ಆ್ಯಪ್ನಗರ

ಬಹುಪತ್ನಿತ್ವಕ್ಕಿಂತ ಅಯೋಧ್ಯೆ ಮಹತ್ವದ್ದು: ಸುಪ್ರೀಂಗೆ ಅರ್ಜಿ

ಅಯೋಧ್ಯೆ ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ಶಿಫಾರಸು ಮಾಡಬೇಕೆಂದು ಕೋರಿ ಹಿರಿಯ ವಕೀಲ ರಾಜೀವ್‌ ಧವನ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

TIMESOFINDIA.COM 7 Apr 2018, 10:16 am
ಹೊಸದಿಲ್ಲಿ: ಅಯೋಧ್ಯೆ ಪ್ರಕರಣವನ್ನು ಸಾಂವಿಧಾನಿಕ ಪೀಠಕ್ಕೆ ಶಿಫಾರಸು ಮಾಡಬೇಕೆಂದು ಕೋರಿ ಹಿರಿಯ ವಕೀಲ ರಾಜೀವ್‌ ಧವನ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
Vijaya Karnataka Web SUPREEMCOURT

ಅಯೋಧ್ಯೆ ವಿಚಾರದಲ್ಲಿ ಮುಸ್ಲಿಂ ಸಂಘಟನೆಗಳ ಪರ ವಕೀಲರೂ ಆಗಿರುವ ಧವನ್‌ ಅವರು, ಅಯೋಧ್ಯೆ ಪ್ರಕರಣವು ಮುಸ್ಲಿಮರ ಬಹುಪತ್ನಿತ್ವ ಪ್ರಕರಣಕ್ಕಿಂತಲೂ ಮಹತ್ವವಾದದ್ದು ಎಂದು ಅರ್ಜಿಯಲ್ಲಿ ಹೇಳಿದ್ದಾರೆ.

''ಮುಸ್ಲಿಮರಲ್ಲಿರುವ ಬಹು ಪತ್ನಿತ್ವಕ್ಕಿಂತಲೂ ಅಯೋಧ್ಯೆ ಪ್ರಕರಣ ಮಹತ್ವದ್ದು. ಇಡೀ ದೇಶ ಈ ಪ್ರಕರಣದಲ್ಲಿ ಉತ್ತರಕ್ಕಾಗಿ ಕಾಯುತ್ತಿದೆ,'' ಎಂದು ಅವರು ಪ್ರತಿಪಾದಿಸಿದ್ದಾರೆ. ಮುಸ್ಲಿಂ ಸಮುದಾಯದಲ್ಲಿ ಬಹುಪತ್ನಿತ್ವದ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಮುಖ್ಯ ನ್ಯಾ. ದೀಪಕ್‌ ಮಿಶ್ರಾ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್‌ ಪೀಠ, ಇತ್ತೀಚೆಗಷ್ಟೇ ಸಂವಿಧಾನ ಪೀಠಕ್ಕೆ ವರ್ಗಾಯಿಸಿತ್ತು. ಹೀಗಾಗಿ ಅಯೋಧ್ಯೆ ಪ್ರಕರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ವಕೀಲರು ಮನವಿ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ