ಆ್ಯಪ್ನಗರ

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಜತೆ ಕಾಳಗ: ಐವರು ಯೋಧರು ಹುತಾತ್ಮ

Army Encounter With Terrorists in Jammu and Kashmir: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೊಂದು ಎನ್‌ಕೌಂಟರ್ ನಡೆದಿದೆ. ಪೂಂಚ್ ಜಿಲ್ಲೆಯಲ್ಲಿ ಐವರು ಸೈನಿಕರನ್ನು ಕೊಂದಿದ್ದ ಉಗ್ರರು, ಶುಕ್ರವಾರದ ದಾಳಿಯಲ್ಲಿ ಐವರು ಸೈನಿಕರನ್ನು ಹತ್ಯೆ ಮಾಡಿದ್ದಾರೆ. ಘಟನೆಯಲ್ಲಿ ಇನ್ನೂ ಒಬ್ಬ ಯೋಧ ಗಾಯಗೊಂಡಿದ್ದು, ಅವರನ್ನು ಉಧಾಂಪುರದ ಕಮಾಂಡೋ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ.

Authored byಅಮಿತ್ ಎಂ.ಎಸ್ | Vijaya Karnataka Web 5 May 2023, 7:24 pm
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಐವರು ಯೋಧರು ಮೃತಪಟ್ಟಿದ್ದಾರೆ. ಇನ್ನೊಬ್ಬ ಸೈನಿಕನಿಗೆ ತೀವ್ರ ಗಾಯಗಳಾಗಿವೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
Vijaya Karnataka Web 2 Army personnel killed in blast triggered by terrorists during operation in J&K.


ಇತ್ತೀಚೆಗೆ ಪೂಂಚ್‌ನಲ್ಲಿ ಐವರು ಯೋಧರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಭಾಗಿಯಾದ ಉಗ್ರರಿಗಾಗಿ ಸೇನೆಯು ಹುಡುಕಾಟ ಕಾರ್ಯಾಚರಣೆ ನಡೆಸುತ್ತಿತ್ತು. ಕಾರ್ಯಾಚರಣೆ ವೇಳೆ ಭಯೋತ್ಪಾದಕರು ಸೇನೆಯನ್ನು ಹಿಮ್ಮೆಟ್ಟಿಸಲು ಪ್ರತಿಯಾಗಿ ಸ್ಫೋಟಕಗಳನ್ನು ಸಿಡಿಸಿದರು. ಇದರಿಂದಾಗಿ ಇಬ್ಬರು ಸೈನಿಕರು ಮೃತಪಟ್ಟಿದ್ದಾರೆ. ಅಧಿಕಾರಿ ಸೇರಿದಂತೆ ಇನ್ನೂ ನಾಲ್ಕು ಮಂದಿ ಸೈನಿಕರು ಗಾಯಗೊಂಡಿದ್ದಾರೆ ಎಂದು ರಕ್ಷಣಾ ವಕ್ತಾರರೊಬ್ಬರು ತಿಳಿಸಿದ್ದಾರೆ.
Baramulla Encounter: ಜಮ್ಮು-ಕಾಶ್ಮೀರದಲ್ಲಿ 2 ಉಗ್ರರ ಹತ್ಯೆ: 24 ಗಂಟೆಯಲ್ಲಿ ಎರಡನೇ ಎನ್‌ಕೌಂಟರ್

ಗಾಯಾಳು ಸೈನಿಕರನ್ನು ಉಧಾಂಪುರದ ಕಮಾಂಡೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಭಾರತೀಯ ಸೇನೆ ಮಾಹಿತಿ ನೀಡಿದೆ.

ರಜೌರಿ ಜಿಲ್ಲೆಯ ಕಾಂಡಿ ಪ್ರದೇಶದ ಕೇಸ್ರಿ ಹಿಲ್‌ನಲ್ಲಿ ಕಾರ್ಯಾಚರಣೆ ಆರಂಭಿಸಲಾಗಿತ್ತು. ಈ ಪ್ರದೇಶದ ಗುಹೆಯೊಂದರಲ್ಲಿ ಭಯೋತ್ಪಾದಕರ ಗುಂಪೊಂದು ಅಡಗಿಕೊಂಡಿದೆ ಎಂಬ ನಿರ್ದಿಷ್ಟ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ಆರಂಭಿಸಲಾಗಿತ್ತು ಎಂದು ಸೇನೆ ತಿಳಿಸಿದೆ. ಶುಕ್ರವಾರ ಬೆಳಿಗ್ಗೆ 7.30ರ ವೇಳೆಗೆ ಕಡಿದಾದ ಪ್ರಪಾತ ಹಾಗೂ ಕಲ್ಲುಬಂಡೆಗಳಿಂದ ತುಂಬಿದ ಸ್ಥಳದಲ್ಲಿ ಈ ಕಾದಾಟ ನಡೆದಿದೆ.
Poonch Terror Attack: ಇಫ್ತಾರ್‌ಗೆ ಹಣ್ಣು ಸಾಗಿಸುತ್ತಿತ್ತು ದಾಳಿಗೆ ಒಳಗಾದ ಸೇನಾ ವಾಹನ: ಈದ್ ರದ್ದುಗೊಳಿಸಿದ ಗ್ರಾಮಸ್ಥರು

ಪೂಂಚ್ ಜಿಲ್ಲೆಯ ಭಾತಾ ಧುರಿಯಾನ್‌ನಲ್ಲಿ ಏಪ್ರಿಲ್ 20ರಂದು ಸೇನಾ ಟ್ರಕ್‌ ಮೇಲೆ ನಡೆದ ಭೀಕರ ಗುಂಡಿನ ದಾಳಿಯಲ್ಲಿ ಉಗ್ರರ ಗುಂಪು ಭಾಗಿಯಾಗಿತ್ತು. ಈ ದಾಳಿಯಲ್ಲಿ ಐವರು ಯೋಧರನ್ನು ಹತ್ಯೆ ಮಾಡಲಾಗಿತ್ತು. ಕುಸಿದು ಬಿದ್ದ ಯೋಧರ ಬಳಿಯಿದ್ದ ಬಂದೂಕುಗಳನ್ನು ಕದ್ದ ಉಗ್ರರು, ವಾಹನದ ಮೇಲೆ ಗ್ರೆನೇಡ್ ಎಸೆದು ಅಲ್ಲಿಂದ ಪರಾರಿಯಾಗಿದ್ದರು. ಹಳ್ಳಿಯೊಂದರಲ್ಲಿ ಈದ್ ಹಬ್ಬದ ಸಲುವಾಗಿ ಸೇನೆಯ ಕಡೆಯಿಂದ ಹಣ್ಣು ಹಂಪಲುಗಳನ್ನು ಈ ವಾಹನದಲ್ಲಿ ಸಾಗಿಸಲಾಗುತ್ತಿತ್ತು.

ಜಮ್ಮು ಪ್ರದೇಶದ ಭಾತಾ ಧುರಿಯಾನ್‌ನ ಟೊಟಾ ಗಾಲಿಯಲ್ಲಿ ಸೇನಾ ಟ್ರಕ್‌ ಮೇಲೆ ದಾಳಿ ನಡೆಸಿದ ಉಗ್ರರ ಗುಂಪನ್ನು ನಿರ್ನಾಮ ಮಾಡಲು ಗುಪ್ತಚರ ಮಾಹಿತಿ ಆಧಾರದಲ್ಲಿ ಭಾರತೀಯ ಸೇನೆಯ ತುಕಡಿಗಳು ಕಾರ್ಯಾಚರಣೆ ನಡೆಸುತ್ತಿವೆ. ಎನ್‌ಕೌಂಟರ್ ನಡೆದ ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ರವಾನೆ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಸೇನಾ ವಕ್ತಾರರು ತಿಳಿಸಿದ್ದಾರೆ.
Poonch Terror Attack: 5 ಯೋಧರ ಹತ್ಯೆ: ಉಗ್ರರಿಗಾಗಿ ಭದ್ರತಾ ಪಡೆಗಳಿಂದ ವ್ಯಾಪಕ ಶೋಧ

ಈ ಪ್ರದೇಶದಲ್ಲಿ ಉಗ್ರರ ಒಂದು ಗುಂಪು ಸಿಲುಕಿಕೊಂಡಿದ್ದಾರೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಉಗ್ರರ ಗುಂಪಿನಲ್ಲಿ ಕೂಡ ಸಾವು ನೋವು ಸಂಭವಿಸಿರುವ ಸಾಧ್ಯತೆಗಳಿವೆ ಎಂದು ಸೇನೆ ಹೇಳಿದೆ.

2021ರ ಘಟನೆಯ ಮರುಕಳಿಕೆ

2021ರ ಅಕ್ಟೋಬರ್‌ನಲ್ಲಿ ನಡೆದಿದ್ದ ಘಟನೆಯ ಪುನರಾವರ್ತನೆಯಂತೆ ಶುಕ್ರವಾರದ ಘಟನೆ ನಡೆದಿದೆ. ರಜೌರಿ- ಪೂಂಚ್ ಪ್ರದೇಶದಲ್ಲಿ ಉಗ್ರರ ಜತೆಗಿನ ಎನ್‌ಕೌಂಟರ್‌ನಲ್ಲಿ ಐವರು ಸೈನಿಕರು ಹತ್ಯೆಯಾಗಿದ್ದರು. ಈ ದಾಳಿಯಲ್ಲಿ ಭಾಗಿಯಾದ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸುವ ವೇಳೆ ಮತ್ತೆ ನಾಲ್ಕು ಸೇನಾ ಯೋಧರು ಉಗ್ರರ ಗುಂಡೇಟಿಗೆ ಬಲಿಯಾಗಿದ್ದರು. ಸುಮಾರು ಒಂದು ತಿಂಗಳವರೆಗೆ ನಿರಂತರ ಕಾರ್ಯಾಚರಣೆ ನಡೆಸಿದ್ದರೂ ಉಗ್ರರನ್ನು ಪತ್ತೆ ಮಾಡುವುದು ಸಾಧ್ಯವಾಗಿರಲಿಲ್ಲ.
ಲೇಖಕರ ಬಗ್ಗೆ
ಅಮಿತ್ ಎಂ.ಎಸ್
ವಿಜಯ ಕರ್ನಾಟಕದ ಡಿಜಿಟಲ್ ವಿಭಾಗದಲ್ಲಿ ಪತ್ರಕರ್ತ. 2009ರಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದಾರೆ. ದಿನಪತ್ರಿಕೆಗಳು ಮತ್ತು ವೆಬ್‌ ಪೋರ್ಟಲ್‌ಗಳಲ್ಲಿ ವರದಿಗಾರಿಕೆ, ಸಿನಿಮಾ ವರದಿಗಾರಿಕೆ, ಡೆಸ್ಕ್ ಹಾಗೂ ಜಿಲ್ಲಾ ಕರೆಸ್ಪಾಂಡೆಂಟ್ ಆಗಿ ಕೆಲಸ ಮಾಡಿದ ಅನುಭವ ಇವರಿಗಿದೆ. ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳು ಪ್ರಮುಖ ಆಸಕ್ತಿಯ ವಿಭಾಗಗಳು. ಮಾನವಾಸಕ್ತಿಯ ಹಾಗೂ ಸ್ಫೂರ್ತಿದಾಯಕ ಕಥನಗಳನ್ನು ನಿರೂಪಿಸುವುದು ವೃತ್ತಿಯಲ್ಲಿನ ನೆಚ್ಚಿನ ಸಂಗತಿ. ಪ್ರವಾಸ, ಕ್ರಿಕೆಟ್, ಓದು, ಕೃಷಿ ಇತರೆ ಇವರ ಆಸಕ್ತಿ ಮತ್ತು ಹವ್ಯಾಸಗಳು.... ಇನ್ನಷ್ಟು ಓದಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ