ಆ್ಯಪ್ನಗರ

ಲೋಕಸಭೆಯಲ್ಲಿ ನೆಹರೂ ಕುರಿತಾದ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಅನುರಾಗ್ ಠಾಕೂರ್!

ಲೋಕಸಭೆಯಲ್ಲಿ ಪಿಎಂ ಕೇರ್ಸ್ ಕುರಿತ ಚರ್ಚೆಯಲ್ಲಿ ನೆಹರೂ-ಗಾಂಧಿ ಪರಿವಾರವನ್ನು ಎಳೆದು ತಂದು ವಿವಾದಕ್ಕೆ ಕಾರಣರಾದ ಕೇಂದ್ರ ಸಚಿವ ಅನುರಾಗ್ ಠಾಕೂರ್, ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ. ​ತಮ್ಮ ಹೇಳಿಕೆಯ ಹಿಂದೆ ಯಾರನ್ನೂ ನೋಯಿಸುವ ಉ​​ದ್ದೇಶವಿರಲಿಲ್ಲ ಠಾಕೂರ್ ಸ್ಪಷ್ಟಪಡಿಸಿದ್ದಾರೆ.

Vijaya Karnataka Web 18 Sep 2020, 7:14 pm
ನವದೆಹಲಿ: ಲೋಕಸಭೆಯಲ್ಲಿ ಪಿಎಂ ಕೇರ್ಸ್ ಕುರಿತ ಚರ್ಚೆಯಲ್ಲಿ ನೆಹರೂ-ಗಾಂಧಿ ಪರಿವಾರವನ್ನು ಎಳೆದು ತಂದು ವಿವಾದಕ್ಕೆ ಕಾರಣರಾದ ಕೇಂದ್ರ ಸಚಿವ ಅನುರಾಗ್ ಠಾಕೂರ್, ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.
Vijaya Karnataka Web Anurag Thakur
ನೆಹರೂ ಕುರಿತು ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಅನುರಾಗ್ ಠಾಕೂರ್


ಅನುರಾಗ್ ಠಾಕೂರ್ ಹೇಳಿಕೆ ಖಂಡಿಸಿ ಕಾಂಗ್ರೆಸ್ ತೀವ್ರ ಗದ್ದಲ ಎಬ್ಬಿಸಿದ ಪರಿಣಾಮ, ಸ್ಪೀಕರ್ ಕಲಾಪವನ್ನು ಒಟ್ಟು ನಾಲ್ಕು ಬಾರಿ ಮುಂದೂಡಿದ್ದರು. ಮತ್ತೆ ಕಲಾಪ ಆರಂಭವಾದಾಗ ಅನುರಾಗ್ ಠಾಕೂರ್ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದರು.

ತಮ್ಮ ಹೇಳಿಕೆಯ ಹಿಂದೆ ಯಾರನ್ನೂ ನೋಯಿಸುವ ಉದ್ದೇಶವಿರಲಿಲ್ಲ ಎಂದು ಸ್ಪಷ್ಟಪಡಿಸಿರುವ ಅನುರಾಗ್ ಠಾಕೂರ್, ತಮ್ಮ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಅದಕ್ಕೆ ವಿಷಾದ ವ್ಯಕ್ತಪಡಿಸುವುದಾಗಿ ಸ್ಪಷ್ಟಪಡಿಸಿದರು.


ಪಿಎಂ ಕೇರ್ಸ್ ಸಂಬಂಧಿ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ್ದ ಅನುರಾಗ್ ಠಾಕೂರ್, ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ 1948ರಲ್ಲಿ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ ಸ್ಥಾಪಿಸಿದ್ದರು. ಆದರೆ ಇದುವರೆಗೂ ಅದರ ನೋಂದಣಿಯಾಗಿಲ್ಲ. ಕಾಂಗ್ರೆಸ್‌ನವರು ಕೇವಲ ಗಾಂಧಿ ಪರಿವಾರದ ಲಾಭಕ್ಕಾಗಿ ಕೆಲಸ ಮಾಡುತ್ತಾರೆ ಎಂದು ಗಂಭೀರ ಆರೋಪ ಮಾಡಿದ್ದರು.

ಇದರಿಂದ ಕೆರಳಿದ ಕಾಂಗ್ರೆಸ್ ಸದಸ್ಯರು ಅನುರಾಗ್ ಠಾಕೂರ್ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದರಲ್ಲದೇ, ತಮ್ಮ ಹೇಳಿಕೆಗೆ ಠಾಕೂರ್ ಸದನದ ಕ್ಷಮೆ ಕೋರಬೇಕು ಎಂದು ಒತ್ತಾಯಿಸಿದರು.

ನೆಹರೂ ಕುರಿತ ಅನುರಾಗ್ ಠಾಕೂರ್ ಹೇಳಿಕೆಗೆ ಕಾಂಗ್ರೆಸ್ ಆಕ್ರೋಶ: ಕಲಾಪ ಮುಂದೂಡಿದ ಸ್ಪೀಕರ್!

ಈ ವೇಳೆ ಆಡಳಿತ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ತೀವ್ರ ವಾಗ್ವಾದ ನಡೆದು, ಸ್ಪೀಕರ್ ಒಟ್ಟು ನಾಲ್ಕು ಬಾರಿ ಕಲಾಪವನ್ನು ಮುಂದೂಡಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ