ಆ್ಯಪ್ನಗರ

ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್‌ ಅರೆಸ್ಟ್

ಸಿಎಎ ಮತ್ತು ಎನ್‌ಆರ್‌ಸಿ ವಿರೋಧಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೈದರಾಬಾದ್‌ಗೆ ಆಗಮಿಸಿದ್ದ ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್‌ ಅವರನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.

Vijaya Karnataka Web 14 Dec 2022, 12:14 pm
ಹೈದರಾಬಾದ್‌: ಪೌರತ್ವ ತಿದ್ದಿಪಡಿ ಕಾಯಿದೆ (ಸಿಎಎ) ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ವಿರೋಧಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೈದರಾಬಾದ್‌ಗೆ ಆಗಮಿಸಿದ್ದ ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಆಜಾದ್‌ ಅವರನ್ನು ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.
Vijaya Karnataka Web Bhim Army Chief Chandrashekhar Azad


ಸಿಎಎ ಮತ್ತು ಎನ್‌ಆರ್‌ಸಿ ಜಾರಿ ವಿರೋಧಿಸಿ ನಗರದಲ್ಲಿ ಕೆಲವು ಸಂಘಟನೆಗಳು ಪ್ರತಿಭಟನಾ ಕಾರ್ಯಕ್ರಮ ಆಯೋಜಿಸಿದ್ದವು. ಇದರಲ್ಲಿ ಪಾಲ್ಗೊಂಡು ಮಾತನಾಡಲು ಆಜಾದ್‌ ಉತ್ತರಪ್ರದೇಶದಿಂದ ಆಗಮಿಸಿದ್ದರು. ಕಾರ್ಯಕ್ರಮ ಸ್ಥಳಕ್ಕೆ ತೆರಳುವ ಮಾರ್ಗ ಮಧ್ಯ ಅವರನ್ನು ತಡೆದ ಪೊಲೀಸರು ವಶಕ್ಕೆ ಪಡೆದರು. ''ಪ್ರತಿಭಟನಾ ಕಾರ್ಯಕ್ರಮಕ್ಕೆ ಅನುಮತಿಯೇ ನೀಡಿರಲಿಲ್ಲ. ಅಕ್ರಮವಾಗಿಯೇ ಆಯೋಜಿಸಲಾಗಿತ್ತು. ಆದ್ದರಿಂದ ಅದನ್ನು ತಡೆಯಲಾಗಿದೆ,'' ಎಂದು ಪೊಲೀಸರು ತಿಳಿಸಿದ್ದಾರೆ.

ಸಿಎಎ ವಿರೋಧಿಸಿ ದಿಲ್ಲಿ ಜಾಮಾ ಮಸೀದಿಯಲ್ಲಿನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಬಂಧಿತರಾಗಿದ್ದ ಆಜಾದ್‌, ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ದಿಲ್ಲಿಪ್ರ ವೇಶಿಸದಂತೆ ಸುಪ್ರೀಂ ಕೋರ್ಟ್‌ ಆಜಾದ್‌ಗೆ ನಿರ್ಬಂಧ ವಿಧಿಸಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ