ಆ್ಯಪ್ನಗರ

ಆಧಾರ್‌ ಸುಗ್ರೀವಾಜ್ಞೆ ಅಸ್ತಿತ್ವ ಕಳೆದುಕೊಂಡಿದೆ: ಸರಕಾರ ಸ್ಪಷ್ಟನೆ

ಆಧಾರ್‌ ಗುರುತಿನ ಚೀಟಿಗೆ ಸಂಬಂಧಿಸಿ ಕೇಂದ್ರ ಹೊರಡಿಸಿದ್ದ ಸುಗ್ರೀವಾಜ್ಞೆಯ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಬಾಕಿ ಇತ್ತು. ಆದರೆ, ಈಗ ವಿಧೇಯಕ ಅಂಗೀಕಾರಗೊಂಡಿರುವುದರಿಂದ ಅದಕ್ಕೆ ಸಂಬಂಧಿಸಿದ ತಕರಾರು ಅರ್ಜಿಗಳು ಕೂಡ ಮಹತ್ವ ಕಳೆದುಕೊಳ್ಳುತ್ತವೆ ಎಂದು ಸರಕಾರವು ಕೋರ್ಟ್‌ಗೆ ಸ್ಪಷ್ಟಪಡಿಸಿದೆ.

PTI 10 Jul 2019, 5:00 am
ಹೊಸದಿಲ್ಲಿ: ಖಾಸಗಿ ವಲಯದ ಸೇವೆ ಪಡೆಯಲು ಗುರುತಿನ ಸಾಕ್ಷ್ಯವಾಗಿ ಆಧಾರ್‌ ನಂಬರ್‌ ನೀಡುವುದನ್ನು ಐಚ್ಛಿಕಗೊಳಿಸಿರುವ ತಿದ್ದುಪಡಿ ವಿಧೇಯಕ ಸಂಸತ್ತಿನಲ್ಲಿ ಅಂಗೀಕಾರಗೊಂಡಿರುವುದರಿಂದ ಇದಕ್ಕೆ ಸಂಬಂಧಿಸಿದ ಸುಗ್ರೀವಾಜ್ಞೆ ಈಗ ಅಸ್ತಿತ್ವ ಕಳೆದುಕೊಂಡಿದೆ ಎಂದು ಕೇಂದ್ರ ಸರಕಾರ ಸೋಮವಾರ ದಿಲ್ಲಿ ಹೈಕೋರ್ಟ್‌ಗೆ ಸ್ಪಷ್ಟನೆ ನೀಡಿದೆ.
Vijaya Karnataka Web adhar


ಆಧಾರ್‌ ಗುರುತಿನ ಚೀಟಿಗೆ ಸಂಬಂಧಿಸಿ ಕೇಂದ್ರ ಹೊರಡಿಸಿದ್ದ ಸುಗ್ರೀವಾಜ್ಞೆಯ ಸಾಂವಿಧಾನಿಕ ಮಾನ್ಯತೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ಬಾಕಿ ಇತ್ತು. ಆದರೆ, ಈಗ ವಿಧೇಯಕ ಅಂಗೀಕಾರಗೊಂಡಿರುವುದರಿಂದ ಅದಕ್ಕೆ ಸಂಬಂಧಿಸಿದ ತಕರಾರು ಅರ್ಜಿಗಳು ಕೂಡ ಮಹತ್ವ ಕಳೆದುಕೊಳ್ಳುತ್ತವೆ ಎಂದು ಸರಕಾರವು ಕೋರ್ಟ್‌ಗೆ ಸ್ಪಷ್ಟಪಡಿಸಿದೆ.

ಬ್ಯಾಂಕ್‌ ಖಾತೆ ಹಾಗೂ ಸಿಮ್‌ ಕಾರ್ಡ್‌ನಂತಹ ಖಾಸಗಿ ಕ್ಷೇತ್ರದ ಸೇವೆಗಳನ್ನು ಪಡೆಯಲು ಆಧಾರ್‌ ಕಾರ್ಡ್‌ ಅನ್ನು ಸ್ವ ಇಚ್ಛೆಯಿಂದ ಗುರುತು ಸಾಕ್ಷಿಯಾಗಿ ನೀಡಲು ಅನುವು ಮಾಡಿಕೊಟ್ಟಿದ್ದ ಸುಗ್ರೀವಾಜ್ಞೆ ಜಾರಿಗೆ ಕಳೆದ ಮಾರ್ಚ್‌ನಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅಂಕಿತ ಹಾಕಿದ್ದರು. ತರುವಾಯ ಜೂನ್‌ 24ರಂದು ಆಧಾರ್‌ ಮತ್ತು ಇತರೆ ಕಾನೂನುಗಳ ತಿದ್ದುಪಡಿ ವಿಧೇಯಕವನ್ನು ಸರಕಾರ ಸಂಸತ್ತಿನಲ್ಲಿ ಮಂಡಿಸಿತ್ತು. ಈ ವಿಧೇಯಕವು ಜುಲೈ 4ರಂದು ಲೋಕಸಭೆಯಲ್ಲಿ ಹಾಗೂ ಜುಲೈ 8ರಂದು ರಾಜ್ಯಸಭೆಯಲ್ಲಿ ಅಂಗೀಕಾರಗೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ