ಆ್ಯಪ್ನಗರ

ಪ್ರತಿಭಟನಾನಿರತ ರೈತರ ಭೇಟಿ ಬಳಿಕ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಗೃಹ ಬಂಧನ, ಕೇಂದ್ರದ ವಿರುದ್ಧ AAP ಆರೋಪ!

ಕೇಂದ್ರ ಗೃಹ ಇಲಾಖೆ ಸೂಚನೆ ಮೇರೆಗೆ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದ್ದು, ಪೊಲೀಸ್‌ ಬ್ಯಾರಿಕೇಡ್‌ ಮೂಲಕ ಅವರ ಮನೆಯ ದ್ವಾರವನ್ನು ಬಂದ್‌ ಮಾಡಲಾಗಿದೆ ಎಂದು ಆಪ್‌ ಕಿಡಿಕಾರಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಪ್ ಶಾಸಕ ಸೌರಬ್‌ ಭಾರಧ್ವಜ್‌, ನಮ್ಮ ಯಾವುದೇ ಶಾಸಕರಿಗೂ ಮುಖ್ಯಮಂತ್ರಿಗಳನ್ನು ಭೇಟಿಯಾಗಲು ಅವಕಾಶ ನೀಡುತ್ತಿಲ್ಲ ಎಂದಿದ್ದಾರೆ.

Vijaya Karnataka Web 8 Dec 2020, 11:27 am
ಹೊಸದಿಲ್ಲಿ: ರೈತ ಸಂಘಟನೆಗಳು ನೀಡಿದ ಭಾರತ್‌ ಬಂದ್‌ಗೆ ದೇಶದಾದ್ಯಂತ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಲವೆಡೆ ರೈಲುಗಳನ್ನು ತಡೆದು ವಿವಿಧ ಸಂಘಟನೆಗಳು ಪ್ರತಿಭಟಿಸುತ್ತಿವೆ. ಈ ಮಧ್ಯೆ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಆಮ್‌ ಆದ್ಮಿ ಪಾರ್ಟಿ ಆರೋಪಿಸಿದೆ.
Vijaya Karnataka Web Aravind Kejriwal


ಸೋಮವಾರ ದಿಲ್ಲಿಯ ಸಿಂಘು ಗಡಿಯಲ್ಲಿ ಪ್ರತಿಭಟನೆಯಲ್ಲಿ ತೊಡಗಿದ್ದ ರೈತರನ್ನು ಸಿಎಂ ಅರವಿಂದ ಕೇಜ್ರಿವಾಲ್‌ ಭೇಟಿಯಾಗಿದ್ದರು. ಆದಾದ ಬಳಿಕ ನಿವಾಸಕ್ಕೆ ತೆರಳಿದ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದೆ ಎಂದು ಆಪ್‌ ಆರೋಪಿಸಿದೆ. ಇನ್ನು ಗೃಹ ಬಂಧನದಲ್ಲಿ ಇರಿಸಲಾಗಿರುವುದರಿಂದ ಅವರ ಎಲ್ಲಾ ಸಭೆಗಳು ರದ್ದುಗೊಂಡಿದೆ. ಇನ್ನು ಅವರನ್ನು ಭೇಟಿಯಾಗಲು ಪಕ್ಷದ ಶಾಸಕರಿಗೂ ಅವಕಾಶ ನೀಡುತ್ತಿಲ್ಲ ಎಂದು ಆಪ್‌ ಆರೋಪಿಸಿದೆ.

ಇನ್ನು ಕೇಂದ್ರ ಗೃಹ ಇಲಾಖೆ ಸೂಚನೆ ಮೇರೆಗೆ ಕೇಜ್ರಿವಾಲ್‌ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿದ್ದು, ಪೊಲೀಸ್‌ ಬ್ಯಾರಿಕೇಡ್‌ ಮೂಲಕ ಅವರ ಮನೆಯ ದ್ವಾರವನ್ನು ಬಂದ್‌ ಮಾಡಲಾಗಿದೆ ಎಂದು ಆಪ್‌ ಕಿಡಿಕಾರಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಆಪ್ ಶಾಸಕ ಸೌರಬ್‌ ಭಾರಧ್ವಜ್‌, ನಮ್ಮ ಯಾವುದೇ ಶಾಸಕರಿಗೂ ಮುಖ್ಯಮಂತ್ರಿಗಳನ್ನು ಭೇಟಿಯಾಗಲು ಅವಕಾಶ ನೀಡುತ್ತಿಲ್ಲ.

ರೈತರ ಭೇಟಿ ಬಳಿಕ ಸಿಎಂ ಕೇಜ್ರಿವಾಲ್‌ರನ್ನು ಕೇಂದ್ರ ಸರಕಾರ ಗೃಹ ಬಂಧನದಲ್ಲಿಟ್ಟಿದೆ: ಎಎಪಿ‌

ನಾವೆಲ್ಲ ಶಾಸಕರು ಕೂಡಲೇ ಜಾಥ ಮೂಲಕ ಸಿಎಂ ನಿವಾಸಕ್ಕೆ ತೆರಳಿ ಅವರನ್ನು ಗೃಹ ಬಂಧನದಿಂದ ಬಿಡುಗಡೆಗೊಳಿಸುತ್ತೇವೆ. ರೈತರ ಹೋರಾಟದಲ್ಲಿ ಭಾಗಿಯಾಗುವಂತೆ ಮಾಡುತ್ತೇವೆ ಎಂದಿದ್ದಾರೆ. ಇನ್ನು ಈ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ದಿಲ್ಲಿ ಪೊಲೀಸರು, ಆ ರೀತಿಯ ಯಾವುದೇ ಘಟನೆ ನಡೆದಿಲ್ಲ. ಇದು ಪುರಾವೆ ಇಲ್ಲದ ಆರೋಪವಾಗಿದೆ. ನಿನ್ನೆ ರಾತ್ರಿ 8 ಹಾಗೂ 10 ಗಂಟೆಗೆ ಅರವಿಂದ್‌ ಕೇಜ್ರಿವಾಲ್‌ ಹೊರಗೆ ಹೋಗಿದ್ದರು ಎಂದು ಹೇಳಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ