ಆ್ಯಪ್ನಗರ

ಸಿಖ್ ವಿರೋಧಿ ದಂಗೆ: ಸಜ್ಜನ್ ಕುಮಾರ್ ದಿಲ್ಲಿ ಕೋರ್ಟ್‌ಗೆ ಶರಣು

ಸಜ್ಜನ್ ಕುಮಾರ್‌ನ್ನು ಮಾಂಡೊಲಿ ಜೈಲ್‌ಗೆ ಕಳುಹಿಸಲಾಗಿದೆ. ಜತೆಗೆ ಭದ್ರತಾ ಕಾರಣಕ್ಕಾಗಿ ವಿಶೇಷ ವಾಹನ ವ್ಯವಸ್ಥೆ ಮಾಡುವಂತೆ ನ್ಯಾಯಾಲಯ ಸೂಚನೆ ನೀಡಿದೆ.

Vijaya Karnataka Web 31 Dec 2018, 6:10 pm
ಹೊಸದಿಲ್ಲಿ: 1984ರ ಸಿಖ್ ವಿರೋಧಿ ದಂಗೆ ಪ್ರಕರಣದ ದೋಷಿ, ಕಾಂಗ್ರೆಸ್ ನಾಯಕ ಸಜ್ಜನ್ ಕುಮಾರ್ ಸೋಮವಾರ ದಿಲ್ಲಿ ಕೋರ್ಟ್‌ಗೆ ಶರಣಾಗಿದ್ದಾರೆ.

ಪ್ರಕರಣದ ವಿಚಾರಣೆ ನಡೆಸಿದ್ದ ದಿಲ್ಲಿ ಹೈಕೋರ್ಟ್ ಡಿ. 17ರಂದು ಸಜ್ಜನ್ ಕುಮಾರ್‌ಗೆ ಅಜೀವ ಜೈಲು ಶಿಕ್ಷೆ ವಿಧಿಸಿತ್ತು.

ಕೋರ್ಟ್ ತೀರ್ಪಿನ ವಿರುದ್ದ ಡಿ. 21ರಂದು ಸಜ್ಜನ್ ಕುಮಾರ್ ಶರಣಾಗತಿಯನ್ನು ಮುಂದೂಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಆದರೆ ಸಜ್ಜನ್ ಅರ್ಜಿಯನ್ನು ತಿರಸ್ಕರಿಸಿದ್ದ ಕೋರ್ಟ್, ಡಿ. 31ರೊಳಗಾಗಿ ನ್ಯಾಯಾಲಯಕ್ಕೆ ಶರಣಾಗುವಂತೆ ಸೂಚಿಸಿತ್ತು.

ಸಜ್ಜನ್ ಕುಮಾರ್‌ನ್ನು ಮಾಂಡೊಲಿ ಜೈಲ್‌ಗೆ ಕಳುಹಿಸಲಾಗಿದೆ. ಜತೆಗೆ ಭದ್ರತಾ ಕಾರಣಕ್ಕಾಗಿ ವಿಶೇಷ ವಾಹನ ವ್ಯವಸ್ಥೆ ಮಾಡುವಂತೆ ನ್ಯಾಯಾಲಯ ಸೂಚನೆ ನೀಡಿದೆ.

ಸಜ್ಜನ್ ಕುಮಾರ್ ಶರಣಾಗತಿಗೂ ಮೊದಲು ಮಾಜಿ ಶಾಸಕ ಕಿಶನ್ ಖೋಖರ್ ಮತ್ತು ಮಹೇಂದರ್ ಯಾದವ್ ಕೂಡ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

1984ರ ಅ. 31ರಂದು ಇಂದಿರಾ ಗಾಂಧಿ ಹತ್ಯೆಯಾದ ಬಳಿಕ ಸಿಖ್ ವಿರೋಧಿ ದಂಗೆ ಏರ್ಪಟ್ಟಿತ್ತು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ