ಆ್ಯಪ್ನಗರ

ಪ್ರತಿಪಕ್ಷಗಳು ಒಗ್ಗೂಡಿ ಬಿಜೆಪಿ ಮೇಲೆ ಯುದ್ಧ ಸಾರಿವೆ: ಅಮಿತ್‌ ಶಾ

ಬಿಜೆಪಿ ಸಂಸ್ಥಾಪನಾ ದಿನಾಚರಣೆ ಸಮಾವೇಶದಲ್ಲಿ ಗುಡುಗಿದ ಬಿಜೆಪಿ ರಾಷ್ಟ್ರಾಧ್ಯಕ್ಷ

Vijaya Karnataka Web 6 Apr 2018, 5:09 pm
ಮುಂಬಯಿ: ಪ್ರತಿಪಕ್ಷಗಳೆಲ್ಲವೂ ಹಾವು, ಮುಂಗುಸಿಯಂತೆ, ನಾಯಿ- ಬೆಕ್ಕುಗಳಂತೆ. ಈಗ ಎಲ್ಲವೂ ಒಗ್ಗೂಡಿ ಬಿಜೆಪಿ ವಿರೋಧಿ ಒಕ್ಕೂಟ ರಚಿಸಿಕೊಂಡಿದೆ.. ಈ ಒಕ್ಕೂಟದ ಉದ್ದೇಶ ಒಂದೇ ಬಿಜೆಪಿಯ ಮೇಲೆ ಸಮರ ಸಾರುವುದು. ಇಂಥ ಸವಾಲುಗಳನ್ನು ನಾವು ಮೆಟ್ಟಿ ನಿಲ್ಲುತ್ತೇವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ ತಿಳಿಸಿದ್ದಾರೆ.
Vijaya Karnataka Web amit shah attacks oppositions bid to form anti bjp front
ಪ್ರತಿಪಕ್ಷಗಳು ಒಗ್ಗೂಡಿ ಬಿಜೆಪಿ ಮೇಲೆ ಯುದ್ಧ ಸಾರಿವೆ: ಅಮಿತ್‌ ಶಾ


ಬಿಜೆಪಿ ಸಂಸ್ಥಾಪನಾ ದಿನಾಚರಣೆ ಹಿನ್ನೆಲೆಯಲ್ಲಿ ವಾಣಿಜ್ಯ ನಗರಿ ಮುಂಬಯಿಯಲ್ಲಿ ಏರ್ಪಡಿಸಿದ್ದ ಸಮಾವೇಶದಲ್ಲಿ ಮಾತನಾಡಿದರು.

ಪ್ರತಿಪಕ್ಷಗಳು ಆರೋಪ ಮಾಡುವಂತೆ ಮೀಸಲಾತಿ ನೀತಿಯನ್ನು ನಾವು ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ. ಹಾಗಾಗಲು ಬಿಡುವುದೂ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

1980-2018: ಬಿಜೆಪಿ ಬೆಳೆದ ಹಾದಿ ಹೇಗಿತ್ತು ಗೊತ್ತಾ...?


ಪ್ರತಿಪಕ್ಷಗಳು ಸಮಯ ಹಾಳು ಮಾಡುವುದರಲ್ಲೇ ಕಾಲ ಕಳೆಯುತ್ತಿದೆ. ಬಜೆಟ್‌ ಅಧಿವೇಶನದಲ್ಲಿ ಒಟ್ಟು 23 ದಿನಗಳ ಕಲಾಪ ವ್ಯರ್ಥವಾಗಿದೆ. ಇದಕ್ಕೆ ಪ್ರತಿಪಕ್ಷಗಳೇ ಕಾರಣ ಎಂದು ಅಮಿತ್‌ ಶಾ ದೂರಿದರು.

ಪ್ರಸಕ್ತ ಮೋದಿ ಸರಕಾರ ಎಲ್ಲ ವರ್ಗದ ಜನರಿಗೂ ಯೋಜನೆಗಳನ್ನು ಜಾರಿಗೆ ತಂದಿದೆ. ಪೊಳ್ಳು ಭರವಸೆಗಳನ್ನು ನೀಡುವುದಿಲ್ಲ. ನಮ್ಮ ಅಭಿವೃದ್ಧಿ ಯೋಜನೆಗಳಿಂದಲೇ ನಾವು 2019ರ ಲೋಕಸಭೆ ಚುನಾವಣೆಯಲ್ಲೂ ಗೆಲುವು ಸಾಧಿಸುತ್ತೇವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷರು ವಿಶ್ವಾಸ ವ್ಯಕ್ತಪಡಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ