ಆ್ಯಪ್ನಗರ

ಕರ್ಣಿ ಸೇನೆಗೆ ಕೇಜ್ರಿವಾಲ್‌ ಖಡಕ್‌ ಎಚ್ಚರಿಕೆ!

ಮಕ್ಕಳ ಮೇಲೆ ದಾಳಿ ನಡೆಸುವವರಿಗೆ ನಾಚಿಕೆಯಾಗಬೇಕು ಎಂದು ಆಕ್ರೋಷ ವ್ಯಕ್ತಪಡಿಸಿರುವ ಕೇಜ್ರಿವಾಲ್‌, ರಾಮನ ಭೂಮಿ ಭಾರತ. ಮಕ್ಕಳ ಮೇಲೆ ದಾಳಿ ನಡೆಸುವಂತಹ ಅಮಾವೀಯತೆಯನ್ನು ಸಹಿಸುವುದಿಲ್ಲ ಎಂದಿದ್ದಾರೆ.

Vijaya Karnataka Web 25 Jan 2018, 3:11 pm
ಗುರುಗ್ರಾಮದ ಶಾಲಾ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ 18 ಪ್ರತಿಭಟನಾಕಾರರನ್ನು ದಿಲ್ಲಿ ಪೊಲೀಸರು ಬಂಧಿಸಿದ್ದಾರೆ.
Vijaya Karnataka Web arvind kejriwal tells karni sena protestors to die with shame
ಕರ್ಣಿ ಸೇನೆಗೆ ಕೇಜ್ರಿವಾಲ್‌ ಖಡಕ್‌ ಎಚ್ಚರಿಕೆ!


ಹೊಸದಿಲ್ಲಿ: ಗುರುಗ್ರಾಮದ ಶಾಲಾ ಬಸ್‌ ಮೇಲೆ 'ಪದ್ಮಾವಾತ್‌' ಚಿತ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕರ್ಣಿ ಸೇನೆಯ ಕಾರ್ಯಕರ್ತರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕೆಂಡಮಂಡಲವಾಗಿರುವ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್‌ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ಮಕ್ಕಳ ಮೇಲೆ ದಾಳಿ ನಡೆಸುವವರಿಗೆ ನಾಚಿಕೆಯಾಗಬೇಕು ಎಂದು ಆಕ್ರೋಷ ವ್ಯಕ್ತಪಡಿಸಿರುವ ಕೇಜ್ರಿವಾಲ್‌, ರಾಮನ ಭೂಮಿ ಭಾರತ. ಮಕ್ಕಳ ಮೇಲೆ ದಾಳಿ ನಡೆಸುವಂತಹ ಅಮಾವೀಯತೆಯನ್ನು ಸಹಿಸುವುದಿಲ್ಲ ಎಂದಿದ್ದಾರೆ.

ಮುಸ್ಲಿಮರ ಹತ್ಯೆ, ದಲಿತರ ಹತ್ಯೆ ಆದಾಗಲೂ ಸಹಿಸಿಕೊಂಡಿದ್ದೇವೆ. ಆದರೆ ಮಕ್ಕಳ ಮೇಲಿನ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ದುಷ್ಕರ್ಮಿಗಳನ್ನು ಸುಮ್ಮನೆ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಛತ್ರಸಾಲಾ ಸ್ಟೇಡಿಯಂನಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತ, ಗಣ ರಾಜ್ಯೋತ್ಸವದ ಸಂದರ್ಭದಲ್ಲಿ ಮಕ್ಕಳ ಮೇಲಿನ ದಾಳಿಯಂತಹ ಕೃತ್ಯಗಳು ನಡೆದಿದ್ದು ನಾಚಿಕೆಗೇಡು. ಇದೊಂದು ದುರಾದೃಷ್ಟಕರ ಘಟನೆ. ಶಾಲಾ ವಾಹನದ ಮೇಲೆ ದಾಳಿ ನಡೆಸಿ, ಮಕ್ಕಳಲ್ಲಿ ಭೀತಿ ಹುಟ್ಟಿಸಿದ ಕೃತ್ಯದ ಬಗ್ಗೆ ಕೇಳಿ ಕಳೆದ ರಾತ್ರಿ ನಿದ್ರೆಯೇ ಬರಲಿಲ್ಲ ಎಂದಿದ್ದಾರೆ.
ನಾನು ಹಿಂದು. ನಾನು ರಾಮ ಭಕ್ತ. ರಾಮ ಯಾವತ್ತಾದರೂ ಮಕ್ಕಳ ಮೇಲೆ ದಾಳಿ ನಡೆಸಲು ಅವಕಾಶ ನೀಡುತ್ತಾನೆಯೇ? ಅಮಾನವೀಯ ಕೃತ್ಯ ಎಸಗಿದವರು ಸಂಸ್ಕೃತಿಯನ್ನು ಉಳಿಸುತ್ತಿಲ್ಲ. ಬದಲಿಗೆ ಅಳಿಸುತ್ತಿದ್ದಾರೆ ಎಂದು ಕೇಜ್ರಿವಾಲ್‌ ಪ್ರತಿಕ್ರಿಯಿಸಿದ್ದಾರೆ.

ಭಾರತವು ಶ್ರೇಷ್ಠರಾದ ರಾಮ, ಕೃಷ್ಣ, ಗೌತಮ ಬುದ್ಧ, ಮಹಾವೀರ ಜೈನ್‌, ಗುರು ನಾನಕ್‌ ದೇವ್‌, ಕಬೀರ, ಮಹಾತ್ಮ ಗಾಂಧಿ ಮತ್ತಿತರು ಜನ್ಮಿಸಿದ ಭೂಮಿ. ಇವರೆಲ್ಲರೂ ಶಾಂತಿಯನ್ನೇ ಪ್ರತಿಪಾದಿಸಿದವರು ಎಂದು ಕೇಜ್ರಿವಾಲ್‌ ತಿಳಿಸಿದರು.

ಗುರುಗ್ರಾಮದ ಶಾಲಾ ವಾಹನವೊಂದರ ಮೇಲೆ ಪದ್ಮಾವತ್‌ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಗುಂಪೊಂದು ಕಲ್ಲು ತೂರಾಟ ನಡೆಸಿತ್ತು. ಇದರಿಂದ ಭೀತಿಗೊಳಗಾದ ಮಕ್ಕಳ ವೀಡಿಯೋ ಸಾಮಾಜಿಕ ತಾಣಗಳಲ್ಲಿ ಭಾರಿ ಸಂಚಲನ ಉಂಟು ಮಾಡಿತ್ತು. ವೀಡಿಯೋದಲ್ಲಿ ಮುಗ್ಧ ಮಕ್ಕಳು ಭಯದಿಂದ ಕುಳಿತಿರುವುದು, ಕಲ್ಲುಗಳು ಬಿದ್ದು ಬಸ್‌ನ ಗಾಜುಗಳು ಪುಡಿಯಾಗುವುದು ದಾಖಲಾಗಿದೆ.

ಬಾಲಿವುಡ್‌ ನಟ ಮತ್ತು ನಿರ್ದೇಶಕ ಫರಾನ್‌ ಅಖ್ತರ್‌ ದಾಳಿಯನ್ನು ಖಂಡಿಸಿದ್ದು, ಘಟನೆಯನ್ನು 'ಭಯೋತ್ಪಾದನೆ' ಎಂದಿದ್ದಾರೆ.

ಕರ್ಣಿ ಸೇನೆಗೆ ಕೇಜ್ರಿವಾಲ್‌ ಖಡಕ್‌ ಎಚ್ಚರಿಕೆ! (ವೀಡಿಯೋ)

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ