ಆ್ಯಪ್ನಗರ

ಚಂದ್ರಬಾಬು ನಾಯ್ಡು, ಪುತ್ರನ ಝಡ್ ಪ್ಲಸ್ ಭದ್ರತೆ ಹಿಂಪಡೆದ ಜಗನ್ ಸರಕಾರ: ಇದು ಸೇಡಿನ ರಾಜಕೀಯ ಎಂದ ಟಿಡಿಪಿ

ಮಾಜಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರಿಗೆ ನೀಡಿದ್ದ ಝಡ್ ಪ್ಲಸ್ ಭದ್ರತೆಯನ್ನು ಆಂಧ್ರ ಪ್ರದೇಶದ ಜಗನ್‌ಮೋಹನ್ ರೆಡ್ಡಿ ಸರಕಾರ ಹಿಂಪಡೆದಿದ್ದು, ಇಬ್ಬರು ಗನ್‌ಮೆನ್‌ ಭದ್ರತೆ ಮಾತ್ರ ನೀಡಿದೆ. ಅವರ ಕುಟುಂಬದ ಇತರ ಸದಸ್ಯರಿಗೆ ನೀಡಿದ್ದ ಭದ್ರತೆಯನ್ನು ಸಂಪೂರ್ಣ ರದ್ದುಪಡಿಸಲಾಗಿದೆ. ಇದು ರಾಜಕೀಯ ಹಗೆ ಸಾಧನೆ ಎಂದು ಟಿಡಿಪಿ ದೂರಿದೆ.

Times Now 25 Jun 2019, 4:34 pm
ಹೈದರಾಬಾದ್: ತೆಲುಗುದೇಶಂ ವರಿಷ್ಠ, ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಅವರಿಗೆ ನೀಡಿದ್ದ ಝಡ್ ಪ್ಲಸ್ ಭದ್ರತೆಯನ್ನು ಮುಖ್ಯಮಂತ್ರಿ ಜಗನ್‌ಮೋಹನ್ ರೆಡ್ಡಿ ಸರಕಾರ ರದ್ದುಪಡಿಸಿದೆ.
Vijaya Karnataka Web Jagan Reddy- Chandrababu Naidu


ನಾಯ್ಡು ಮತ್ತು ಅವರ ಪುತ್ರ, ಮಾಜಿ ಸಚಿವ ನಾರಾ ಲೋಕೇಶ್ ಅವರಿಗೆ ಇಬ್ಬರು ಗನ್‌ಮೆನ್‌ಗಳ ಭದ್ರತೆ ಮಾತ್ರ ನೀಡಲು ಸರಕಾರ ನಿರ್ಧರಿಸಿದೆ. ಅವರ ಕುಟುಂಬ ಸದಸ್ಯರಿಗೆ ನೀಡಿದ್ದ ಭದ್ರತೆಯನ್ನು ಸಂಪೂರ್ಣ ಹಿಂಪಡೆಯಲಾಗಿದೆ.

ನಾಯ್ಡು ಅವರ ಒಂದು ವರ್ಷದ ಮೊಮ್ಮಗನಿಗೂ ನೀಡಿದ್ದ ವಿಶೇಷ ಭದ್ರತೆಯನ್ನು ವಾಪಸ್ ಪಡೆಯಲಾಗಿದೆ.


ನಾಯ್ಡು ಮುಖ್ಯಮಂತ್ರಿಯಾಗಿದ್ದಾಗ ತಮಗೆ ನಕ್ಸಲರಿಂದ ಜೀವಬೆದರಿಕೆ ಇದೆ ಎಂಬ ಕಾರಣಕ್ಕೆ ಝಡ್‌ ಪ್ಲಸ್ ಭದ್ರತೆ ಪಡೆದುಕೊಂಡಿದ್ದರು.

ನಾಯ್ಡು ಅವರು ಈಗ ಮುಖ್ಯಮಂತ್ರಿ ಆಗಿರದ ಕಾರಣ ಜೀವಬೆದರಿಕೆ ಈಗ ಇಲ್ಲ. ಆದ್ದರಿಂದ ವಿಶೇಷ ಭದ್ರತೆಯನ್ನು ರದ್ದುಪಡಿಸಲಾಗಿದೆ ಎಂದು ಜಗನ್ ಸರಕಾರ ತಿಳಿಸಿದೆ.

ಎರಡು ತಿಂಗಳ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದು ಅಧಿಕಾರಕ್ಕೆ ಬಂದ ಜಗನ್ಮೋಹನ್ ರೆಡ್ಡಿ ಅವರ ವೈಎಸ್ಸಾರ್‌ಸಿಪಿ ಸರಕಾರ ರಾಜಕೀಯ ಹಗೆ ಸಾಧಿಸುತ್ತಿದೆ ಎಂದು ಟಿಡಿಪಿ ದೂರಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ