ಆ್ಯಪ್ನಗರ

ಅನರ್ಹ ಶಾಸಕರಿಗೆ ಮತ್ತೆ ಹಿನ್ನಡೆ: ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ಕರ್ನಾಟಕ ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿ ನಡೆಸಿ, ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರ ಬೀಳಲು ಕಾರಣರಾಗಿದ್ದ ಶಾಸಕರನ್ನು ಸ್ಪೀಕರ್ ಅನರ್ಹಗೊಳಿಸಿದ್ದರು. ಸ್ಪೀಕರ್ ನಿರ್ಣಯ ಪ್ರಶ್ನಿಸಿ ಅನರ್ಹರು ಕಾನೂನು ಹೋರಾಟದ ಮೊರೆ ಹೋಗಿದ್ದು, ಅವರ ಸಮಸ್ಯೆ ಇನ್ನು ಕಗ್ಗಂಟಾಗಿಯೇ ಮುಂದುವರಿದಿದೆ.

Vijaya Karnataka Web 17 Sep 2019, 11:21 am
ಹೊಸದಿಲ್ಲಿ: ಸ್ಪೀಕರ್ ನೀಡಿದ್ದ ಅನರ್ಹತೆ ಆದೇಶ ಪ್ರಶ್ನಿಸಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ನ 17 ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಮತ್ತೆ ಮುಂದೂಡಿದೆ. ಇದರಿಂದ ಬೇಗ ನಿರ್ಣಯ ಸಿಗಲಿ ಎಂದು ಕಾದು ಕುಳಿತಿರುವ ಅನರ್ಹರಿಗೆ ಮತ್ತೆ ನಿರಾಶೆಯಾಗಿದೆ.
Vijaya Karnataka Web Supreme Court 1


ನ್ಯಾಯಮೂರ್ತಿ ಮೋಹನ್ ಶಾಂತನಗೌಡರ್ ವಿಚಾರಣೆಯಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಪೀಠಕ್ಕೆ ಬೇರೊಬ್ಬ ನ್ಯಾಯಮೂರ್ತಿ ನೇಮಕವಾಗಬೇಕಿದೆ. ಹೀಗಾಗಿ ವಿಚಾರಣೆ ಮುಂದಿನ ಸೋಮವಾರಕ್ಕೆ (ಸೆಪ್ಟೆಂಬರ್ 23) ಮುಂದೂಡಲ್ಪಟ್ಟಿದೆ.

ತ್ವರಿತ ವಿಚಾರಣೆ ನಡೆಸುವಂತೆ ಈ ಮೊದಲು ನಾಲ್ಕು ಬಾರಿ ಅನರ್ಹರು ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್‌ ನಿರಾಕರಿಸಿತ್ತು. ಸುಪ್ರೀಂ ಕೋರ್ಟ್‌ ರಿಜಿಸ್ಟರ್‌ ಮೂಲಕ ಲಿಸ್ಟ್‌ ಆಗಲಿ ಎಂದು ತಿಳಿಸಿತ್ತು. ಇಂದು ಎಂ.ವಿ.ರಮಣ್‌ ನೇತೃತ್ವದ ಪೀಠ ವಿಚಾರಣೆ ನಡೆಸಬೇಕಿತ್ತು. ಆದರೆ ಪೀಠದ ಸದಸ್ಯರಾಗಿದ್ದ ಶಾಂತನಗೌಡರ್ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.

ಎಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರ್ಕಾರಕ್ಕೆ ಬೆಂಬಲ ಹಿಂಪಡೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್-ಜೆಡಿಎಸ್‌ನ 17 ಶಾಸಕರು ತಮ್ಮ ರಾಜೀನಾಮೆ ಅಂಗೀಕರಿಸುವಂತೆ ವಿಧಾನಸಭಾಧ್ಯಕ್ಷರಿಗೆ ನಿರ್ದೇಶನ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು.

ಸುಪ್ರೀಂ ಕೋರ್ಟ್ ಈ ಅರ್ಜಿಗಳ ಕುರಿತು ಅಂತಿಮ ತೀರ್ಪು ನೀಡುವ ಮುನ್ನವೇ ಸಭಾಧ್ಯಕ್ಷ ರಮೇಶ್ ಕುಮಾರ್ 17 ಶಾಸಕರನ್ನು ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ, ತೀರ್ಪು ನೀಡಿದ್ದರು. ಸಭಾಧ್ಯಕ್ಷರ ನಿರ್ಧಾರ ಪ್ರಶ್ನಿಸಿ, 17 ಮಂದಿ ಬಂಡಾಯ ಶಾಸಕರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರಲ್ಲದೆ, ಅನರ್ಹಗೊಳಿಸಿದ ತೀರ್ಪನ್ನು ರದ್ದುಗೊಳಿಸುವಂತೆ ಕೋರಿದ್ದರು.

ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರ 17 ಅನರ್ಹ ಶಾಸಕರ ಅರ್ಜಿ ವಿಚಾರಣೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ