ಆ್ಯಪ್ನಗರ

ರಾಮ ಎಲ್ಲರಲ್ಲೂ ಇದ್ದಾನೆ, ಅಯೋಧ್ಯೆ ಭೂಮಿಪೂಜೆ ಏಕತೆಗೆ ದಾರಿಯಾಗಲಿ: ಪ್ರಿಯಾಂಕಾ ಗಾಂಧಿ ಆಶಯ

ರಾಮ ಪ್ರತಿಯೊಬ್ಬರಲ್ಲೂ ಇದ್ದಾನೆ, ಎಲ್ಲರೊಂದಿಗೂ ಇದ್ದಾನೆ. ಅಯೋಧ್ಯೆಯಲ್ಲಿ ನಡೆಯಲಿರುವ ಭೂಮಿ ಪೂಜೆ ರಾಷ್ಟ್ರೀಯ ಏಕತೆ, ಭ್ರಾತೃತ್ವ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಗೆ ದಾರಿಯಾಗಲಿ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಹೇಳಿದ್ದಾರೆ.

Agencies 4 Aug 2020, 6:08 pm
ಹೊಸದಿಲ್ಲಿ: ಅಯೋಧ್ಯೆಯ ರಾಮ ಮಂದಿರದ ಐತಿಹಾಸಿಕ ಭೂಮಿ ಪೂಜೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ರಾಮ ಪ್ರತಿಯೊಬ್ಬರಲ್ಲೂ ಇದ್ದಾನೆ, ಎಲ್ಲರೊಂದಿಗೂ ಇದ್ದಾನೆ, ಅಯೋಧ್ಯೆಯಲ್ಲಿ ನಡೆಯಲಿರುವ ಭೂಮಿ ಪೂಜೆ ರಾಷ್ಟ್ರೀಯ ಏಕತೆ, ಭ್ರಾತೃತ್ವ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಗೆ ದಾರಿಯಾಗಲಿ ಎಂದು ಹೇಳಿದ್ದಾರೆ.
Vijaya Karnataka Web ayodhya ram mandir hope ayodhya ceremony becomes marker of national unity priyanka gandhi
ರಾಮ ಎಲ್ಲರಲ್ಲೂ ಇದ್ದಾನೆ, ಅಯೋಧ್ಯೆ ಭೂಮಿಪೂಜೆ ಏಕತೆಗೆ ದಾರಿಯಾಗಲಿ: ಪ್ರಿಯಾಂಕಾ ಗಾಂಧಿ ಆಶಯ


ಈ ಬಗ್ಗೆ ಟ್ವೀಟ್‌ ಮಾಡಿರುವ ಪ್ರಿಯಾಂಕಾ ಗಾಂಧಿ, ಸರಳತೆ, ಧೈರ್ಯ, ಸಂಯಮ, ತ್ಯಾಗ, ಬದ್ಧತೆ ಎಂಬುದು ಧೀನಬಂದು ರಾಮ ಎಂಬ ಹೆಸರಿನ ಮೂಲತತ್ವವಾಗಿದೆ. ರಾಮ ಎಲ್ಲರಲ್ಲೂ ಇದ್ದಾನೆ, ಎಲ್ಲರೊಂದಿಗೂ ಇದ್ದಾನೆ ಎಂದು ಹಿಂದಿಯಲ್ಲಿ ಹೇಳಿದ್ದಾರೆ.


ಅಯೋಧ್ಯೆ ಇರುವ ಉತ್ತರ ಪ್ರದೇಶದ ಕಾಂಗ್ರೆಸ್‌ ಉಸ್ತುವಾರಿಯಾಗಿರುವ ಪ್ರಿಯಾಂಕಾ ಗಾಂಧಿ, ರಾಮ ಮಂದಿರ ಭೂಮಿ ಪೂಜೆ ಸಮಾರಂಭ ರಾಷ್ಟ್ರೀಯ ಏಕತೆ, ಭ್ರಾತೃತ್ವ ಮತ್ತು ಸಾಂಸ್ಕೃತಿಕ ಶ್ರೀಮಂತಿಕೆಗೆ ದಾರಿಯಾಗಲಿ ಎಂದು ಆಶಿಸಿದ್ದಾರೆ. ಈ ಮೂಲಕ ವಿವಾದಿತ ರಾಮ ಮಂದಿರದ ವಿಷಯದಲ್ಲಿ ಕಾಂಗ್ರೆಸ್‌ ತನ್ನ ನಿಲುವನ್ನು ಬದಲಿಸಿದೆ ಎಂಬುದು ಸ್ಪಷ್ಟವಾಗಿದೆ.

ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಭವ್ಯ ರಾಮ ಮಂದಿರ ಹೇಗಿರಲಿದೆ..? Exclusive Photos‌
ಆಗಸ್ಟ್‌ 5ರಂದು ಅಯೋಧ್ಯೆಯಲ್ಲಿ ರಾಮ ಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೂಮಿ ಪೂಜೆ ನೆರವೇರಿಸಲಿದ್ದಾರೆ. ನೂರಕ್ಕೂ ಹೆಚ್ಚು ಜನ ಗಣ್ಯರು ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಕೊರೊನಾ ವೈರಸ್‌ ಕಾರಣಕ್ಕಾಗಿ ಕಟ್ಟುನಿಟ್ಟಿನ ಸಾಮಾಜಿಕ ಅಂತರ ಪಾಲನೆಗೆ ಉತ್ತರ ಪ್ರದೇಶ ಸರಕಾರ ಕ್ರಮ ಕೈಗೊಂಡಿದೆ. ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ ಸೇರಿ ಅನೇಕ ಗಣ್ಯರು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

ರಾಮ ಮಂದಿರ ಭೂಮಿ ಪೂಜೆಗೆ ಕ್ಷಣಗಣನೆ..! ಡಿಸೆಂಬರ್‌ 6, 1992ರಂದು ಅಯೋಧ್ಯೆಯಲ್ಲಿ ನಡೆದಿದ್ದೇನು..?

ದೇಶದಲ್ಲಿ ಕೊರೊನಾ ವೈರಸ್‌ ನಿಯಂತ್ರಣಕ್ಕೆ ಸಿಗುತ್ತಿಲ್ಲ. ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಅರ್ಚಕರಿಗೂ ಸೋಂಕು ಇರುವುದು ದೃಢಪಟ್ಟಿತ್ತು. ಗೃಹ ಸಚಿವ ಅಮಿತ್ ಶಾ ಅವರಿಗೂ ಸೋಂಕು ತಗುಲಿದೆ. ಇದೇ ಕಾರಣಕ್ಕೆ ಕಾಂಗ್ರೆಸ್ ನಾಯಕರು ಶಿಲಾನ್ಯಾಸ ಕಾರ್ಯಕ್ರಮವನ್ನು ಮುಂದೂಡುವತೆ ಕೇಂದ್ರಕ್ಕೆ ಮನವಿ ಮಾಡಿದ್ದರು.

ರಾಮ ಮಂದಿರ ಭೂಮಿ ಪೂಜೆಗೆ ದಿನಗಣನೆ; ಭದ್ರಕೋಟೆಯಾದ ಅಯೋಧ್ಯೆ..! ನಗರದಾದ್ಯಂತ ಡ್ರೋನ್‌ ಕಣ್ಗಾವಲು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ