ಆ್ಯಪ್ನಗರ

ದಲಿತರಿಗೆ ಬೌದ್ಧ ಧರ್ಮ ಸ್ವೀಕರಿಸಲು ಕರೆ ನೀಡಿದ ಕೇಂದ್ರ ಸಚಿವ

ಹಿಂದೂ ಧರ್ಮದಲ್ಲಿ ದಲಿತರಿಗೆ ನ್ಯಾಯ ಸಿಗುವ ಸಾಧ್ಯತೆ ಇಲ್ಲ ಎನ್ನುವುದನ್ನು ಅರಿತು ನಾನು ಬೌದ್ಧ ಧರ್ಮ ಸ್ವೀಕರಿಸಿದ್ದೇನೆ.

Vijaya Karnataka Web 14 Dec 2017, 12:11 pm
ಮುಂಬಯಿ: ಹಿಂದೂ ಧರ್ಮದಲ್ಲಿ ದಲಿತರಿಗೆ ನ್ಯಾಯ ಸಿಗುವ ಸಾಧ್ಯತೆ ಇಲ್ಲ ಎನ್ನುವುದನ್ನು ಅರಿತು ನಾನು ಬೌದ್ಧ ಧರ್ಮ ಸ್ವೀಕರಿಸಿದ್ದೇನೆ. ದಲಿತರೆಲ್ಲರೂ ಇದೇ ಮಾರ್ಗವನ್ನು ಅನುಸರಿಸಬೇಕು' ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ರಾಮದಾಸ್ ಅಠಾವಳೆ ಕರೆ ನೀಡಿದ್ದಾರೆ.
Vijaya Karnataka Web athawale asks dalits to turn to buddhism
ದಲಿತರಿಗೆ ಬೌದ್ಧ ಧರ್ಮ ಸ್ವೀಕರಿಸಲು ಕರೆ ನೀಡಿದ ಕೇಂದ್ರ ಸಚಿವ


ಬಾಬಾಸಾಹೇಬ್ ಅಂಬೇಡ್ಕರ್ ಅವರು ಕೂಡಾ ಹಿಂದೂ ಧರ್ಮದಲ್ಲಿ ಸಾಮಾಜಿಕ ನ್ಯಾಯ ಸಿಗುವುದಿಲ್ಲ ಎನ್ನುವುದನ್ನು ಅರಿತು ಬೌದ್ಧ ಧರ್ಮಕ್ಕೆ ಸೇರಿದರು. ಅವರಂತೆ ಲಕ್ಷಾಂತರ ದಲಿತರು ಸಹ ಅದೇ ಮಾರ್ಗವನ್ನು ಅನುಸರಿಸಿದರು' ಎಂದು ಅಠಾವಳೆ ಲಿಖಿತ ಹೇಳಿಕೆ ನೀಡಿದರು.

ಅಂಬೇಡ್ಕರ್ ಅವರು ಹಿಂದುತ್ವವಾದಿಗಳಿಗೆ ಕೆಲವು ಬದಲಾವಣೆ ಮಾಡಿಕೊಳ್ಳಲು ಅವಕಾಶ ನೀಡಿದ್ದರು. ಆದರೆ. ಅದು ಸಾಧ್ಯವಾಗದ ಕಾರಣ ಅವರು ಬೌದ್ಧ ಧರ್ಮ ಸ್ವೀಕರಿಸಿದರು. ದಲಿತರ ಮೇಲಿನ ದೌರ್ಜನ್ಯ ತಡೆಯಬೇಕಾದರೇ ಸಮುದಾಯದ ಜನ ಹಿಂದೂ ಧರ್ಮವನ್ನು ತ್ಯಜಿಸಿ, ಬೌದ್ದ ಧರ್ಮ ಸ್ವೀಕರಿಸಬೇಕು ಎಂದಿದ್ದಾರೆ.

'ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಪದೇ ಪದೇ ಎಚ್ಚರಿಕೆ ನೀಡುವ ಬದಲು ಬೌದ್ಧ ಧರ್ಮಕ್ಕೆ ಮಂತಾತರಗೊಳ್ಳಲಿ' ಎಂದು ರಾಮದಾಸ್ ಅಠಾವಳೆ ಸಲಹೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ