ರಾಮ ಜನ್ಮಭೂಮಿ ಟ್ರಸ್ಟ್ಗೆ ಬಂತು 100 ಕೋಟಿ ರೂ. ದೇಣಿಗೆ..! ಅ.17ರಿಂದ ಮಂದಿರ ನಿರ್ಮಾಣ ಕಾರ್ಯ ಆರಂಭ
ಅಯೋಧ್ಯೆಯ ಐತಿಹಾಸಿಕ ರಾಮ ಮಂದಿರ ನಿರ್ಮಾಣದ ಹೊಣೆ ಹೊತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ಇದುವರೆಗೂ 100 ಕೋಟಿ ರೂ. ದೇಣಿಗೆ ಹರಿದು ಬಂದಿದೆ. ಅಕ್ಟೋಬರ್ 17ರಿಂದ ಮಂದಿರ ನಿರ್ಮಾಣದ ಕಾರ್ಯ ಆರಂಭವಾಗಲಿದೆ.
Agencies 4 Oct 2020, 8:44 pm
ಅಯೋಧ್ಯೆ: ಐತಿಹಾಸಿಕ ರಾಮ ಮಂದಿರ ನಿರ್ಮಾಣದ ಹೊಣೆ ಹೊತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ಇದುವರೆಗೂ 100 ಕೋಟಿ ರೂ. ದೇಣಿಗೆ ಹರಿದು ಬಂದಿದ್ದು, ಅಕ್ಟೋಬರ್ 17ರಿಂದ ಮಂದಿರ ನಿರ್ಮಾಣದ ಕಾರ್ಯ ಆರಂಭವಾಗಲಿದೆ. ನವರಾತ್ರಿಯ ಮೊದಲ ದಿನ ಮಂದಿರದ ಅಡಿಪಾಯದ ಕಂಬಗಳನ್ನು ಹಾಕುವುದರೊಂದಿಗೆ ಭವ್ಯ ದೇಗುಲದ ನಿರ್ಮಾಣ ಆರಂಭವಾಗಲಿದೆ ಎಂದು ಮೂಲಗಳು ತಿಳಿಸಿವೆ.
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80 ಜಿ ಅಡಿಯಲ್ಲಿ ದೇಣಿಗೆಗೆ ತೆರಿಗೆ ವಿನಾಯಿತಿಯನ್ನು ನೀಡಿರುವುದು ಕೂಡ ದೇಣಿಗೆ ಹೆಚ್ಚಾಗಿ ಹರಿದುಬರಲು ಕಾರಣವಾಗಿದೆ. ಈ ಸೆಕ್ಷನ್ ದತ್ತಿ ಸಂಸ್ಥೆಗಳ ಕೆಲವು ಪರಿಹಾರ ನಿಧಿಗಳಿಗೆ ನೀಡಿದ ದೇಣಿಗೆಗಳ ಮೇಲೆ ತೆರಿಗೆ ವಿನಾಯಿತಿಯನ್ನು ನೀಡುತ್ತದೆ.
ಅಯೋಧ್ಯೆಯ ರಾಮ ಮಂದಿರ ಐತಿಹಾಸಿಕ ಪ್ರಾಮುಖ್ಯತೆಯ ಸ್ಥಳ ಮತ್ತು ಸಾರ್ವಜನಿಕ ಪ್ರಾರ್ಥನಾ ಸ್ಥಳವಾಗಿರುತ್ತದೆ ಎಂಬ ಕಾರಣಕ್ಕೆ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ಆದಾಯ ತೆರಿಗೆ ವಿನಾಯಿತಿಗಳನ್ನು ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ನೀಡಿದೆ.
ಮೊಘಲರಿಂದ ಮೋದಿವರೆಗೆ!: ಅಯೋಧ್ಯೆ-ಬಾಬರಿ ಮಸೀದಿಯ ವಿವಾದದ ಸಿಂಹಾವಲೋಕನ
ಅಯೋಧ್ಯೆಯಲ್ಲಿ ರಾಮ ದೇವಾಲಯದ ನಿರ್ಮಾಣಕ್ಕಾಗಿ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಚಿಸಲಾಗಿದೆ. ನವೆಂಬರ್ 9ರಂದು ಸುಪ್ರೀಂ ಕೋರ್ಟ್ ರಾಮ ಜನ್ಮಭೂಮಿ - ಬಾಬರಿ ಮಸೀದಿ ಪ್ರಕರಣ ಇತ್ಯರ್ಥಪಡಿಸಿದ ನಂತರ 15 ಸದಸ್ಯರ ಟ್ರಸ್ಟ್ ಅನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ರಚಿಸಿತು.
ಅಯೋಧ್ಯೆ ಭೂಮಿ ಪೂಜೆ ಬೆನ್ನಲ್ಲಿಯೇ ಮಥುರಾ ಕೃಷ್ಣ ಜನ್ಮಭೂಮಿ ವಿಮೋಚನೆಗೆ ಟ್ರಸ್ಟ್ ಸ್ಥಾಪನೆ
ಟ್ರಸ್ಟ್ಗೆ ನಿತ್ಯ ಗೋಪಾಲ್ ದಾಸ್ ಅವರು ಅಧ್ಯಕ್ಷರಾಗಿದ್ದರೆ, ಪ್ರಧಾನಿ ನರೇಂದ್ರ ಮೋದಿಯವರ ಮಾಜಿ ಪ್ರಧಾನ ಕಾರ್ಯದರ್ಶಿ ನೃಪೇಂದ್ರ ಮಿಶ್ರಾ ಅವರನ್ನು ಅಯೋಧ್ಯೆಯ ಐತಿಹಾಸಿಕೆ ರಾಮ ಮಂದಿರದ ನಿರ್ಮಾಣ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.
ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 80 ಜಿ ಅಡಿಯಲ್ಲಿ ದೇಣಿಗೆಗೆ ತೆರಿಗೆ ವಿನಾಯಿತಿಯನ್ನು ನೀಡಿರುವುದು ಕೂಡ ದೇಣಿಗೆ ಹೆಚ್ಚಾಗಿ ಹರಿದುಬರಲು ಕಾರಣವಾಗಿದೆ. ಈ ಸೆಕ್ಷನ್ ದತ್ತಿ ಸಂಸ್ಥೆಗಳ ಕೆಲವು ಪರಿಹಾರ ನಿಧಿಗಳಿಗೆ ನೀಡಿದ ದೇಣಿಗೆಗಳ ಮೇಲೆ ತೆರಿಗೆ ವಿನಾಯಿತಿಯನ್ನು ನೀಡುತ್ತದೆ.
ಅಯೋಧ್ಯೆಯ ರಾಮ ಮಂದಿರ ಐತಿಹಾಸಿಕ ಪ್ರಾಮುಖ್ಯತೆಯ ಸ್ಥಳ ಮತ್ತು ಸಾರ್ವಜನಿಕ ಪ್ರಾರ್ಥನಾ ಸ್ಥಳವಾಗಿರುತ್ತದೆ ಎಂಬ ಕಾರಣಕ್ಕೆ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ಆದಾಯ ತೆರಿಗೆ ವಿನಾಯಿತಿಗಳನ್ನು ಕೇಂದ್ರ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ನೀಡಿದೆ.
ಮೊಘಲರಿಂದ ಮೋದಿವರೆಗೆ!: ಅಯೋಧ್ಯೆ-ಬಾಬರಿ ಮಸೀದಿಯ ವಿವಾದದ ಸಿಂಹಾವಲೋಕನ
ಅಯೋಧ್ಯೆಯಲ್ಲಿ ರಾಮ ದೇವಾಲಯದ ನಿರ್ಮಾಣಕ್ಕಾಗಿ ರಾಮ್ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ರಚಿಸಲಾಗಿದೆ. ನವೆಂಬರ್ 9ರಂದು ಸುಪ್ರೀಂ ಕೋರ್ಟ್ ರಾಮ ಜನ್ಮಭೂಮಿ - ಬಾಬರಿ ಮಸೀದಿ ಪ್ರಕರಣ ಇತ್ಯರ್ಥಪಡಿಸಿದ ನಂತರ 15 ಸದಸ್ಯರ ಟ್ರಸ್ಟ್ ಅನ್ನು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರ ರಚಿಸಿತು.
ಅಯೋಧ್ಯೆ ಭೂಮಿ ಪೂಜೆ ಬೆನ್ನಲ್ಲಿಯೇ ಮಥುರಾ ಕೃಷ್ಣ ಜನ್ಮಭೂಮಿ ವಿಮೋಚನೆಗೆ ಟ್ರಸ್ಟ್ ಸ್ಥಾಪನೆ
ಟ್ರಸ್ಟ್ಗೆ ನಿತ್ಯ ಗೋಪಾಲ್ ದಾಸ್ ಅವರು ಅಧ್ಯಕ್ಷರಾಗಿದ್ದರೆ, ಪ್ರಧಾನಿ ನರೇಂದ್ರ ಮೋದಿಯವರ ಮಾಜಿ ಪ್ರಧಾನ ಕಾರ್ಯದರ್ಶಿ ನೃಪೇಂದ್ರ ಮಿಶ್ರಾ ಅವರನ್ನು ಅಯೋಧ್ಯೆಯ ಐತಿಹಾಸಿಕೆ ರಾಮ ಮಂದಿರದ ನಿರ್ಮಾಣ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ.