ಆ್ಯಪ್ನಗರ

ಸುಪ್ರೀಂನಲ್ಲಿ ‘ಅಯೋಧ್ಯಾ’ಕಾಂಡ 18ನೇ ಅಧ್ಯಾಯ: ಮುಸ್ಲಿಮರ ಪರ ವಾದಿಸಿದ್ರೆ ಹುಷಾರ್ ಎಂದವರಿಗೆ ಶಾಕ್!

ಅಯೋಧ್ಯೆಯ ರಾಮಜನ್ಮಭೂಮಿ-ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿ ಸುನ್ನಿ ವಕ್ಫ್ ಬೋರ್ಡ್ ಹಾಗೂ ಇನ್ನಿತರ ಮುಸ್ಲಿಂ ಪ್ರತಿನಿಧಿಗಳ ಪರ ವಾದಿಸ್ತಿದ್ದ ಹಿರಿಯ ವಕೀಲರಿಗೆ ಬೆದರಿಕೆ ಕರೆ ಬಂದಿದೆ. ಈ ಬಗ್ಗೆ ಪ್ರಸ್ತಾಪಿಸಿದ ನ್ಯಾಯಾಲಯ, ಬೆದರಿಕೆ ಹಾಕಿದವರಿಗೆ ಬಿಸಿ ಮುಟ್ಟಿಸಿದೆ.

TIMESOFINDIA.COM 3 Sep 2019, 11:40 am
ಹೊಸ ದಿಲ್ಲಿ: ಅಯೋಧ್ಯಾ ರಾಮಜನ್ಮಭೂಮಿ ಹಾಗೂ ಬಾಬ್ರಿ ಮಸೀದಿ ವಿವಾದದ ವಿಚಾರಣೆ, ಸುಪ್ರೀಂ ಕೋರ್ಟ್ ನಲ್ಲಿ ಪುನಾರಂಭವಾಗಿದೆ. ವಿಚಾರಣೆಯ 18ನೇ ದಿನವಾದ ಇಂದು, ಸುನ್ನಿ ವಕ್ಫ್ ಬೋರ್ಡ್ ಹಾಗೂ ಇನ್ನಿತರ ಮುಸ್ಲಿಂ ಅರ್ಜಿದಾರರ ಪರ ವಕೀಲ ರಾಜೀವ್ ಧವನ್, ತಮಗೆ ಬಂದಿರುವ ಬೆದರಿಕೆ ಕರೆಯ ಬಗ್ಗೆ ನ್ಯಾಯಾಲಯದ ಗಮನ ಸೆಳೆದರು. ಹಿರಿಯ ವಕೀಲರಾದ ರಾಜೀವ್ ಧವನ್ ಅವರಿಗೆ, ಅಯೋಧ್ಯಾ ವಿವಾದ ಸಂಬಂಧ ಮುಸ್ಲಿಮರ ಪರ ವಾದ ಮಾಡದಂತೆ ಇಬ್ಬರು ವ್ಯಕ್ತಿಗಳು ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಕೇಸ್ ದಾಖಲಿಸಿಕೊಂಡಿರುವ ಸುಪ್ರೀಂ ಕೋರ್ಟ್ ಇನ್ನೆರಡು ವಾರ ಬಳಿಕ ವಿಚಾರಣೆ ನಡೆಸೋದಾಗಿ ಹೇಳಿದೆ.
Vijaya Karnataka Web ayodhya supreme


ಶಿಕ್ಷಣ ಇಲಾಖೆ ನಿವೃತ್ತ ಅಧಿಕಾರಿ ಎನ್. ಷಣ್ಮುಗಂ ಹಾಗೂ ರಾಜಸ್ತಾನ ನಿವಾಸಿ ಸಂಜಯ್ ಕಲಾಲ್ ಬಜರಂಗಿ ಎಂಬುವರ ಹೆಸರನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿರುವ ಅರ್ಜಿಯಲ್ಲಿ ಧವನ್ ಪ್ರಸ್ತಾಪಿಸಿದ್ದಾರೆ.

ಹಿರಿಯ ವಕೀಲ ರಾಜೀವ್ ಧವನ್ ಅವರಿಗೆ ಬಂದಿರುವ ಬೆದರಿಕೆಯನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಸಾರಥ್ಯದ ಪಂಚ ಸದಸ್ಯ ಪೀಠ, ಧವನ್ ಅವರಿಗೆ ಬಂದಿರುವ ಬೆದರಿಕೆ ಕರೆಯ ಅರ್ಜಿ ವಿಚಾರಣೆಯನ್ನೂ ನಡೆಸುವ ಸಾಧ್ಯತೆ ಇದೆ.

ಬಾಬರಿ ಮಸೀದಿಯಿದ್ದ ಜಾಗದಲ್ಲಿ ರಾಮ ಮಂದಿರವಿತ್ತೆಂದು ಒಪ್ಪಿಕೊಂಡ ವಕ್ಫ್‌ ಮಂಡಳಿ ಅಧ್ಯಕ್ಷ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ