ಆ್ಯಪ್ನಗರ

75 ವರ್ಷ ದಾಟಿದ ನಾಯಕರಿಗೂ ಬಿಜೆಪಿ ಟಿಕೆಟ್‌

2014ರ ಚುನಾವಣೆಯಲ್ಲಿ ಗೆಲುವಿನ ಬಳಿಕ 75 ವರ್ಷ ದಾಟಿದ ನಾಯಕರಿಗೆ ಸಂಪುಟದಲ್ಲಿ ಸ್ಥಾನ ನೀಡದಿರುವ ನಿರ್ಧಾರವನ್ನು ಮೋದಿ ತಳೆದಿದ್ದರು.

Vijaya Karnataka 9 Mar 2019, 8:00 am
ಹೊಸದಿಲ್ಲಿ: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ 75 ವರ್ಷ ದಾಟಿದ ನಾಯಕರಿಗೆ ಟಿಕೆಟ್‌ ನೀಡಬಾರದೆಂಬ ಪ್ರಸ್ತಾವಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ವಿರೋಧ ವ್ಯಕ್ತಪಡಿಸಿದ್ದಾರೆ.
Vijaya Karnataka Web Amith Shah 2


ಈ ನಿಯಮವನ್ನು ಅನ್ವಯಗೊಳಿಸಿದರೆ ಎಲ್‌.ಕೆ. ಆಡ್ವಾಣಿ, ಮುರಳಿ ಮನೋಹರ ಜೋಶಿ ಜೋಷಿ ಮತ್ತು ಕಲ್ರಾಜ್‌ ಮಿಶ್ರಾ, ಸುಮಿತ್ರಾ ಮಹಾಜನ್‌, ಹುಕುಂ ದೇವ್‌ ನಾರಾಯಣ್‌ ಸಿಂಗ್‌ ಯಾದವ್‌, ಬಿ.ಎಸ್‌.ಯಡಿಯೂರಪ್ಪ ಮುಂತಾದ ಹಿರಿಯ ಮುಖಂಡರಿಗೆ ಟಿಕೆಟ್‌ ನಿರಾಕರಿಸಬೇಕಾಗುತ್ತದೆ. ಆದರೆ ಇಂತಹ ಪ್ರಮುಖ ನಾಯಕರನ್ನು ಕೈಬಿಡುವ ಸ್ಥಿತಿಯಲ್ಲಿ ಪಕ್ಷ ಇಲ್ಲ ಎಂದು ಅಮಿತ್‌ ಶಾ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

2014ರ ಚುನಾವಣೆಯಲ್ಲಿ ಗೆಲುವಿನ ಬಳಿಕ 75 ವರ್ಷ ದಾಟಿದ ನಾಯಕರಿಗೆ ಸಂಪುಟದಲ್ಲಿ ಸ್ಥಾನ ನೀಡದಿರುವ ನಿರ್ಧಾರವನ್ನು ಮೋದಿ ತಳೆದಿದ್ದರು.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಶುಕ್ರವಾರ ದಿಲ್ಲಿಯಲ್ಲಿ ನಡೆದ ಬಿಜೆಪಿಯ ಸಂಸದೀಯ ಮಂಡಳಿ ಕಾರ್ಯತಂತ್ರದ ಬಗ್ಗೆ ಗಹನವಾದ ಚರ್ಚೆ ನಡೆಯಿತು. ಪ್ರಧಾನಿ ನರೇಂದ್ರ ಮೋದಿ, ಪಕ್ಷದ ಅಧ್ಯಕ್ಷ ಅಮಿತ್‌ ಶಾ, ಸಚಿವರಾದ ಅರುಣ್‌ ಜೇಟ್ಲಿ, ಸುಷ್ಮಾ ಸ್ವರಾಜ್‌ ಹಾಗೂ ಇತರೆ ಹಿರಿಯ ಮುಖಂಡರು ಪಾಲ್ಗೊಂಡಿದ್ದರು. ರಾಜ್ಯಸಭೆ ಹಾಗೂ ವಿಧಾನಸಭೆ, ವಿಧಾನ ಪರಿಷತ್‌ ಸದಸ್ಯರಿಗೆ ಟಿಕೆಟ್‌ ನೀಡದಿರುವ ಕುರಿತೂ ಚರ್ಚೆ ನಡೆಯಿತು. ತಡರಾತ್ರಿವರೆಗೂ ಸಭೆ ಮುಂದುವರಿದಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ