ಅಯೋಧ್ಯೆ: ದೇಶವೇ ಕಾತುರದಿಂದ ಕಾಯುತ್ತಿರುವ ಬಹುನಿರೀಕ್ಷಿತ ರಾಮ ಮಂದಿರ ಭೂಮಿ ಪೂಜೆಗೆ ಕೊರೊನಾ ಕರಿನೆರಳು ಆವರಿಸಿದೆ. ರಾಮ ಮಂದಿರದಲ್ಲಿ ಕಾರ್ಯನಿರ್ವಹಿಸುತ್ತಿರುವ ಓರ್ವ ಪುರೋಹಿತ ಹಾಗೂ 14 ಪೊಲೀಸರಿಗೆ ಕೊರೊನಾ ವೈರಸ್ ದೃಢಪಟ್ಟಿದೆ. ಆಗಸ್ಟ್ 5 ರಂದು ನಡೆಯುವ ದೇಗುಲದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ಸೇರಿ 50 ಗಣ್ಯರು ಭಾಗವಹಿಸಲಿದ್ದು, ಮತ್ತಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಉತ್ತರ ಪ್ರದೇಶ ಸರಕಾರ ತೆಗೆದುಕೊಳ್ಳಲಿದೆ.
ಪ್ರಧಾನ ಅರ್ಚಕರ ಸಹಾಯಕ ಪ್ರದೀಪ್ ದಾಸ್ ತಮಗೆ ಕೊರೊನಾ ವೈರಸ್ ತಗುಲಿದೆ ಎಂದು ಹೇಳಿದ್ದಾರೆ. ಸದ್ಯದ ದೇಗುಲದ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಸೇರಿ ಇತರ ನಾಲ್ಕು ಅರ್ಚಕರಿಗೆ ಸೋಂಕು ಇಲ್ಲದಿರುವುದು ದೃಢಪಟ್ಟಿದೆ. ಪುರೋಹಿತರಿಗೆ ಹತ್ತಿರದಲ್ಲಿರುವ ಇತರ 12 ಜನರ ಕೊರೊನಾ ಪರೀಕ್ಷೆಯಲ್ಲೂ ಕೂಡ ನೆಗೆಟಿವ್ ವರದಿ ಬಂದಿದೆ.
ಇನ್ನು, ಪಾಸಿಟಿವ್ ಬಂದ 14 ಪೊಲೀಸರು ರಾಮ ಜನ್ಮಭೂಮಿ ಸಂಕೀರ್ಣದಲ್ಲಿ ಭದ್ರತಾ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ದೇವಾಲಯದ ಟ್ರಸ್ಟ್ ತಿಳಿಸಿದೆ. ಅವರಲ್ಲಿ ಒಂದಿಷ್ಟು ಜನ ಅಲ್ಲಿಯೇ ಶಾಶ್ವತವಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಒಂದಿಷ್ಟು ಜನ ಹೊರಗಡೆ ಕೆಲಸ ಮಾಡುತ್ತಿದ್ದರು. ಈಗ ಅವರನ್ನು ಜನ್ಮಭೂಮಿಯದ ಕೆಲಸಕ್ಕೆ ನಿಯೋಜಿಸಲಾಗಿತ್ತು ಎಂದು ಟ್ರಸ್ಟ್ ಹೇಳಿದೆ.
ಅಯೋಧ್ಯೆ ಸಮೀಪ ಬಾಬ್ರಿ ಮಸೀದಿ ನಿರ್ಮಾಣಕ್ಕೆ ಟ್ರಸ್ಟ್ ರಚಿಸಿದ ಯುಪಿ ಸುನ್ನಿ ವಕ್ಫ್ ಬೋರ್ಡ್!
ಕಳೆದ ಶನಿವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶಿಲಾನ್ಯಾಸ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಲು ರಾಮ ಜನ್ಮಭೂಮಿಗೆ ಭೇಟಿ ನೀಡಿದ್ದರು. ಆ ದಿನದ ಫೋಟೋಗಳು ಮತ್ತು ವಿಡಿಯೋಗಳನ್ನು ಗಮನಿಸಿದಾಗ ಕೊರೊನಾ ವೈರಸ್ ದೃಢಪಟ್ಟ ಪ್ರದೀಪ್ ದಾಸ್ ಮುಖ್ಯಮಂತ್ರಿಗಳ ಪಕ್ಕದಲ್ಲಿಯೇ ನಿಂತಿರುವುದು ಕಂಡುಬರುತ್ತದೆ. ಜೊತೆಗೆ ಭೂಮಿ ಪೂಜೆ ಸಮಾರಂಭದ ನೇತೃತ್ವ ವಹಿಸಲಿರುವ ರಾಮ ಜನ್ಮಭೂಮಿ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಕೂಡ ಪ್ರದೀಪ್ ದಾಸ್ ಪಕ್ಕದಲ್ಲಿ ನಿಂತಿದ್ದರು.
ಉಗ್ರರ ದಾಳಿ ಬೆದರಿಕೆ, ಭೂಮಿ ಪೂಜೆಗೂ ಮುನ್ನ ಭದ್ರಕೋಟೆಯಾದ ಅಯೋಧ್ಯೆ
ಕೊರೊನಾ ವೈರಸ್ ಏರುಗತಿಯಲ್ಲಿ ಸಾಗುತ್ತಿದ್ದರೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಆಗಸ್ಟ್ 5ರಂದು ರಾಮ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಟ್ರಸ್ಟ್ ಹೇಳಿದೆ. ಅಯೋಧ್ಯೆಯಲ್ಲಿಯೇ 375 ಸಕ್ರಿಯ ಕೊರೊನಾ ಪ್ರಕರಣಗಳಿದ್ದರೆ, ಉತ್ತರ ಪ್ರದೇಶದಲ್ಲಿ 29,997 ಪಾಸಿಟಿವ್ ಕೇಸ್ಗಳು ಇವೆ.
ಅಯೋಧ್ಯೆ ಮೇಲೆ ಉಗ್ರ ದಾಳಿ ಸಂಚು: ದಾಳಿಕೋರರಿಗೆ ಅಫ್ಘಾನಿಸ್ತಾನದಲ್ಲಿ ಐಎಸ್ಐ ತರಬೇತಿ!
ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಸುಮಾರು 200 ಜನ ಭಾಗವಹಿಸಲಿದ್ದಾರೆ ಎಂದು ಟ್ರಸ್ಟ್ ತಿಳಿಸಿದೆ. ಇದರಲ್ಲಿ ಪುರೋಹಿತರು, ಅತಿಥಿಗಳು, ಸ್ಥಳೀಯರು ಹಾಗೂ ಪೊಲೀಸ್ ಭದ್ರತಾ ಸಿಬ್ಬಂದಿ ಇರಲಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಎಲ್ಲ ಸಿದ್ಧತೆ ಭರದಿಂದ ಸಾಗಿದ್ದು, ಪ್ರಧಾನಿ ಸೇರಿ ಗಣ್ಯಾತಿಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದರಿಂದ ಈಗಾಗಲೇ ಹೈ ಅಲರ್ಟ್ ಕೂಡ ಘೋಷಿಸಲಾಗಿದೆ.
ಪ್ರಧಾನ ಅರ್ಚಕರ ಸಹಾಯಕ ಪ್ರದೀಪ್ ದಾಸ್ ತಮಗೆ ಕೊರೊನಾ ವೈರಸ್ ತಗುಲಿದೆ ಎಂದು ಹೇಳಿದ್ದಾರೆ. ಸದ್ಯದ ದೇಗುಲದ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಸೇರಿ ಇತರ ನಾಲ್ಕು ಅರ್ಚಕರಿಗೆ ಸೋಂಕು ಇಲ್ಲದಿರುವುದು ದೃಢಪಟ್ಟಿದೆ. ಪುರೋಹಿತರಿಗೆ ಹತ್ತಿರದಲ್ಲಿರುವ ಇತರ 12 ಜನರ ಕೊರೊನಾ ಪರೀಕ್ಷೆಯಲ್ಲೂ ಕೂಡ ನೆಗೆಟಿವ್ ವರದಿ ಬಂದಿದೆ.
ಇನ್ನು, ಪಾಸಿಟಿವ್ ಬಂದ 14 ಪೊಲೀಸರು ರಾಮ ಜನ್ಮಭೂಮಿ ಸಂಕೀರ್ಣದಲ್ಲಿ ಭದ್ರತಾ ಕರ್ತವ್ಯ ನಿರ್ವಹಿಸುತ್ತಿದ್ದರು ಎಂದು ದೇವಾಲಯದ ಟ್ರಸ್ಟ್ ತಿಳಿಸಿದೆ. ಅವರಲ್ಲಿ ಒಂದಿಷ್ಟು ಜನ ಅಲ್ಲಿಯೇ ಶಾಶ್ವತವಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಒಂದಿಷ್ಟು ಜನ ಹೊರಗಡೆ ಕೆಲಸ ಮಾಡುತ್ತಿದ್ದರು. ಈಗ ಅವರನ್ನು ಜನ್ಮಭೂಮಿಯದ ಕೆಲಸಕ್ಕೆ ನಿಯೋಜಿಸಲಾಗಿತ್ತು ಎಂದು ಟ್ರಸ್ಟ್ ಹೇಳಿದೆ.
ಅಯೋಧ್ಯೆ ಸಮೀಪ ಬಾಬ್ರಿ ಮಸೀದಿ ನಿರ್ಮಾಣಕ್ಕೆ ಟ್ರಸ್ಟ್ ರಚಿಸಿದ ಯುಪಿ ಸುನ್ನಿ ವಕ್ಫ್ ಬೋರ್ಡ್!
ಕಳೆದ ಶನಿವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶಿಲಾನ್ಯಾಸ ಕಾರ್ಯಕ್ರಮದ ಸಿದ್ಧತೆ ಪರಿಶೀಲಿಸಲು ರಾಮ ಜನ್ಮಭೂಮಿಗೆ ಭೇಟಿ ನೀಡಿದ್ದರು. ಆ ದಿನದ ಫೋಟೋಗಳು ಮತ್ತು ವಿಡಿಯೋಗಳನ್ನು ಗಮನಿಸಿದಾಗ ಕೊರೊನಾ ವೈರಸ್ ದೃಢಪಟ್ಟ ಪ್ರದೀಪ್ ದಾಸ್ ಮುಖ್ಯಮಂತ್ರಿಗಳ ಪಕ್ಕದಲ್ಲಿಯೇ ನಿಂತಿರುವುದು ಕಂಡುಬರುತ್ತದೆ. ಜೊತೆಗೆ ಭೂಮಿ ಪೂಜೆ ಸಮಾರಂಭದ ನೇತೃತ್ವ ವಹಿಸಲಿರುವ ರಾಮ ಜನ್ಮಭೂಮಿ ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಕೂಡ ಪ್ರದೀಪ್ ದಾಸ್ ಪಕ್ಕದಲ್ಲಿ ನಿಂತಿದ್ದರು.
ಉಗ್ರರ ದಾಳಿ ಬೆದರಿಕೆ, ಭೂಮಿ ಪೂಜೆಗೂ ಮುನ್ನ ಭದ್ರಕೋಟೆಯಾದ ಅಯೋಧ್ಯೆ
ಕೊರೊನಾ ವೈರಸ್ ಏರುಗತಿಯಲ್ಲಿ ಸಾಗುತ್ತಿದ್ದರೂ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಆಗಸ್ಟ್ 5ರಂದು ರಾಮ ಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಟ್ರಸ್ಟ್ ಹೇಳಿದೆ. ಅಯೋಧ್ಯೆಯಲ್ಲಿಯೇ 375 ಸಕ್ರಿಯ ಕೊರೊನಾ ಪ್ರಕರಣಗಳಿದ್ದರೆ, ಉತ್ತರ ಪ್ರದೇಶದಲ್ಲಿ 29,997 ಪಾಸಿಟಿವ್ ಕೇಸ್ಗಳು ಇವೆ.
ಅಯೋಧ್ಯೆ ಮೇಲೆ ಉಗ್ರ ದಾಳಿ ಸಂಚು: ದಾಳಿಕೋರರಿಗೆ ಅಫ್ಘಾನಿಸ್ತಾನದಲ್ಲಿ ಐಎಸ್ಐ ತರಬೇತಿ!
ರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಸುಮಾರು 200 ಜನ ಭಾಗವಹಿಸಲಿದ್ದಾರೆ ಎಂದು ಟ್ರಸ್ಟ್ ತಿಳಿಸಿದೆ. ಇದರಲ್ಲಿ ಪುರೋಹಿತರು, ಅತಿಥಿಗಳು, ಸ್ಥಳೀಯರು ಹಾಗೂ ಪೊಲೀಸ್ ಭದ್ರತಾ ಸಿಬ್ಬಂದಿ ಇರಲಿದ್ದಾರೆ ಎಂದು ಹೇಳಲಾಗಿದೆ. ಈಗಾಗಲೇ ಎಲ್ಲ ಸಿದ್ಧತೆ ಭರದಿಂದ ಸಾಗಿದ್ದು, ಪ್ರಧಾನಿ ಸೇರಿ ಗಣ್ಯಾತಿಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದರಿಂದ ಈಗಾಗಲೇ ಹೈ ಅಲರ್ಟ್ ಕೂಡ ಘೋಷಿಸಲಾಗಿದೆ.