ಆ್ಯಪ್ನಗರ

ಕರ್ನಾಟಕದಲ್ಲಿ ಸಿಖ್‌ ವ್ಯಕ್ತಿ ಮೇಲೆ ಹಲ್ಲೆ: ತನಿಖೆಗೆ ಅಮರಿಂದರ್‌ ಮನವಿ

ಕಲಬುರಗಿಯಲ್ಲಿ 'ವಾಟ್ಸ್‌ಆ್ಯಪ್‌' ವದಂತಿಯನ್ನು ಆಧರಿಸಿ ಸಿಖ್‌ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣದ ತ್ವರಿತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಅವರು ಕರ್ನಾಟಕ ಸರಕಾರವನ್ನು ಒತ್ತಾಯಿಸಿದ್ದಾರೆ.

Vijaya Karnataka Web 30 May 2018, 7:48 am
ಚಂಡೀಗಢ: ಕಲಬುರಗಿಯಲ್ಲಿ 'ವಾಟ್ಸ್‌ಆ್ಯಪ್‌' ವದಂತಿಯನ್ನು ಆಧರಿಸಿ ಸಿಖ್‌ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣದ ತ್ವರಿತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಅವರು ಕರ್ನಾಟಕ ಸರಕಾರವನ್ನು ಒತ್ತಾಯಿಸಿದ್ದಾರೆ.
Vijaya Karnataka Web amarindar


ಈ ಸಂಬಂಧ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರಿಗೆ ಟ್ವೀಟ್‌ ಮೂಲಕ ಮನವಿ ಮಾಡಿರುವ ಅವರು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನಿನ ಅಡಿಯಲ್ಲಿ ಪ್ರಕರಣ ದಾಖಲಿಸಲು ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿದ್ದಾರೆ.

ರಾಜ್ಯದಲ್ಲಿ ಸಿಖ್‌ ಸಮುದಾಯದವರಿಗೆ ಸೂಕ್ತ ರಕ್ಷಣೆ ಒದಗಿಸುವಂತೆಯೂ ಮತ್ತು ಸಿಖ್ಖರ ಧಾರ್ಮಿಕ ಹಕ್ಕಿನ ಬಗ್ಗೆ ಸ್ಥಳೀಯರಲ್ಲಿ ಜಾಗೃತಿ ಮೂಡಿಸುವಂತೆಯೂ ಸೂಚಿಸಿದ್ದಾರೆ.

ಮಕ್ಕಳ ಕಳ್ಳನೆಂಬ 'ವಾಟ್ಸ್‌ಆ್ಯಪ್‌' ವದಂತಿಯನ್ನು ನಂಬಿ ಅವತಾರ್‌ ಸಿಂಗ್‌ ಎಂಬಾತನ ಮೇಲೆ ಕಲಬುರಗಿಯಲ್ಲಿ ಸ್ಥಳೀಯರು ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ