ಆ್ಯಪ್ನಗರ

ಉತ್ತರಕ್ಕೆ ಮತ್ತೊಂದು ಬಿರುಗಾಳಿ ಎಚ್ಚರಿಕೆ

ಜಮ್ಮು ಮತ್ತು ಕಾಶ್ಮೀರ, ಹರಿಯಾಣ, ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದ ಭಾಗಕ್ಕೆ ಇಂದು ಹಾಗೂ ಮಂಗಳವಾರ ಬಿರುಗಾಳಿ ಸಹಿತ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿದೆ.

TIMESOFINDIA.COM 7 May 2018, 10:48 am
ಹೊಸದಿಲ್ಲಿ: ಮರಳ ಸುನಾಮಿಯ ಸೂತಕದ ಛಾಯೆ ಮಾಸುವ ಮುನ್ನ ಉತ್ತರದ ರಾಜ್ಯಗಳಿಗೆ ಮತ್ತೊಂದು ಬಿರುಗಾಳಿ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Vijaya Karnataka Web storm


ಜಮ್ಮು ಮತ್ತು ಕಾಶ್ಮೀರ, ಹರಿಯಾಣ, ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದ ಭಾಗಕ್ಕೆ ಇಂದು ಹಾಗೂ ಮಂಗಳವಾರ ಬಿರುಗಾಳಿ ಸಹಿತ ಗುಡುಗು ಸಿಡಿಲಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಗಳಿದೆ. ಗಂಟೆಗೆ ಅಂದಾಜು 50 ಕಿ.ಮೀಗೂ ಅಧಿಕ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಗಳು ಹೆಚ್ಚಿವೆ. ಅಂತೆಯೇ ಆಲಿಕಲ್ಲಿನ ಮಳೆಯಾಗುವ ಸಂಭವವೂ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಈ ಸಂಬಂಧ ಹರಿಯಾನ ಶಿಕ್ಷಣ ಸಚಿವ ರಾಮ್‌ ಬಿಲಾಸ್‌ ಶರ್ಮ ಮಂಗಳವಾರದ ವರೆಗೆ ಎಲ್ಲ ಶಾಲೆಗಳಿಗೆ ರಜೆ ನೀಡುವಂತೆ ಆದೇಶಿಸಿದ್ದಾರೆ.

ಕಳೆದ ವಾರ ಮರಳ ಸುನಾಮಿಗೆ ರಾಜಸ್ಥಾನ, ಉತ್ತರ ಪ್ರದೇಶ ಸೇರಿದಂತೆ ದೇಶದ ಉತ್ತರ ಭಾಗದಲ್ಲಿ ಉಂಟಾದ ಭೀಕರ ಬಿರುಗಾಳಿಗೆ 129 ಮಂದಿ ಸಾವನ್ನಪ್ಪಿ, 200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ