ಆ್ಯಪ್ನಗರ

ಅಮರನಾಥ ಯಾತ್ರೆ: ಸಾವಿನ ಸಂಖ್ಯೆ 8ಕ್ಕೆ ಏರಿಕೆ

ಅಮರನಾಥ ಯಾತ್ರಿಗಳ ಮೇಲೆ ನಡೆದ ದಾಳಿಯಲ್ಲಿ ಗಾಯಗೊಂಡ ಮಹಿಳೆಯೊಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ ಎಂಟಕ್ಕೆ ಏರಿದೆ.

ಟೈಮ್ಸ್ ಆಫ್ ಇಂಡಿಯಾ 16 Jul 2017, 11:45 am
ಶ್ರೀನಗರ: ಅಮರನಾಥ ಯಾತ್ರಿಗಳ ಮೇಲೆ ನಡೆದ ದಾಳಿಯಲ್ಲಿ ಗಾಯಗೊಂಡ ಮಹಿಳೆಯೊಬ್ಬರು ಮೃತಪಟ್ಟಿದ್ದು, ಮೃತರ ಸಂಖ್ಯೆ ಎಂಟಕ್ಕೆ ಏರಿದೆ.
Vijaya Karnataka Web amarnath yatra attack death toll rises to 8 as woman succumbs to injuries
ಅಮರನಾಥ ಯಾತ್ರೆ: ಸಾವಿನ ಸಂಖ್ಯೆ 8ಕ್ಕೆ ಏರಿಕೆ


ಜು.10ರಂದಿ ಉಗ್ರರು ಅಮರನಾಥ ಯಾತ್ರಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ಏಳು ಮಂದಿ ಮೃತಪಟ್ಟು ಹಲವು ಮಂದಿ ಗಾಯಗೊಂಡಿದ್ದರು. ಘಟನೆಯಲ್ಲಿ ಗಾಯಗೊಂಡಿದ್ದ ಲಲಿತಾ ಎಂಬವರು ಭಾನುವಾರ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2010ರ ಬಳಿಕ ಇದೇ ಮೊದಲ ಇದೇ ಮೊಬಲ ಬಾರಿಗೆ ಈ ಪ್ರಮಾಣದಲ್ಲಿ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಏಳು ಮಂದಿ ಸ್ಥಳದಲ್ಲೇ ಮೃತಪಟ್ಟು, 32 ಮಂದಿ ಗಾಯಗೊಂಡಿದ್ದರು. ಇದಕ್ಕೂ ಮುನ್ನ ಬೋಟೆಂಗೋ ಬಳಿ ಪೊಲೀಸರ ಬಂಕ್ ಮೇಲೆ ದಾಳಿ ನಡೆಸಿದ್ದ ಉಗ್ರರು ಪೊಲೀಸರೊಂದಿಗೆ ನೇರ ಕಾದಾಟಕ್ಕಿಳಿದಿದ್ದರು.

ಅನಂತ್‌ ನಾಗ್‌ ಜಿಲ್ಲೆಯ ಖನಬಾಲ್‍ನಲ್ಲಿ ಪೊಲೀಸರನ್ನು ಗುರಿಯಾಗಿರಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ. ಅಮರನಾಥ ಯಾತ್ರೆ ಮುಗಿಸಿ ಮರಳುತ್ತಿರುವಾಗ ಈ ಕೃತ್ಯ ನಡೆದಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ