ಆ್ಯಪ್ನಗರ

ಅಸಾರಾಮ್‌ ಕೇಸು ತೀರ್ಪು: 3 ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ

ಸ್ವಯಂಘೋಷಿತ ದೇವಮಾನವ ಅಸಾರಾಮ್‌ ಬಾಪು ಮೇಲಿನ ಅತ್ಯಾಚಾರ ಪ್ರಕರಣದ ತೀರ್ಪು ಬುಧವಾರ ಹೊರಬೀಳಲಿರುವುದರಿಂದ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ರಾಜಸ್ಥಾನ, ಗುಜರಾತ್‌ ...

Vijaya Karnataka 25 Apr 2018, 8:07 am
ಹೊಸದಿಲ್ಲಿ: ಸ್ವಯಂಘೋಷಿತ ದೇವಮಾನವ ಅಸಾರಾಮ್‌ ಬಾಪು ಮೇಲಿನ ಅತ್ಯಾಚಾರ ಪ್ರಕರಣದ ತೀರ್ಪು ಬುಧವಾರ ಹೊರಬೀಳಲಿರುವುದರಿಂದ ಬಿಗಿ ಭದ್ರತಾ ವ್ಯವಸ್ಥೆಗಳನ್ನು ಮಾಡಿಕೊಳ್ಳುವಂತೆ ರಾಜಸ್ಥಾನ, ಗುಜರಾತ್‌ ಮತ್ತು ಹರಿಯಾಣ ರಾಜ್ಯಗಳಿಗೆ ಕೇಂದ್ರ ಸರಕಾರ ಸೂಚನೆ ನೀಡಿದೆ.
Vijaya Karnataka Web Asaram Bapu


ಜೋಧ್‌ಪುರ ನ್ಯಾಯಾಲಯ ತೀರ್ಪು ನೀಡಿದ ಬಳಿಕ ಬಾಪು ಅನುಯಾಯಿಗಳು ದೊಡ್ಡ ಪ್ರಮಾಣದಲ್ಲಿರುವ ಈ ಮೂರು ರಾಜ್ಯಗಳಲ್ಲಿ ಹಿಂಸಾಚಾರ ಭುಗಿಲೇಳಬಹುದು ಎಂಬ ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ಸಲಹೆ ನೀಡಲಾಗಿದೆ.

ಅಸಾರಾಂ ಅವರಿಗೆ ಸೇರಿದ ಮಧ್ಯಪ್ರದೇಶದ ಛಿಂದ್ವಾರದ ಆಶ್ರಮದಲ್ಲಿ ಕಲಿಯುತ್ತಿದ್ದ ಉತ್ತರ ಪ್ರದೇಶದ ಷಹಜಹಾನ್‌ಪುರದ ಯುವತಿ ಮೇಲೆ ಜೋಧ್‌ಪುರ ಬಳಿಕ ಮನಾಯಿ ಆಶ್ರಮದಲ್ಲಿ 2013ರ ಆಗಸ್ಟ್‌ 15ರ ರಾತ್ರಿ ಅತ್ಯಾಚಾರ ನಡೆಸಿದ ಪ್ರಕರಣದ ಇದಾಗಿದೆ.

ಡೇರಾ ಸಚ್ಚಾ ಸೌದಾದ ಮುಖ್ಯಸ್ಥ ಗುರ್ಮಿತ್‌ ಸಿಂಗ್‌ಗೆ ಶಿಕ್ಷೆ ವಿಧಿಸಿದಾಗ ದೊಡ್ಡ ಮಟ್ಟದ ಹಿಂಸೆ ನಡೆದಿರುವುದನ್ನು ಸರಕಾರ ಗಮನದಲ್ಲಿಟ್ಟುಕೊಂಡಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ