ಆ್ಯಪ್ನಗರ

ಆರ್‌ಟಿಐ ಅರ್ಜಿ ಸಲ್ಲಿಸಬೇಕಾದ ಅಗತ್ಯ ಇಲ್ಲದಂತೆ ಪಾರದರ್ಶಕ ಆಡಳಿತ ನೀಡಲು ಕ್ರಮ: ಅಮಿತ್‌ ಶಾ

ಮಾಹಿತಿ ಹಕ್ಕು ಕಾಯ್ದೆಯಡಿ ಹಲವಾರು ಮಾಹಿತಿ ಪಡೆಯಲು ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ಆದರೆ ಪಾರದರ್ಶಕ ಆಡಳಿತ ನೀಡುವ ಮೂಲಕ ಆರ್‌ಟಿಐ ಅರ್ಜಿ ಸಲ್ಲಿಕೆ ಕಡಿಮೆ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ ಅಮಿತ್‌ ಶಾ.

Vijaya Karnataka Web 12 Oct 2019, 5:53 pm
ಹೊಸದಿಲ್ಲಿ: ದೇಶದ ನಾಗರಿಕರು ಯಾವುದೇ ವಿಷಯದ ಬಗ್ಗೆ ಮಾಹಿತಿ ಪಡೆಯಲು ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಬೇಕಾದ ಅಗತ್ಯವೇ ಇಲ್ಲದಂತಹ ಆಡಳಿತವನ್ನು ನೀಡಲು ಕೇಂದ್ರ ಸರಕಾರ ಸರ್ವ ಪ್ರಯತ್ನ ಮಾಡುತ್ತಿರುವುದಾಗಿ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Vijaya Karnataka Web ಅಮಿತ್‌ ಶಾ
ಅಮಿತ್‌ ಶಾ


ಅತ್ಯಂತ ಪಾರದರ್ಶಕವಾಗಿ, ಆನ್‌ಲೈನ್ ಮೂಲಕ ಜನರಿಗೆ ಎಲ್ಲಾ ಮಾಹಿತಿ ದೊರೆಯುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಹೊಸದಿಲ್ಲಿಯಲ್ಲಿ ಕೇಂದ್ರೀಯ ಮಾಹಿತಿ ಆಯೋಗದ 14ನೇ ವಾರ್ಷಿಕ ಸಮಾವೇಶವನ್ನು ಉದ್ದೇಶಿಸಿ ಅವರು ಮಾತನಾಡಿ, ಸರಕಾರದ ಆಡಳಿತದ ಬಗ್ಗೆ ಸಾರ್ವಜನಿಕರು ವಿಶ್ವಾಸವಿಡುವಂತೆ ಮಾಡುವಲ್ಲಿ ಮತ್ತು ಭ್ರಷ್ಟಾಚಾರ ಹಾಗೂ ಅನ್ಯಾಯರಹಿತ ಆಡಳಿತವೊಂದನ್ನು ಸಾಧ್ಯಗೊಳಿಸುವಲ್ಲಿ ಮಾಹಿತಿ ಹಕ್ಕು ಕಾಯಿದೆ ಅಂದರೆ ಆರ್‌ಟಿಐ, ಪ್ರಮುಖ ಪಾತ್ರ ವಹಿಸಿದೆ ಎಂದು ತಿಳಿಸಿದರು.

ಪ್ರಧಾನಮಂತ್ರಿಗಳ ಕಾರ್ಯಾಲಯದ ರಾಜ್ಯ ಸಚಿವ ಡಾ.ಜಿತೇಂದ್ರಸಿಂಗ್ ಮಾತನಾಡಿ, ಯಾವುದೇ ಮಾಹಿತಿ ಪಡೆಯಲು ಈಗ ಸರಕಾರಿ ಕಚೇರಿಗಳ ಕೆಲಸದ ವೇಳೆಯನ್ನೇ ಅವಲಂಬಿಸಬೇಕಾಗಿಲ್ಲ. ಪ್ರತಿಯೊಂದು ವ್ಯವಸ್ಥೆಯನ್ನೂ ಆನ್‌ಲೈನ್‌ಗೆ ಅಳವಡಿಸುವ ಕೇಂದ್ರ ಸರಕಾರದ ಪ್ರಯತ್ನಗಳಿಂದ ದಿನದ 24 ತಾಸು ಅರ್ಜಿ ಸಲ್ಲಿಸಲು ಸಾಧ್ಯವಾಗಿದೆ ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ