿತ್ರಹಿಂಸೆ ನೀಡಿ ಹತ್ಯೆ ಮಾಡಿದ್ದ ನಾಲ್ವರೂ ಆರೋಪಿಗಳನ್ನು ಎನ್ಕೌಂಟರ್ ಮಾಡಲಾಗಿದೆ. ಬ್ರಿಡ್ಜ್ ಕೆಳಗೆ ನಿರ್ಜನ ಪ್ರದೇಶದಲ್ಲಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಆರೋಪಿಗಳನ್ನು ಅದೇ ಸ್ಥಳಕ್ಕೆ ಕರೆದೊಯ್ಯಲಾಗಿತ್ತು. ಅತ್ಯಾಚಾರದ ಮರು ಸೃಷ್ಟಿ ವೇಳೆ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿಗಳನ್ನು ಎನ್ಕೌಂಟರ್ ಮಾಡಲಾಗಿದೆ ಎಂದು ತೆಲಂಗಾಣ ಪೊಲೀಸರು ಹೇಳಿಕೊಂಡಿದ್ದಾರೆ. ಬೆಳಗ್ಗಿನ ಜಾವ 3.30 ರ ವೇಳೆ ಎನ್ಕೌಂಟರ್ ನಡೆದಿದ್ದು, ಇದಕ್ಕೆ ದೇಶಾದ್ಯಂತ ಸಂಭ್ರಮ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಬಹುತೇಕ ಮಂದಿ ಎನ್ಕೌಂಟರ್ಗೆ ಹರ್ಷ ವ್ಯಕ್ತಪಡಿಸಿದ್ದು, ಕೆಲವರು ಇದು ಮಾನವ ಹಕ್ಕುಗಳ ಉಲ್ಲಂಘಟನೆ ಎಂದೂ ಖಂಡಿಸಿದ್ದಾರೆ.
ಎನ್ಕೌಂಟರ್ ಸ್ಪೆಷಲಿಸ್ಟ್ ಕನ್ನಡಿಗ ಮೂಲದ ವಿಶ್ವನಾಥ್ ಸಜ್ಜನರ್
ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಇಂದು ಮುಂಜಾನೆ 3.30 ರ ಸುಮಾರಿಗೆ ಎನ್ಕೌಂಟರ್ ಮಾಡಲಾಗಿದೆ. ಎನ್ಕೌಂಟರ್ ಮಾಡಿದ ಪೊಲೀಸ್ ಆಯುಕ್ತರು ಕರ್ನಾಟಕದ ಹುಬ್ಬಳ್ಳಿ ಮೂಲದವರು ನಮ್ಮ ಕನ್ನಡಿಗರು ಎನ್ನುವುದು ವಿಶೇಷ. ವಿಶ್ವನಾಥ್ ಸಜ್ಜನರ್ ಎನ್ಕೌಂಟರ್ ಸ್ಪೆಷಲಿಸ್ಟ್ ಎಂದೇ ಹೆಸರು ಪಡೆದಿದ್ದಾರೆ. ಇವರು ಕನ್ನಡಿಗರು ಎಂಬ ಕಾರಣಕ್ಕೆ ರಾಜ್ಯದಲ್ಲೂ ಎನ್ಕೌಂಟರ್ಗೆ ಸಂಭ್ರಮ ಹೆಚ್ಚಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ವಿಶ್ವನಾಥ್ ಸಜ್ಜನರ್ ಕಾರ್ಯವನ್ನು ಹೊಗಳಿದ ರಾಜ್ಯದ ಜನತೆ ಇವರನ್ನು ಸಿಂಗಂ ಎಂದು ಶ್ಲಾಘಿಸಿದ್ದಾರೆ. ಅತ್ಯಾಚಾರ ಪ್ರಕರಣದ ನ್ಯಾಯ ಒದಗಿಸಿದ ಕನ್ನಡಿಗ ಎಂದೂ ವೈರಲ್ ಆಗುತ್ತಿದೆ.
Twitter-Father of the woman veterinarian on all 4 accused ...
Twitter-Asha Devi, Nirbhaya's mother on all four accused i...
Twitter-#WATCH Hyderabad: Reaction of girl students when n...
Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್ಡೌನ್ಲೋಡ್ ಮಾಡಿಕೊಳ್ಳಿ ಹಾಗೂ ರಿಪೋರ್ಟ್ ಕಳಿಸಿ
We use cookies and other tracking technologies to provide services in line with the preferences you reveal while browsing the Website to show personalize content and targeted ads, analyze site traffic, and understand where our audience is coming from in order to improve your browsing experience on our Website. By continuing to browse this Website, you consent to the use of these cookies. If you wish to object such processing, please read the instructions described in our privacy policy/cookie policy.