ಆ್ಯಪ್ನಗರ

ಸರ್ಜಿಕಲ್ ದಾಳಿ 2.0ಗೆ ಸರ್ವಪಕ್ಷ ಬೆಂಬಲ: ಸುಷ್ಮಾ ಸ್ವರಾಜ್

ಆಡಳಿತ ಪಕ್ಷ ಬಿಜೆಪಿ, ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್‌ ಸೇರಿದಂತೆ ಎಲ್ಲ ಪಕ್ಷಗಳ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಿತು.

Vijaya Karnataka Web 26 Feb 2019, 6:53 pm
ಹೊಸದಿಲ್ಲಿ: ಉಗ್ರನೆಲೆಗಳ ಮೇಲೆ ಭಾರತೀಯ ವಾಯುಪಡೆ ದಾಳಿಯನ್ನು ಸರ್ವಪಕ್ಷಗಳು ಬೆಂಬಲಿಸಿವೆ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಮಾಧ್ಯಮಗಳಿಗೆ ತಿಳಿಸಿದರು.
Vijaya Karnataka Web Sushma Swaraj


ಪಾಕಿಸ್ತಾನದ ಬಾಲಾಕೋಟ್‌ನಲ್ಲಿ ಜೈಷೆ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ತರಬೇತಿ ಶಿಬಿರಗಳ ಮೇಲೆ ಭಾರತೀಯ ವಾಯುಪಡೆ ದಾಳಿ ನಡೆಸಿ ಧ್ವಂಸಗೊಳಿಸಿದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಸರ್ವಪಕ್ಷ ಸಭೆ ನಡೆಸಿದ ಬಳಿಕ ಅವರು ಮಾಧ್ಯಮಗಳಿಗೆ ಈ ಮಾಹಿತಿ ನೀಡಿದರು.

ಆಡಳಿತ ಪಕ್ಷ ಬಿಜೆಪಿ, ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್‌ ಸೇರಿದಂತೆ ಎಲ್ಲ ಪಕ್ಷಗಳ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದಾರೆ. ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಿತು.

ಪುಲ್ವಾಮಾ ಉಗ್ರ ದಾಳಿಗೆ ಪ್ರತೀಕಾರ ಕೈಗೊಂಡಿರುವ ಭಾರತೀಯ ವಾಯುಪಡೆ ಈಗ ಪಾಕಿಸ್ತಾನದ ನೆಲೆಯೊಳಗೆ ನುಗ್ಗಿ ಉಗ್ರ ನೆಲೆಗಳನ್ನು ನಾಶ ಮಾಡಿದೆ. ವೈಮಾನಿಕ ದಾಳಿಯ ಮೂಲಕ ಉಗ್ರ ನೆಲೆಗಳು ಧ್ವಂಸಗೊಂಡಿವೆ. ಮಂಗಳವಾರ ನಸುಕಿನ ಜಾವ 3:30ರ ವೇಳೆ ಈ ದಾಳಿ ನಡೆದಿದೆ.

ಪುಲ್ವಾಮಾ ದಾಳಿ ನಡೆಸಿದ ಜೈಷೆ ಉಗ್ರ ಸಂಘಟನೆಯ ಬಾಲಕೋಟ್‌, ಚಕೋಟಿ, ಮುಜಾಫರಬಾದ್‌ನಲ್ಲಿದ್ದ ನೆಲೆಗಳನ್ನು ಸಂಪೂರ್ಣವಾಗಿ ನಾಶ ಮಾಡಲಾಗಿದೆ.

ಪಾಕಿಸ್ತಾನದ ಖೈಬರ್ ಪಖ್ತೂನ್‌ವಾ ಪ್ರಾಂತ್ಯಕ್ಕೆ ನುಗ್ಗಿದ ಯುದ್ಧ ವಿಮಾನಗಳು ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿವೆ.

ಬೆಳಗಿನ ಜಾವ 3.30ರ ಸುಮಾರಿಗೆ ಸುಮಾರು 1000 ಕೆಜಿ ಬಾಂಬ್‌ ಅನ್ನು ಉಗ್ರರ ನೆಲೆ ಮೇಲೆ ಹಾಕಲಾಗಿದೆ. ಒಟ್ಟು 12 ಮಿರಾಜ್‌ ಯುದ್ಧ ವಿಮಾನಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದವು. 21 ನಿಮಿಷಗಳ ಕಾಲ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರೈಸಿ 12 ವಾಯುಪಡೆ ವಿಮಾನಗಳು ಸುರಕ್ಷಿತವಾಗಿ ವಾಪಸ್‌ ಬಂದಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ