ಆ್ಯಪ್ನಗರ

ಮನಮೋಹನ್‌ಸಿಂಗ್‌ರನ್ನು ಜನರು ಮಿಸ್ ಮಾಡಿಕೊಳ್ಳುತ್ತಿದ್ದಾರೆ; ಕೇಜ್ರಿವಾಲ್

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೆ ಟೀಕಾಪ್ರಹಾರ ಮುಂದುವರಿಸಿರುವ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್, ಜನರು ಮನಮೋಹನ್‌ ಸಿಂಗ್‌ರಂಥ ವಿದ್ಯಾವಂತ ಪ್ರಧಾನಿಯನ್ನು ಮಿಸ್‌ ಮಾಡಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.

Vijaya Karnataka Web 31 May 2018, 6:45 pm
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೆ ಟೀಕಾಪ್ರಹಾರ ಮುಂದುವರಿಸಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ಜನರು ಮನಮೋಹನ್‌ ಸಿಂಗ್‌ರಂಥ ವಿದ್ಯಾವಂತ ಪ್ರಧಾನಿಯನ್ನು ಮಿಸ್‌ ಮಾಡಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.
Vijaya Karnataka Web arvind-kejriwal


ಪ್ರಧಾನಿ ವಿದ್ಯಾವಂತರಾಗಿರಬೇಕು, ಜನರಿಗೆ ಈಗ ಅದರ ಅರಿವಾಗುತ್ತಿದೆ. ಜನರು ಈಗ ವಿದ್ಯಾವಂತ ಪ್ರಧಾನಿ ಬೇಕಿತ್ತು ಎಂದು ಬಯಸುತ್ತಿದ್ದಾರೆ ಎಂದಿರುವ ಕೇಜ್ರಿವಾಲ್, ವಾಲ್‌ಸ್ಟ್ರೀಟ್‌ ಜರ್ನಲ್‌ನಲ್ಲಿ ಪ್ರಕಟವಾದ ಲೇಖನವನ್ನು ಟ್ವೀಟ್ ಮಾಡಿದ್ದಾರೆ.

ಕೇಜ್ರಿವಾಲ್ ಮತ್ತು ಆಮ್‌ ಆದ್ಮಿಯ ಇತರ ಕೆಲವರು ಈ ಹಿಂದೆ ಕೂಡ ಪ್ರಧಾನಿ ನರೇಂದ್ರ ಮೋದಿಯವರ ವಿದ್ಯಾರ್ಹತೆ ಕುರಿತು ಅಧಿಕೃತ ದಾಖಲೆ ಬಿಡುಗಡೆ ಮಾಡುವಂತೆ ಒತ್ತಾಯಿಸಿದ್ದರು.

ಪ್ರಸ್ತುತ ಕೇಂದ್ರ ಸರಕಾರ ರಾಷ್ಟ್ರರಾಜಧಾನಿಯ ನೀರಿನ ಸಮಸ್ಯೆ ಕುರಿತಂತೆ ಕೆಟ್ಟ ರಾಜಕೀಯ ಮಾಡುತ್ತಿದೆ. ದಿಲ್ಲಿಗೆ ಸಾಕಷ್ಟು ನೀರು ಹರಿದುಬರುತ್ತಿತ್ತು. ಆದರೆ ಈಗ ನೀರಿನ ಪ್ರಮಾಣ ಕಡಿತವಾಗಿದೆ, ಇದರಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ಕೇಜ್ರಿವಾಲ್ ದೂರಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ