ಆ್ಯಪ್ನಗರ

ನರೇಂದ್ರ ದಾಬೋಲ್ಕರ್ ಹತ್ಯೆ ಕೇಸ್: ಸಿಬಿಐ ಕಸ್ಟಡಿಗೆ ಅಮೋಲ್ ಕಾಳೆ

ಗೌರಿ ಲಂಕೇಶ್‌ ಹತ್ಯೆ ಕೇಸಿನ ಪ್ರಮುಖ ಆರೋಪಿ ಅಮೋಲ್ ಕಾಳೆಯನ್ನು ಸಿಬಿಐ ಕಸ್ಟಡಿಗೆ ಒಪ್ಪಿಸಲಾಗಿದೆ. ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆಯಲ್ಲಿ ಕಾಳೆ ಕೈವಾಡವಿದೆಯೆಂಬ ಆರೋಪ ಕೇಳಿಬಂದ ಹಿನ್ನೆಲೆ ಮಹಾರಾಷ್ಟ್ರ ಪೊಲೀಸರು ಆತನನ್ನು ಬೆಂಗಳೂರಿನಿಂದ ಪುಣೆಗೆ ಕರೆದೊಯ್ದಿದ್ದಾರೆ.

Vijaya Karnataka Web 6 Sep 2018, 5:47 pm
ಮುಂಬಯಿ: ಗೌರಿ ಲಂಕೇಶ್‌ ಹತ್ಯೆ ಕೇಸಿನ ಪ್ರಮುಖ ಆರೋಪಿ ಅಮೋಲ್ ಕಾಳೆಯನ್ನು ಸಿಬಿಐ ಕಸ್ಟಡಿಗೆ ಒಪ್ಪಿಸಲಾಗಿದೆ. ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆಯಲ್ಲಿ ಕಾಳೆ ಕೈವಾಡವಿದೆಯೆಂಬ ಆರೋಪ ಕೇಳಿಬಂದ ಹಿನ್ನೆಲೆ ಮಹಾರಾಷ್ಟ್ರ ಪೊಲೀಸರು ಆತನನ್ನು ಬೆಂಗಳೂರಿನಿಂದ ಪುಣೆಗೆ ಕರೆದೊಯ್ದಿದ್ದಾರೆ.
Vijaya Karnataka Web narendra dabholkar


ಆರೋಪಿ ಅಮೋಲ್‌ ಕಾಳೆಯನ್ನು ಪುಣೆ ಸೆಷನ್‌ ನ್ಯಾಯಾಲಯ ಸೆಪ್ಟೆಂಬರ್‌ 14 ರವರೆಗೆ ಸಿಬಿಐ ಕಸ್ಟಡಿಗೆ ಒಪ್ಪಿಸಿದೆ. ಸಿಬಿಐ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದ ಅಧಿಕಾರಿಗಳು, ಇಂದು ಬೆಳಗ್ಗೆ ಆತನನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.

ಗೌರಿ ಲಂಕೇಶ್ ಹತ್ಯೆಯ ಪ್ರಮುಖ ಆರೋಪಿಯಾಗಿರುವ ಆತನನ್ನು ಬೆಂಗಳೂರಿನಿಂದ ನಿನ್ನೆ ಮುಂಬಯಿಗೆ ವಿಮಾನದ ಮೂಲಕ ಕರೆದೊಯ್ಯಲಾಗಿತ್ತು. ನಂತರ, ಇಂದು ಬೆಳಗ್ಗೆ ಕೆಲ ಕಾಲ ವಿಚಾರಣೆ ನಡೆಸಿದ ಬಳಿಕ ಆತನದ ಬಂಧನದ ಬಗ್ಗೆ ಸಿಬಿಐ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ