ಆ್ಯಪ್ನಗರ

ಜಮ್ಮು ಕಾಶ್ಮೀರದಲ್ಲಿ ಪರಿಸ್ಥಿತಿ ನಿಭಾಯಿಸಲು ಸೇನೆ ಸರ್ವ ಸನ್ನದ್ಧ: ಬಿಪಿನ್‌ ರಾವತ್‌

ಸಂವಿಧಾನದ 370ನೇ ರದ್ದು ಮಾಡುವ ಕೇಂದ್ರ ಸರಕಾರದ ನಿರ್ಧಾರದ ಬೆನ್ನಲ್ಲೇ ಜಮ್ಮು ಕಾಶ್ಮೀರದಲ್ಲಿ ಪರಿಸ್ಥಿತಿ ಬಿಗುವಿನಿಂದ ಹಾಗೂ ಬೂದಿ ಮುಚ್ಚಿದ ಕೆಂಡದಂತಿದೆ.

Vijaya Karnataka Web 13 Aug 2019, 8:25 pm
ಹೊಸದಿಲ್ಲಿ: ಜಮ್ಮು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಹೆಚ್ಚುವರಿ ಸೇನೆಯನ್ನು ನಿಯೋಜಿಸರುವುದು ತಿಳಿದುಬಂದಿದೆ. ಆದರೆ ಭಾರತೀಯ ಸೇನೆ ಯಾವುದೇ ಪರಿಸ್ಥಿತಿ ಎದುರಿಸಲು ಸಂಪೂರ್ಣ ಸಜ್ಜಾಗಿದೆ ಎಂದು ಭಾರತೀಯ ಸೇನಾ ಪಡೆ ಮುಖ್ಯಸ್ಥ ಬಿಪಿನ್‌ ರಾವತ್‌ ತಿಳಿಸಿದ್ದಾರೆ.
Vijaya Karnataka Web ಬಿಪಿನ್ ರಾವತ್
ಬಿಪಿನ್‌ ರಾವತ್‌


ಪ್ರತಿ ದೇಶವು ತಮ್ಮದೇ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳುತ್ತದೆ. ಇದು ಸರ್ವೇ ಸಾಮಾನ್ಯ. ನಾವು ಕೂಡ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ. ಈ ಬಗ್ಗೆ ಚಿಂತೆ ಬೇಡ ಎಂದು ಬಿಪಿನ್‌ ರಾವ್‌ ತಿಳಿಸಿದರು.

ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ರದ್ದುಪಡಿಸಿದ ನಂತರ ಕಣಿವೆ ರಾಜ್ಯದಲ್ಲಿ ಬಿಗುವಿನ ವಾತಾವರಣ ನಿರ್ಮಾಣಗೊಂಡಿದೆ.

ಈ ಹಿನ್ನೆಲೆಯಲ್ಲಿ ಪಾಕಿಸ್ತಾನ ಗಡಿ ನಿಯಂತ್ರಣ ರೇಖೆ ಬಳಿ ಸೇನೆ ನಿಯೋಜಿಸಿದೆ ಈ ಬಗ್ಗೆ ಪ್ರತಿಕ್ರಿಯೆ ನೀಡಿ ಎಂದು ಬಿಪಿನ್‌ ರಾವತ್‌ಗೆ ಸುದ್ದಿಗಾರರು ತಿಳಿಸಿದರು.

ಇದಕ್ಕೆ ಉತ್ತರಿಸಿದ ಬಿಪಿನ್‌ ರಾವತ್‌, ದೇಶದ ಸೇವೆಗೆ ಸೇನೆ ಸರ್ವ ಸನ್ನದ್ಧವಾಗಿದೆ. ಯಾವುದೇ ಪರಿಸ್ಥಿತಿ ಬರಲಿ ನಾವು ಎದುರಿಸುತ್ತೇವೆ ಎಂದರು.

ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಕಣಿವ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಸೇನೆ ಹಾಗೂ ಪೊಲೀಸ್ ಇಲಾಖೆ ಹೆಚ್ಚುವರಿ ಭದ್ರತೆ ಒದಗಿಸಿವೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ