ಆ್ಯಪ್ನಗರ

ಷರೀಫ್‌ ವಿರುದ್ಧದ ಅರ್ಜಿ ವಜಾ

ಪದಚ್ಯುತ ಪ್ರಧಾನಿ ನವಾಜ್‌ ಷರೀಫ್‌ ಅವರನ್ನು 'ದೇಶದ್ರೋಹ' ಆರೋಪದಡಿ ವಿಚಾರಣೆಗೆ ಗುರಿಪಡಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಪಾಕಿಸ್ತಾನ ಸುಪ್ರೀಂ ಕೋರ್ಟ್‌ ಗುರುವಾರ ವಜಾಗೊಳಿಸಿದೆ.

Vijaya Karnataka 18 May 2018, 9:28 am
ಲಾಹೋರ್‌: ಪದಚ್ಯುತ ಪ್ರಧಾನಿ ನವಾಜ್‌ ಷರೀಫ್‌ ಅವರನ್ನು 'ದೇಶದ್ರೋಹ' ಆರೋಪದಡಿ ವಿಚಾರಣೆಗೆ ಗುರಿಪಡಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಮೂರು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಪಾಕಿಸ್ತಾನ ಸುಪ್ರೀಂ ಕೋರ್ಟ್‌ ಗುರುವಾರ ವಜಾಗೊಳಿಸಿದೆ.
Vijaya Karnataka Web Pak PM


ಪಾಕಿಸ್ತಾನದಲ್ಲಿ ಮೂರು ಬಾರಿ ಪ್ರಧಾನಿ ಪಟ್ಟಕ್ಕೇರಿದ್ದ ಷರೀಫ್‌ ಅವರು ಕಳೆದ ವಾರ ಸಂದರ್ಶನವೊಂದರಲ್ಲಿ, ಉಗ್ರರನ್ನು ಗಡಿಯಾಚೆ ನುಗ್ಗಿಸಿ ಮುಂಬಯಿಯಲ್ಲಿ ಮಾರಣಹೋಮ ನಡೆಸಿದ ಪಾಕಿಸ್ತಾನದ ನೀತಿಯನ್ನು ಖಂಡಿಸಿದ್ದರು. ಅಲ್ಲದೆ, ಪಾಕಿಸ್ತಾನದಲ್ಲಿ ಉಗ್ರಗಾಮಿ ಸಂಘಟನೆಗಳು ಸಕ್ರಿಯವಾಗಿವೆ ಎಂದು ಸಾರ್ವಜನಿಕವಾಗಿ ಒಪ್ಪಿಕೊಂಡಿದ್ದರು. ಅವರ ಈ ಹೇಳಿಕೆಗಳು ಭಾರಿ ವಿವಾದ ಹುಟ್ಟುಹಾಕಿದ್ದವು. ಜತೆಗೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ರಾಷ್ಟ್ರೀಯ ಭದ್ರತಾ ಸಮಿತಿ ಕೂಡ ಷರೀಫ್‌ ಹೇಳಿಕೆಯನ್ನು ಖಂಡಿಸಿತ್ತು.

ಪ್ರಮುಖ ಪ್ರತಿಪಕ್ಷಗಳಾದ ತೆಹ್ರೀಕ್‌-ಇ-ಇನ್ಸಾಫ್‌ ಮತ್ತು ಪಾಕಿಸ್ತಾನಿ ಆವಾಮಿ ತೆಹ್ರೀಕ್‌ ಹಾಗೂ ಮಾನವ ಹಕ್ಕುಗಳ ಕಾರ್ಯಕರ್ತ, ವಕೀಲ ಅಬ್ದುಲ್ಲಾ ಮಲಿಕ್‌ ಮಾಜಿ ಪ್ರಧಾನಿ ವಿರುದ್ಧ ದೇಶದ್ರೋಹದ ಆರೋಪ ಹೊರಿಸಿ ಸುಪ್ರೀಂ ಕೋರ್ಟ್‌ಗೆ ಮೂರು ಅರ್ಜಿ ಸಲ್ಲಿಸಿದ್ದರು. ಇವು 'ಸಮರ್ಥನೀಯವಲ್ಲದ ಅರ್ಜಿಗಳು' ಎಂದು ಕೋರ್ಟ್‌ ವಜಾಗೊಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ