ಆ್ಯಪ್ನಗರ

ಪ್ರತಿಭಟನೆ ಕೈಬಿಟ್ಟು ಮಾತುಕತೆಗೆ ಬನ್ನಿ: ಬಂಡೆದ್ದ ರೈತರಿಗೆ ಅಮಿತ್ ಶಾ ಮನವಿ!

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಕೈಬಿಡುವಂತೆ ರೈತರಲ್ಲಿ ಮನವಿ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸರ್ಕಾರ ಮಾತುಕತೆಗೆ ಸಿದ್ಧವಿದೆ ಎಂಬ ಸಂದೇಶ ರವಾನಿಸಿದ್ದಾರೆ.

Vijaya Karnataka Web 29 Nov 2020, 9:21 am
ಹೊಸದಿಲ್ಲಿ: ಕೇಂದ್ರ ಸರ್ಕಾರದ ಕೃಷಿ ಕಾನೂನುಗಳ ಜಾರಿಗೆ ವಿರೋಧಿಸಿ, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ರೈತರ ಭಾರೀ ಪ್ರತಿಭಟನೆ ಮುಂದುವರೆದಿದೆ.
Vijaya Karnataka Web Amit Shah.
ಸಂಗ್ರಹ ಚಿತ್ರ


ಈ ಮಧ್ಯೆ ಪ್ರತಿಭಟನೆಯನ್ನು ಕೈಬಿಡುವಂತೆ ರೈತರಲ್ಲಿ ಮನವಿ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸರ್ಕಾರ ಮಾತುಕತೆಗೆ ಸಿದ್ಧವಿದೆ ಎಂಬ ಸಂದೇಶ ರವಾನಿಸಿದ್ದಾರೆ.

ದೆಹಲಿಯಲ್ಲಿ ಈ ಕುರಿತು ಮಾತನಾಡಿದ ಅಮಿತ್ ಶಾ, ರೈತರು ಈಕೂಡಲೇ ಪ್ರತಿಭಟನೆಯನ್ನು ನಿಲ್ಲಿಸಿ ಸರ್ಕಾರದೊಂದಿಗೆ ಮಾತುಕತೆಗೆ ಮುಂದಾಗಬೇಕು ಎಂದು ಮನವಿ ಮಾಡಿದರು.

ದೆಹಲಿ ಮುತ್ತಿದ ರೈತ: 'ಹಸಿರು ಕ್ರಾಂತಿ'ಗೆ ಸಾಕ್ಷಿಯಾಗಲಿದೆ ಭಾರತ?

ಇದೇ ಡಿ.03(ಗುರುವಾರ)ರಂದು ರೈತ ಸಂಘಟನೆಗಳೊಂದಿಗೆ ಮಾತುಕತೆಗೆ ಸಿದ್ಧವಿರುವುದಾಗಿ ಈಗಾಗಲೇ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಮೇಲೆ ಭರವಸೆ ಇಟ್ಟು ಮಾತುಕತೆಗೆ ಬರುವಂತೆ ಅಮಿತ್ ಶಾ ರೈತರಲ್ಲಿ ಮನವಿ ಮಾಡಿದರು.


ಒಂದು ವೇಳೆ ರೈತ ಸಂಘಟನೆಗಳು ಡಿ.03ಕ್ಕೂ ಮೊದಲೇ ಮಾತುಕತೆ ನಡೆಸಲಯ ಬಯಸಿದರೆ, ನಾವು ಅದಕ್ಕೂ ಸಿದ್ಧವಿರುವುದಾಗಿ ಅಮಿತ್ ಶಾ ಇದೇ ವೇಳೆ ಭರವಸೆ ನೀಡಿದರು.

Farmers protest: ದಿಲ್ಲಿ ಪ್ರವೇಶಿಸಲು ಅನ್ನದಾತರಿಗೆ ಅನುಮತಿ, ಶಾಂತಿಯುತ ಪ್ರತಿಭಟನೆಗೆ ಸೂಚನೆ

ಕೇಂದ್ರ ಸರ್ಕಾರ ರೈತ ಸಮುದಾಯದ ಪರವಾಗಿದ್ದು, ಅವರಿಗೆ ಅನ್ಯಾಯವಾಗುವ ಯಾವುದೇ ಹೆಜ್ಜೆ ಇಡುವುದಿಲ್ಲ. ಹೀಗಾಗಿ ನಮ್ಮ ಮೇಲೆ ಭರವಸೆ ಇಟ್ಟು, ಪ್ರತಿಭಟನೆ ಕೈಬಿಟ್ಟು ರೈತರು ಮಾತುಕತೆಗೆ ಮುಂದಾಗಬೇಕು ಎಂದು ಅಮಿತ್ ಶಾ ಕಳಕಳಿಯ ಮನವಿ ಮಾಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ