ಆ್ಯಪ್ನಗರ

ಬಿಹಾರ ನಂತರ ‘ದೀದಿ’ ನಾಡಿನತ್ತ ಬಿಜೆಪಿ ಚಿತ್ತ; ಕುತೂಹಲ ಮೂಡಿಸಿದ ಅಮಿತ್‌ ಶಾ ಬಂಗಾಳ ಪ್ರವಾಸ..!

ಕಳೆದೊಂದು ವಾರದಿಂದ ಪಶ್ಚಿಮ ಬಂಗಾಳ ಬಿಜೆಪಿಯಲ್ಲಿ ಒಳಜಗಳ ನಡೆಯುತ್ತಿದ್ದು, ಗೃಹ ಸಚಿವ ಅಮಿತ್ ಶಾ ಅವರ ಭೇಟಿಯು ಪಕ್ಷದೊಳಗಿನ ಆಂತರಿಕ ಕಚ್ಚಾಟವನ್ನು ಕೊನೆಗೊಳಿಸುತ್ತೆ ಅಂತಾ ಹೇಳಲಾಗ್ತಿದೆ. ಇತ್ತೀಚೆಗೆ ಬಂಗಾಳದ ಬಿಜೆಪಿ ಹಿರಿಯ ನಾಯಕ ರಾಹುಲ್ ಸಿನ್ಹಾ ಅವರನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೈಬಿಟ್ಟು ತೃಣಮೂಲ ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದ ಮುಕುಲ್ ರಾಯ್ ಮತ್ತು ಅನುಪಮ್ ಹಜ್ರಾ ಅವರಿಗೆ ಪಕ್ಷದ ಉಪಾಧ್ಯಕ್ಷ ಸ್ಥಾನವನ್ನು ನೀಡಿದ್ದಕ್ಕೆ ಬಂಗಾಳ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿತ್ತು.

Vijaya Karnataka Web 3 Nov 2020, 4:48 pm
ಹೊಸದಿಲ್ಲಿ: ಬಿಹಾರದಲ್ಲಿ ಮತಬೇಟೆಯನ್ನು ಭರ್ಜರಿಯಾಗಿ ಆರಂಭಿಸಿರುವ ಬಿಜೆಪಿ ಚುನಾವಣೆ ಮುಗಿಯುತ್ತಿದ್ದಂತೆ ತನ್ನ ಮುಂದಿನ ಗುರಿಯನ್ನು ಪಶ್ಚಿಮ ಬಂಗಾಳದತ್ತ ನೆಟ್ಟಿರುವ ಹಾಗಿದೆ.
Vijaya Karnataka Web Amit Shah
ಸಂಗ್ರಹ ಚಿತ್ರ


ಇದಕ್ಕೆ ಸಾಕ್ಷಿಯೆಂಬಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇದೇ ಗುರುವಾರ ಮತ್ತು ಶುಕ್ರವಾರ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಕಳೆದ ಕೆಲ ತಿಂಗಳಿನಿಂದ ಅನಾರೋಗ್ಯದಿಂದ ಪಕ್ಷದ ಚಟುವಟಿಕೆಗಳಿಂದ ದೂರವುಳಿದಿದ್ದ ಅಮಿತ್ ಶಾ ಅತಿಯಾದ ಬಿಸಿಲು ಮತ್ತು ಧೂಳಿನ ಕಾರಣಕ್ಕಾಗಿ ಬಿಹಾರದ ಚುನಾವಾಣಾ ಪ್ರಚಾರದಲ್ಲಿ ಭಾಗಿಯಾಗಿರಲಿಲ್ಲ. ಆದರೆ ಇದೀಗ ಅವರು ದೀದಿಯ ನಾಡಿಗೆ ತೆರಳಲು ನಿರ್ಧರಿಸಿರೋದು ಸಾಕಷ್ಟು ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ಮೀಸಲಿಗೆ ಆಗ್ರಹ, ರಾಜಸ್ಥಾನದಲ್ಲಿ ತೀವ್ರಗೊಂಡ ಗುಜ್ಜಾರ್‌ ಸಮುದಾಯದ ಪ್ರತಿಭಟನೆ

ಪಶ್ಚಿಮ ಬಂಗಾಳದ ವಿಧಾನಸಭೆಯ ಅವಧಿ ಮುಂದಿನ ವರ್ಷಕ್ಕೆ ಅಂತ್ಯವಾಗಲಿದ್ದು, ಅಲ್ಲೂ ಕೂಡ ಚುನಾವಣೆ ಘೋಷಣೆಯಾಗಲಿದೆ. ಹೀಗಾಗಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಪಕ್ಷವನ್ನು ಈಗಿನಿಂದಲೇ ಬಲಿಷ್ಟಗೊಳಿಸಿ ಮುಂದಿನ ಚುನಾವಣೆಯನ್ನು ಸದೃಢವಾಗಿ ಎದುರಿಸಲು ಬಿಜೆಪಿ ಹೈಕಮಾಂಡ್ ಪ್ಲ್ಯಾನ್ ರೂಪಿಸಿದೆ ಎನ್ನಲಾಗಿದೆ.

ಇತ್ತೀಚೆಗೆ ಬಂಗಾಳದ ಬಿಜೆಪಿ ಹಿರಿಯ ನಾಯಕ ರಾಹುಲ್ ಸಿನ್ಹಾ ಅವರನ್ನು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೈಬಿಟ್ಟು ತೃಣಮೂಲ ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದ ಮುಕುಲ್ ರಾಯ್ ಮತ್ತು ಅನುಪಮ್ ಹಜ್ರಾ ಅವರಿಗೆ ಪಕ್ಷದ ಉಪಾಧ್ಯಕ್ಷ ಸ್ಥಾನವನ್ನು ನೀಡಿದ್ದಕ್ಕೆ ಬಂಗಾಳ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿತ್ತು. ಒಂದು ಕಾಲದಲ್ಲಿ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರ ಅತ್ಯಾಪ್ತರಾಗಿದ್ದ ಮುಕುಲ್ ರಾಯ್ ಅವರು ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗಿದ್ದರು.

ಕೇರಳ: ಖ್ಯಾತ ವಯೊಲಿನ್‌ ವಾದಕ ಟಿ.ಎನ್‌.ಕೃಷ್ಣನ್‌ ವಿಧಿವಶ, ಪ್ರಧಾನಿ ಮೋದಿ ಸಂತಾಪ!

ಕಳೆದೊಂದು ವಾರದಿಂದ ಪಶ್ಚಿಮ ಬಂಗಾಳ ಬಿಜೆಪಿಯಲ್ಲಿ ಒಳಜಗಳ ನಡೆಯುತ್ತಿದ್ದು, ಗೃಹ ಸಚಿವ ಅಮಿತ್ ಶಾ ಅವರ ಭೇಟಿಯು ಪಕ್ಷದೊಳಗಿನ ಆಂತರಿಕ ಕಚ್ಚಾಟವನ್ನು ಕೊನೆಗೊಳಿಸಿ ಬಂಗಾಳದಲ್ಲಿ ಬಿಜೆಪಿಯನ್ನು ಕ್ಯಾಂಪೇನ್‌ ಮೋಡ್‌ಗೆ ಕರೆತರುವಲ್ಲಿ ಯಶಸ್ವಿಯಾಗುತ್ತೆ ಅಂತಾ ಹೇಳಲಾಗ್ತಿದೆ. ಅಲ್ಲದೇ ಅಮಿತ್ ಶಾ ಅವರು ಎರಡು ದಿನದ ಬಂಗಾಳ ಭೇಟಿಯಲ್ಲಿ ಕೋಲ್ಕತ್ತಾ ಮತ್ತು ಬಂಕುರಾದಲ್ಲಿ ಬಿಜೆಪಿ ನಾಯಕರ ನಡುವೆ ಸಂಧಾನ ನಡೆಸಲಿದ್ದಾರೆ ಎಂದು ಹೇಳಲಾಗಿದೆ.

ಆಸ್ಟ್ರಿಯಾ ಜೊತೆ ನಾವಿದ್ದೇವೆ; ಉಗ್ರರ ದಾಳಿಗೆ ಬೆಚ್ಚಿದ ರಾಷ್ಟ್ರಕ್ಕೆ ನರೇಂದ್ರ ಮೋದಿ ಸಾಂತ್ವನ

ಇನ್ನೊಂದೆಡೆ ಅಮಿತ್ ಶಾ ಜೊತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಕೂಡ ಬಂಗಾಳಕ್ಕೆ ಭೇಟಿ ನೀಡಬೇಕಿತ್ತು. ಆದರೆ ಕೊನೆಹಂತದಲ್ಲಿ ಅವರ ಭೇಟಿ ರದ್ದುಗೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ