ಆ್ಯಪ್ನಗರ

ಮಸಣಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ; ಪ.ಬಂಗಾಳದ 18 ಮಂದಿ ಸ್ಥಳದಲ್ಲೇ ಸಾವು!

ವಿಪರೀತ ಇಬ್ಬನಿ ಬೀಳುತ್ತಿದ್ದ ಕಾರಣ ಚಾಲಕನಿಗೆ ರಸ್ತೆ ಸರಿಯಾಗಿ ಕಾಣಲಿಲ್ಲ. ಹಾಗಾಗಿ ಆತ ತುಂಬ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ. ಇದರಿಂದಾಗಿ ರಸ್ತೆ ಪಕ್ಕದಲ್ಲಿ ನಿಂತ ಟ್ರಕ್​ಗೆ ಹೋಗಿ ಮೃತದೇಹವನ್ನು ಹೊತ್ತ ವಾಹನವು ಡಿಕ್ಕಿ ಹೊಡೆದಿದ್ದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಕೂಲಂಕುಶವಾಗಿ ತನಿಖೆ ಮಾಡಲು ಪೊಲೀಸರು ಆರಂಭಿಸಿದ್ದಾರೆ.

Hindustan Times 28 Nov 2021, 11:34 am
ಕೋಲ್ಕತ್ತಾ: ಮೃತದೇಹವನ್ನು ಮಸಣಕ್ಕೆ ಕರೆದೊಯುತ್ತಿದ್ದ ವಾಹನಕ್ಕೆ ಲಾರಿ ಡಿಕ್ಕಿಯಾದ ಪರಿಣಾಮ 17 ಮಂದಿ ಸಾವನ್ನಪ್ಪಿದ ಭೀಕರ ದುರಂತ ಪಶ್ಚಿಮ ಬಂಗಾಳದಲ್ಲಿ ಕಳೆದ ರಾತ್ರಿ ನಡೆದಿದೆ.
Vijaya Karnataka Web Bus crashes in Pakistan, killing 28 passengers, injuring 40


ಪಶ್ಚಿಮ ಬಂಗಾಳದ ನಾದಿಯಾ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ಈ ದುರ್ಘಟನೆಯಲ್ಲಿ 18 ಮಂದಿ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಹೊತ್ತೊಯ್ಯುತ್ತಿದ್ದ ಮೆಟಡಾರ್ ವಾಹನದಲ್ಲಿ ಸುಮಾರು 20 ಜನರು ಇದ್ದರು. ಉತ್ತರ 24 ಪರಗಣದ ಬಾಗ್ಡಾದಿಂದ ನವದ್ವೀಪದ ಸ್ಮಶಾನದ ಕಡೆಗೆ ತೆರಳುತ್ತಿದ್ದಾಗ ದಾರಿ ಮಧ್ಯೆ ಟ್ರಕ್‌ಗೆ ಮೆಟಾಡರ್‌ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ದುರ್ಘಟನೆ ಸಂಭವಿಸಿದೆ.
ಸ್ಲೀಪರ್‌ ಬಸ್‌ನಲ್ಲಿಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಮಂಗಳೂರಿನ ಅಪರಾಧಿಗೆ 7 ವರ್ಷ ಕಠಿಣ ಸಜೆ
ಹಂಸಖಲಿ ಪೊಲೀಸ್ ಠಾಣೆ ವ್ಯಾಪ್ತಿಯ ಫುಲ್ಬರಿ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು, ವಿಪರೀತ ಇಬ್ಬನಿ ಬೀಳುತ್ತಿದ್ದ ಕಾರಣ ಚಾಲಕನಿಗೆ ರಸ್ತೆ ಸರಿಯಾಗಿ ಕಾಣಲಿಲ್ಲ. ಹಾಗಾಗಿ ಆತ ತುಂಬ ವೇಗವಾಗಿ ವಾಹನ ಚಾಲನೆ ಮಾಡುತ್ತಿದ್ದ. ಇದರಿಂದಾಗಿ ರಸ್ತೆ ಪಕ್ಕದಲ್ಲಿ ನಿಂತ ಟ್ರಕ್ಗೆ ಹೋಗಿ ಮೃತದೇಹವನ್ನು ಹೊತ್ತ ವಾಹನವು ಡಿಕ್ಕಿ ಹೊಡೆದಿದ್ದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಕೂಲಂಕುಶವಾಗಿ ತನಿಖೆ ಮಾಡಲು ಪೊಲೀಸರು ಆರಂಭಿಸಿದ್ದಾರೆ.

ಇನ್ನು ಮೆಟಡಾರ್ ವಾಹನದಲ್ಲಿ ಪ್ರಯಾಣಿಸುತ್ತಿದ್ದ 20 ಮಂದಿಯಲ್ಲಿ 18 ಜನರು ಸಾವನ್ನಪ್ಪಿದ್ದು ಅದರಲ್ಲಿ 10 ಪುರುಷರು, ಏಳು ಮಹಿಳೆಯರು ಮತ್ತು ಒಬ್ಬಳು ಆರುವರ್ಷದ ಬಾಲಕಿ ಇದ್ದಾಳೆ. ಇವರೆಲ್ಲ ಬಂಧು- ಬಳಗದವರೇ ಆಗಿದ್ದಾರೆ. ಬಾಗ್ಡಾದ ಬಳಿಯ ಪರ್ಮಧಾನ್ ಎಂಬಲ್ಲಿಯ ನಿವಾಸಿಯಾಗಿದ್ದ ಶ್ರಬಣಿ ಮುಹುರಿ ಎಂಬ ವೃದ್ಧೆ ಮೃತಪಟ್ಟಿದ್ದರು. ಅವರ ಅಂತ್ಯಕ್ರಿಯೆ ನಡೆಸಲು ಇವೆರೆಲ್ಲರು ಸ್ಮಶಾನಕ್ಕೆ ತೆರಳಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ