ಆ್ಯಪ್ನಗರ

ಅಯೋಧ್ಯೆ ಅಭಿವೃದ್ಧಿಗೆ 301 ಕೋಟಿ ರೂ. ಅನುದಾನ

ರಾಜ್ಯದ ಧಾರ್ಮಿಕ ಸ್ಥಳಗಳ ಅಭಿವೃದ್ಧಿ ಮತ್ತು ಸೌಂದರ್ಯಕರಣಕ್ಕೆ ವಿಶೇಷ ಗಮನ ನೀಡಲಾಗಿದ್ದು, ಅಯೋಧ್ಯೆ, ವಾರಣಾಸಿ, ಮಥುರಾ ಮತ್ತು ಪ್ರಯಾಗ್‌ರಾಜ್‌ ನಗರಗಳಿಗೆ ವಿಶೇಷ ಅನುದಾನ ಒದಗಿಸಲಾಗಿದೆ.

Vijaya Karnataka 8 Feb 2019, 5:00 am
ಲಖನೌ: ಉತ್ತರ ಪ್ರದೇಶ ರಾಜ್ಯ ಬಜೆಟ್‌ ಗುರುವಾರ ಮಂಡಿಸಲಾಗಿದ್ದು, ಅಯೋಧ್ಯೆಯ ಅಭಿವೃದ್ಧಿಗಾಗಿ ಬರೋಬ್ಬರಿ 301 ಕೋಟಿ ರೂ. ಮೀಸಲಿಡಲಾಗಿದೆ. ಇದರಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ 200 ಕೋಟಿ ರೂ. ಮತ್ತು ಅಯೋಧ್ಯೆ ನಗರದ ಪ್ರವಾಸಿ ತಾಣಗಳ ಅಭಿವೃದ್ಧಿಗಾಗಿ 101 ಕೋಟಿ ರೂ. ಮೀಸಲಿಡಲಾಗಿದೆ.
Vijaya Karnataka Web yogi 2


ಅಯೋಧ್ಯೆ ವಿವಾದ ಮುನ್ನೆಲೆಗೆ ಬಂದಿರುವ ಈ ಸಂದರ್ಭದಲ್ಲಿ ಮತ್ತು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಇದು ಹೆಚ್ಚಿನ ಮಹತ್ವ ಪಡೆದಿದೆ.

ಜತೆಗೆ ಗೋಶಾಲೆ ಸ್ಥಾಪನೆ ಹಾಗೂ ಬೀಡಾಡಿ ದನಗಳ ರಕ್ಷಣೆ 612 ಕೋಟಿ ರೂ. ಅನುದಾನ ನೀಡಲಾಗಿದೆ.

ರಾಜ್ಯದ ಧಾರ್ಮಿಕ ಸ್ಥಳಗಳ ಅಭಿವೃದ್ಧಿ ಮತ್ತು ಸೌಂದರ್ಯಕರಣಕ್ಕೆ ವಿಶೇಷ ಗಮನ ನೀಡಲಾಗಿದ್ದು, ಅಯೋಧ್ಯೆ, ವಾರಣಾಸಿ, ಮಥುರಾ ಮತ್ತು ಪ್ರಯಾಗ್‌ರಾಜ್‌ ನಗರಗಳಿಗೆ ವಿಶೇಷ ಅನುದಾನ ಒದಗಿಸಲಾಗಿದೆ.

ವಾರಣಾಸಿಯಲ್ಲಿ ಶ್ರೀ ಕಾಶಿ ವಿಶ್ವನಾಥ ಮಂದಿರ ವಿಸ್ತರಣೆ ಯೋಜನೆಯ ಅನುಷ್ಠಾನಕ್ಕಾಗಿ ಶ್ರೀ ಕಾಶಿ ವಿಶ್ವನಾಥ ವಿಶೇಷ ಪ್ರದೇಶ ಅಭಿವೃದ್ಧಿ ಮಂಡಳಿ ರಚಿಸಲಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ