ಆ್ಯಪ್ನಗರ

ಕಾಂಗ್ರೆಸ್ VS ಕಾಂಗ್ರೆಸ್: ಕಪಿಲ್ ಸಿಬಲ್ ಹೇಳಿಕೆ ಖಂಡಿಸಿದ ಅಶೋಕ್ ಗೆಹ್ಲೋಟ್!

ಬಿಹಾರ ಸೋಲಿನ ಪರಾಮರ್ಶೆ ನಡೆಸದ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಹರಿಹಾಯ್ದಿರುವ ಕಪಿಲ್ ಸಿಬಲ್ ವಿರುದ್ಧ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕಿಡಿಕಾರಿದ್ದಾರೆ. ಪಕ್ಷದ ಆಂತರಿಕ ವಿಚಾರಗಳನ್ನು ಕಪಿಲ್ ಸಿಬಲ್ ಬಹಿರಂಗವಾಗಿ ಚರ್ಚೆ ಮಾಡುತ್ತಿರುವುದು ಸರಿಯಲ್ಲ ಎಂದು ಗೆಹ್ಲೋಟ್ ಅಭಿಪ್ರಾಯಪಟ್ಟಿದ್ದಾರೆ.

Vijaya Karnataka Web 16 Nov 2020, 8:46 pm
ಜೈಪುರ್: ಬಿಹಾರ ವಿಧಾನಸಭಾ ಚುನಾವಣಾ ಸೋಲು ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಾಭಿಪ್ರಾಯ ಸ್ಫೋಟಗೊಳ್ಳಲು ಕಾರಣವಾಗಿದೆ. ಪಕ್ಷದ ಹಿರಿಯ ನಾಯಕರು ಇದೀಗ ಬಹಿರಂಗವಾಗಿ ಒಬ್ಬರ ವಿರುದ್ಧ ಮತ್ತೊಬ್ಬರು ಹೇಳಿಕೆ ನೀಡುತ್ತಿದ್ದಾರೆ.
Vijaya Karnataka Web ashok gehlot 34325
ಸಂಗ್ರಹ ಚಿತ್ರ


ಬಿಹಾರ ಸೋಲಿನ ಪರಾಮರ್ಶೆ ನಡೆಸದ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಹರಿಹಾಯ್ದಿರುವ ಕಪಿಲ್ ಸಿಬಲ್ ವಿರುದ್ಧ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಕಿಡಿಕಾರಿದ್ದಾರೆ.

ಪಕ್ಷದ ಆಂತರಿಕ ವಿಚಾರಗಳನ್ನು ಕಪಿಲ್ ಸಿಬಲ್ ಬಹಿರಂಗವಾಗಿ ಚರ್ಚೆ ಮಾಡುತ್ತಿರುವುದು ಸರಿಯಲ್ಲ ಎಂದು ಅಶೋಕ್ ಗೆಹ್ಲೋಟ್ ಆರೋಪಿಸಿದ್ದಾರೆ.

ಬಿಹಾರ ಸೋಲು: ಹೈಕಮಾಂಡ್ 'ಆಲ್ ಇಸ್ ವೆಲ್' ಮೂಡ್‌ನಲ್ಲಿದೆ ಎಂದ ಕಪಿಲ್ ಸಿಬಲ್!

ಚುನಾವಣಾ ಸೋಲೂ ಸೇರಿದಂತೆ ಎಲ್ಲಾ ವಿಚಾರಗಳ ಕುರಿತು ಪಕ್ಷ ಆಂತರಿಕೆ ವೇದಿಕೆಯಲ್ಲಿ ಚರ್ಚೆ ಮಾಡುತ್ತದೆ. ಆದರೆ ಕಪಿಲ್ ಸಿಬಲ್ ಮಾತ್ರ ಈ ವಿಚಾರಗಳನ್ನು ಮಾಧ್ಯಮಗಳ ಮುಂದೆ ಮಾತನಾಡುತ್ತಿರುವುದು ಸರಿಯಲ್ಲ ಎಂದು ಗೆಹ್ಲೋಟ್ ಅಸಮಾಧಾನ ಹೊರಹಾಕಿದ್ದಾರೆ.


ಪಕ್ಷದ ವಿಚಾರಗಳನ್ನು ಬಹಿರಂಗವಾಗಿ ಮಾತನಾಡುವುದು ಸರಿಯಲ್ಲ. ಇದರಿಂದ ಪಕ್ಷದ ಲಕ್ಷಾಂತರ ಕಾರ್ಯಕರ್ತರಿಗೆ ನೋವಾಗುತ್ತದೆ. ಕಪಿಲ್ ಸಿಬಲ್ ಅವರಂತ ಹಿರಿಯ ನಾಯಕರು ಇಂತಹ ಸೂಕ್ಷ್ಮ ವಿಚಾರಗಳನ್ನು ಅರಿಯದಿರುವುದು ಆಶ್ವರ್ಯ ತಂದಿದೆ ಎಂದು ಗೆಹ್ಲೋಟ್ ಹರಿಹಾಯ್ದಿದ್ದಾರೆ.

ಮಹಾಘಟಬಂಧನ್ ಮೈತ್ರಿಕೂಟದಲ್ಲಿ ಬಿರುಕು?: ಆರ್‌ಜೆಡಿ-ಕಾಂಗ್ರೆಸ್ ನಾಯಕರ ವಾಕ್ಸಮರ!

ಒಟ್ಟಿನಲ್ಲಿ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶಶನ, ಮತ್ತೊಮ್ಮೆ ಕಾಂಗ್ರೆಸ್‌ನ ಆಂತರಿಕ ಕಿತ್ತಾಟವನ್ನು ಬಹಿರಂಗಪಡಿಸಿದ್ದು, ಈ ಬಾರಿ ಹಿರಿಯ ನಾಯಕರು ಅಖಾಡದಲ್ಲಿರುವುದು ಕುತೂಹಲ ಕೆರಳಿಸಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ