ಆ್ಯಪ್ನಗರ

ಮೊಬೈಲ್‌ ಬಳಸದಂತೆ ಯೋಧರಿಗೆ ತಡೆಯೊಡ್ಡಲು ಸಾಧ್ಯವಿಲ್ಲ: ಜನರಲ್‌ ರಾವತ್‌

ಸಾಮಾಜಿಕ ಜಾಲತಾಣವು ಪ್ರಬಲ ಮಾಧ್ಯಮವಾಗಿ ಬೆಳೆಯುತ್ತಿರುವ ಇಂದಿನ ದಿನಮಾನದಲ್ಲಿ ಮೊಬೈಲ್‌ ಬಳಸದಂತೆ ಯೋಧರಿಗೆ ತಡೆಯೊಡ್ಡಲು ಸಾಧ್ಯವಿಲ್ಲ.

Vijaya Karnataka 5 Sep 2018, 11:02 am
ಹೊಸದಿಲ್ಲಿ: ಸಾಮಾಜಿಕ ಜಾಲತಾಣವು ಪ್ರಬಲ ಮಾಧ್ಯಮವಾಗಿ ಬೆಳೆಯುತ್ತಿರುವ ಇಂದಿನ ದಿನಮಾನದಲ್ಲಿ ಮೊಬೈಲ್‌ ಬಳಸದಂತೆ ಯೋಧರಿಗೆ ತಡೆಯೊಡ್ಡಲು ಸಾಧ್ಯವಿಲ್ಲ. ಆದರೆ ಸೋಷಿಯಲ್‌ ಮಿಡಿಯಾಗಳ ಬಳಕೆಗೆ ದಾಸರಾಗದೇ ಅದನ್ನು ಧನಾತ್ಮಕವಾಗಿ ಬಳಸಿಕೊಳ್ಳುವ ಕಲೆಯನ್ನು ಸೈನಿಕರು ರೂಢಿಸಿಕೊಳ್ಳುವ ಅಗತ್ಯವಿದೆ ಎಂದು ಸೇನಾ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಹೇಳಿದ್ದಾರೆ.
Vijaya Karnataka Web Bipin Rawat


ದಿಲ್ಲಿಯಲ್ಲಿ ನಡೆದ ವಿಚಾರಸಂಕಿರಣವೊಂದರಲ್ಲಿ ಮಾತನಾಡಿದ ಅವರು, ''ನಮ್ಮ ಶತ್ರುಗಳು ಯೋಧರನ್ನು ಮಾನಸಿಕವಾಗಿ ಕುಗ್ಗಿಸುವ ಹಾಗೂ ದಾರಿ ತಪ್ಪಿಸುವ ರೀತಿಯಲ್ಲಿ ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಳ್ಳುತ್ತಿರುವಾಗ ನಾವು ಕೈಕಟ್ಟಿ ಕುಳಿತುಕೊಳ್ಳಲಾಗದು.
ವೃತ್ತಿಪರತೆಗೆ ಧಕ್ಕೆ ಬಾರದ ರೀತಿಯಲ್ಲಿ ಅದನ್ನೇ ನಮ್ಮ ಅಸ್ತ್ರವನ್ನಾಗಿ ಬಳಸುವುದನ್ನು ಕಲಿಯಬೇಕಾಗಿದೆ,'' ಎಂದಿದ್ದಾರೆ.

ಆಧುನಿಕ ಸಮರ ಕಣದಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನವನ್ನೂ ಸಮರ್ಥವಾಗಿ ಬಳಸಿಕೊಳ್ಳುವ ಅಗತ್ಯವಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಅವರು ಕಾಶ್ಮೀರದಲ್ಲಿ ನಕಲಿ ಫೇಸ್‌ಬುಕ್‌ ಖಾತೆ ಮೂಲಕ ಸ್ಥಳೀಯ ಯುವತಿ ಜತೆ ಸಲುಗೆ ಬೆಳೆಸಿ ಸಂಕಷ್ಟಕ್ಕೆ ಸಿಲುಕಿರುವ ಮೇಜರ್‌ ಲಿತುಲ್‌ ಗೊಗೋಯ್‌ ಪ್ರಕರಣದಲ್ಲಿ ಮೇಜರ್‌ ನಡೆಯನ್ನು ಖಂಡಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ